ಟಾಲಿವುಡ್‌ನಲ್ಲಿ 20 ವರ್ಷ ಪೂರೈಸಿದ ಅಲ್ಲು ಅರ್ಜುನ್‌

Date:

  • ಸದ್ಯ ‘ಪುಷ್ಪ-2’ ಚಿತ್ರದಲ್ಲಿ ಬ್ಯುಸಿಯಾಗಿರುವ ಅಲ್ಲು ಅರ್ಜುನ್‌
  • ‘ಗಂಗೋತ್ರಿ’ ಚಿತ್ರದ ಮೂಲಕ ನಾಯಕ ನಟನಾಗಿ ಬೆಳ್ಳಿ ತೆರೆ ಪ್ರವೇಶ

ಸ್ಟಾರ್‌ ನಟ ಅಲ್ಲು ಅರ್ಜುನ್‌ ಮಾರ್ಚ್‌ 28ಕ್ಕೆ ತೆಲುಗು ಚಿತ್ರರಂಗವನ್ನು ಪ್ರವೇಶಿಸಿ 20 ವರ್ಷಗಳು ಸಂದಿವೆ. ಚಿತ್ರರಂಗದಲ್ಲಿ ಬರೋಬ್ಬರಿ ಎರಡು ದಶಕಗಳನ್ನು ಪೂರೈಸಿರುವ ನಟನಿಗೆ ಅಭಿಮಾನಿಗಳು ಮತ್ತು ಭಾರತೀಯ ಚಿತ್ರರಂಗದ ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

ಟಾಲಿವುಡ್‌ನಲ್ಲಿ ಎರಡು ದಶಕಗಳನ್ನು ಪೂರೈಸಿದ ಸಂಭ್ರಮದಲ್ಲಿರುವ ಅಲ್ಲು ಅರ್ಜುನ್‌ ಟ್ವೀಟ್‌ ಮೂಲಕ ಸಂತಸ ವ್ಯಕ್ತಪಡಿಸಿದ್ದು, “ಇಂದಿಗೆ ಚಿತ್ರರಂಗದಲ್ಲಿ 20 ವರ್ಷಗಳ ಪೂರೈಸಿದ್ದೇನೆ. ಈ ಸುದೀರ್ಘ ಪಯಣದಲ್ಲಿ ನನ್ನನ್ನು ಹರಸಿದ, ಪ್ರೀತಿ ತೋರಿದ ಚಿತ್ರರಂಗದ ಎಲ್ಲ ಆಪ್ತರಿಗೆ ನಾನು ಋಣಿ. ನಾನು ಇವತ್ತಿಗೆ ಏನೇ ಆಗಿದ್ದರೂ ಅದಕ್ಕೆ ನನ್ನ ಅಭಿಮಾನಿಗಳು ಮತ್ತು ಸಿನಿಮಾ ಪ್ರೇಮಿಗಳೇ ಕಾರಣ, ಅವರೆಲ್ಲರಿಗೂ ಕೃತಜ್ಞನಾಗಿರುತ್ತೇನೆ” ಎಂದಿದ್ದಾರೆ.

1985ರಲ್ಲಿ ಮೆಗಾಸ್ಟಾರ್‌ ಚಿರಂಜೀವಿ ಮುಖ್ಯಭೂಮಿಕೆಯಲ್ಲಿ ತೆರೆಕಂಡ ʼವಿಜೇತʼ ಚಿತ್ರದಲ್ಲಿ ಬಾಲ ನಟನಾಗಿ ಕಾಣಿಸಿಕೊಂಡಿದ್ದ ಅಲ್ಲು, 2003ರ ಮಾರ್ಚ್‌ 28ರಂದು ಕೆ ರಾಘವೇಂದ್ರ ನಿರ್ದೇಶನದಲ್ಲಿ ತೆರೆಕಂಡ ʼಗಂಗೋತ್ರಿʼ ಚಿತ್ರದಲ್ಲಿ ನಾಯಕನ ಪಾತ್ರಕ್ಕೆ ಬಣ್ಣ ಹಚ್ಚುವ ಮೂಲಕ ಪೂರ್ಣ ಪ್ರಮಾಣದ ನಟನಾಗಿ ಬೆಳ್ಳಿತೆರೆ ಪ್ರವೇಶಿಸಿದರು. ಚೊಚ್ಚಲ ಚಿತ್ರದಲ್ಲಿ ಅಲ್ಲುಗೆ ನಟಿ ಅದಿತಿ ಅಗರ್‌ವಾಲ್‌ ಜೊತೆಯಾಗಿ ಕಾಣಿಸಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯ ಬಂಧನ

ʼಗಂಗೋತ್ರಿʼ ಬಳಿಕ ಅವರು ನಟಿಸಿದ ʼಆರ್ಯಾʼ, ʼಬನ್ನಿʼ, ʼಹ್ಯಾಪ್ಪಿʼ, ʼದೇಶಮುದುರುʼ ಚಿತ್ರಗಳು ಸೂಪರ್‌ ಹಿಟ್‌ ಆದವು. ನೋಡು ನೋಡುತ್ತಲೇ ಸ್ಟಾರ್‌ ನಟನಾಗಿ ಬೆಳೆದ ಅಲ್ಲು ಅರ್ಜುನ್‌ ಕಳೆದ 2 ದಶಕಗಳಲ್ಲಿ 21ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದು, ʼಎವುಡುʼ, ʼರೇಸ್‌ ಗುರ್ರಂʼ, ʼಸರೈನೋಡುʼ, ಅಲಾ ʼವೈಕುಂಟಪುರಮ್ಲೋʼ ಸೇರಿದಂತೆ ಬಹುಪಾಲು ಚಿತ್ರಗಳು ಯಶಸ್ಸು ಕಂಡಿವೆ. 2021ರಲ್ಲಿ ತೆರೆಕಂಡಿದ್ದ ʼಪುಷ್ಪʼ ಸಿನಿಮಾ ಅವರಿಗೆ ಪ್ಯಾನ್‌ ಇಂಡಿಯಾ ಸ್ಟಾರ್‌ ಪಟ್ಟ ತಂದುಕೊಟ್ಟಿತ್ತು. ಸದ್ಯ ಅಲ್ಲು ʼಪುಷ್ಫ-2ʼ ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...