ಕೋಟಿ ಭುಜಗಳ ಶಕ್ತಿ ಸೂಲಿಬೆಲೆ ಬೆನ್ನಿಗಿದೆ : ನಟ ಜಗ್ಗೇಶ್‌

Date:

  • ಎಚ್ಚರಿಕೆ ನೀಡಿದ ಬಳಿಕವೂ ವಿವಾದಾತ್ಮಕ ಹೇಳಿಕೆ ನೀಡಿದ ಸೂಲಿಬೆಲೆ
  • ಸಿಎಂ ಸಿದ್ದರಾಮಯ್ಯ ಹಿಟ್ಲರ್‌ ವಂಶಸ್ಥರು ಎಂದ ಬಿಜೆಪಿ ಬೆಂಬಲಿಗ

ಕೋಮು ಭಾವನೆಯ ಹೆಸರಲ್ಲಿ ನಾಟಕವಾಡಿದರೆ ಸೂಲಿಬೆಲೆ ಕಂಬಿ ಎಣಿಸಬೇಕಾಗುತ್ತದೆ ಎಂಬ ಸಚಿವ ಎಂ.ಬಿ ಪಾಟೀಲ್‌ ಅವರ ಹೇಳಿಕೆಗೆ ಸ್ಯಾಂಡಲ್‌ವುಡ್‌ನ ಹಿರಿಯ ನಟ, ಬಿಜೆಪಿಯ ರಾಜ್ಯಸಭಾ ಸಂಸದ ಜಗ್ಗೇಶ್‌ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಜಗ್ಗೇಶ್‌, “ಸೂಲಿಬೆಲೆ ಅವರು ಯಾವ ಅಧಿಕಾರದ ಹಿಂದೆ ಹೋಗದೆ ಸಾಂಸ್ಕೃತಿಕ ತತ್ವ, ವಿಚಾರ, ಕೆರೆಕಟ್ಟೆ ಪುನರುಜ್ಜೀವನ, ಪ್ರವಚನದಂತಹ ಸಾತ್ವಿಕ ಚಿಂತಕ. ಅವರನ್ನು ಜೈಲಿಗೆ ಹಾಕುವೆ ಎಂದರೆ, ಅಲ್ಲಿಗೆ ಗೆದ್ದು ತಿಂಗಳಿಗೆ ಈ ಮಾತು ಸನ್ಮಾನ್ಯ ಎಂ.ಬಿ ಪಾಟೀಲ್ ಬಾಯಲ್ಲಿ! ಮಾನ್ಯರೆ ಕಾನೂನು ನಿಮ್ಮ ಜೇಬಲ್ಲಿ ಇದೆಯಾ?ಕೋಟಿ ಸಂಖ್ಯೆಯ ಭುಜಕೊಡುವ ಶಕ್ತಿ ಜೀವಂತವಿದೆ ಅವರ ಬೆನ್ನಿಗೆ!” ಎಂದಿದ್ದಾರೆ.

ಭಾನುವಾರ ವಿಜಯಪುರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ್ದ ಎಂ.ಬಿ ಪಾಟೀಲ್‌, “ಈ ಹಿಂದೆ ನಾಲ್ಕು ವರ್ಷ ಸೂಲಿಬೆಲೆ ಏನು ಅನಾಹುತ ಮಾಡಿದ್ದಾರೆ ಅಂತ ಕೇಳಿ. ಸೂಲಿಬೆಲೆ ಮಾಡಿದ ಅನಾಹುತಗಳನ್ನು ನಾವು ಸರಿಪಡಿಸುತ್ತಿದ್ದೇವೆ. ಪಠ್ಯಪುಸ್ತಕ, ಹಿಜಾಬ್, ಹಲಾಲ್, ಆಜಾನ್ ಅಂತೇಳಿ ಬಹಳ ನಾಟಕ ಮಾಡಿದ್ದಾರೆ. ಇನ್ಮುಂದೆ ಇಂಥ ನಾಟಕ ಮಾಡಿದ್ರೆ ಸೂಲಿಬೆಲೆಗೆ ಜೈಲು ಗ್ಯಾರಂಟಿ” ಎಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೋಮು ಭಾವನೆ ಹೆಸರಲ್ಲಿ ‘ಸೂಲಿಬೆಲೆ’ ನಾಟಕ ಮಾಡಿದರೆ ಜೈಲು ಗ್ಯಾರಂಟಿ: ಎಂ ಬಿ ಪಾಟೀಲ

ಎಂ.ಬಿ ಪಾಟೀಲ್‌ ಅವರು ಚಕ್ರವರ್ತಿ ಸೂಲಿಬೆಲೆ ಮೇಲೆ ಕ್ರಮ ಕೈಗೊಳ್ಳುವ ಬಗ್ಗೆ ಮಾತನಾಡಿರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಸೂಲಿಬೆಲೆ ಕೂಡ ಸಚಿವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದು, “ಸಿದ್ದರಾಮಯ್ಯನವರ ಸರ್ಕಾರ ರಾಷ್ಟ್ರೀಯತೆಯ ಮಾತನಾಡುವವರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಸಿದ್ದರಾಮಯ್ಯನವರು ಹಿಟ್ಲರ್‌ ವಂಶಸ್ಥರು” ಎಂದು ವಿವಾದಾತ್ಮಕ ಹೇಳಿಕ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...