ಈ ದಿನ ಎಕ್ಸ್‌ಕ್ಲ್ಯೂಸಿವ್‌ | ವೀಸಾ ರದ್ಧತಿ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಲು ಸಜ್ಜಾದ ನಟ ಚೇತನ್‌

Date:

ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಕುಮಾರ್‌ ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ ಎಂದು ಆರೋಪಿಸಿ ಕೇಂದ್ರ ಗೃಹ ಸಚಿವಾಲಯ ಅವರ ವೀಸಾ ರದ್ದುಗೊಳಿಸಿದೆ. ಈ ಬಗ್ಗೆ ಕಾನೂನು ಹೋರಾಟ ಮಾಡುವುದಾಗಿ ಹೇಳಿದ್ದ ಚೇತನ್‌ ಇದೀಗ ಹೈಕೋರ್ಟ್‌ ಮೊರೆ ಹೋಗಲು ಸಜ್ಜಾಗಿದ್ದು, ತಮ್ಮ ಮುಂದಿನ ನಡೆಯ ಬಗ್ಗೆ ಈದಿನ.ಕಾಮ್‌ ಜೊತೆಗೆ ಮಾತನಾಡಿದ್ದಾರೆ. ಕೇಂದ್ರದಿಂದ ತಮಗೆ ಬಂದ ಆದೇಶ ಪತ್ರದ ಪ್ರತಿಯನ್ನು ಕೂಡ ಹಂಚಿಕೊಂಡಿದ್ದಾರೆ.

ನಿಮ್ಮ ವೀಸಾ ರದ್ದಾಗಲು ಕಾರಣವೇನು?

ಕೇಂದ್ರ ಸರ್ಕಾರ ನನ್ನ ವೀಸಾವನ್ನು ರದ್ದು ಮಾಡಲು ಅಸಲಿ ಕಾರಣ ಏನು ಎಂಬುದು ನನಗೆ ಕೂಡ ತಿಳಿದಿಲ್ಲ. ಅಂಬೇಡ್ಕರ್‌ ಜಯಂತಿ ದಿನದಂದೇ ವೀಸಾ ರದ್ದು ಮಾಡಿರುವ ನೋಟಿಸ್‌ ನನ್ನ ಕೈ ಸೇರಿದ್ದು ನಿಜಕ್ಕೂ ವಿಪರ್ಯಾಸ. ಸಾಮಾಜಿಕ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ನಾನು ಸರ್ಕಾರದ ನಿಲುವುಗಳನ್ನು ಪ್ರಶ್ನಿಸಿದ್ದಕ್ಕೆ ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದೇನೆ ಎನ್ನುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೀಸಾ ರದ್ಧತಿಯ ಹಿಂದಿನ ಉದ್ದೇಶ ಏನೆಂದು ನಿಮಗನ್ನಿಸುತ್ತದೆ?

ನಾನು ಸೈದ್ಧಾಂತಿಕ ನೆಲೆಗಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡೆಯನ್ನು ಪ್ರಶ್ನಿಸುತ್ತಲೇ ಬರುತ್ತಿದ್ದೇನೆ. ಇದೇ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ನನ್ನನ್ನು ಗುರಿಯಾಗಿಸಿ ಹಲವು ಪೊಲೀಸ್‌ ಪ್ರಕರಣಗಳು ದಾಖಲಾಗುತ್ತಿವೆ. ನನ್ನನ್ನು ಜೈಲಿಗೂ ಕಳುಹಿಸಿದ್ದಾರೆ. ಈಗ ಮುಂದುವರೆದ ಭಾಗವಾಗಿ ನನ್ನ ವೀಸಾ ರದ್ದುಗೊಳಿಸಿ, ʼಓಸಿಐ ಕಾರ್ಡ್‌ʼ (ಭಾರತೀಯ ಮೂಲದ ವಿದೇಶಿ ಪ್ರಜೆಗೆ ಭಾರತದಲ್ಲಿ ಅನಿರ್ದಿಷ್ಟ ಅವಧಿಯವರೆಗೆ ವಾಸಿಸಲು ಮತ್ತು ಕೆಲಸ ಮಾಡಲು ಇರುವ ವಲಸೆ ವ್ಯವಸ್ಥೆ) ಅನ್ನು ಹಿಂದಿರುಗಿಸಲು 15 ದಿನ ಸಮಯವಕಾಶ ನೀಡಿದ್ದಾರೆ. ಒಟ್ಟಿನಲ್ಲಿ ನನ್ನ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ.

ನಿಮ್ಮ ಮುಂದಿನ ನಡೆ ಏನು?

ವೀಸಾ ರದ್ಧತಿಯ ಪತ್ರ ಕೈಸೇರುತ್ತಲೇ ನಾನು ವಕೀಲರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೇನೆ. ಕೇಂದ್ರ ಸರ್ಕಾರದ ವೀಸಾ ರದ್ದತಿಯ ಆದೇಶಕ್ಕೆ ತಡೆ ನೀಡುವಂತೆ ಕೋರಿ ಸೋಮವಾರದ ಹೊತ್ತಿಗೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಿದ್ದೇನೆ. ವಕೀಲರ ತಂಡದ ಜೊತೆಗೆ ಸಂಪರ್ಕದಲ್ಲಿದ್ದುಕೊಂಡು ಮನವಿ ಸಲ್ಲಿಸಲು ಬೇಕಾದ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದೇನೆ. ನಾನು ಯಾವುದೇ ಕಾರಣಕ್ಕೂ ಅಮೆರಿಕಕ್ಕೆ ವಾಪಾಸ್‌ ಹೋಗುವುದಿಲ್ಲ ಕಾನೂನಾತ್ಮಕವಾಗಿ ಹೋರಾಡುತ್ತೇನೆ.

ಕೇಂದ್ರದ ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿ ಚೇತನ್‌ ಅವರಿಗೆ ಕಳುಹಿಸಿರುವ ಆದೇಶ ಪ್ರತಿ

Chethan 1 1
f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...