ವಿಮಾನ ಅಪಘಾತದಿಂದ ಪಾರಾದ ಧ್ರುವ ಸರ್ಜಾ, ಮಾರ್ಟಿನ್ ಚಿತ್ರತಂಡ: ಪುನರ್ಜನ್ಮ ಎಂದ ನಟ

Date:

ಸ್ಯಾಂಡಲ್‍ವುಡ್ ನಾಯಕ ನಟ ಧ್ರುವ ಸರ್ಜಾ ಸೇರಿದಂತೆ ಮಾರ್ಟಿನ್ ಚಿತ್ರ ತಂಡವಿದ್ದ ವಿಮಾನವು ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಸದ್ಯ ಚಿತ್ರತಂಡ ಸೇರಿದಂತೆ ವಿಮಾನ ಪ್ರಯಾಣಿಕರೆಲ್ಲ ಸುರಕ್ಷಿತವಾಗಿ ವಿಮಾನ ನಿಲ್ದಾಣ ತಲುಪಿದ್ದಾರೆ.

ಅಂತಿಮ ಚಿತ್ರೀಕರಣದಲ್ಲಿದ್ದ ಮಾರ್ಟಿನ್ ಚಿತ್ರತಂಡವು ಸೋಮವಾರ ಸಂಜೆ ಹಾಡಿನ ಚಿತ್ರೀಕರಣಕ್ಕಾಗಿ ದೆಹಲಿ ವಿಮಾನ ನಿಲ್ದಾಣದಿಂದ ಶ್ರೀನಗರ ವಿಮಾನ ನಿಲ್ದಾಣಕ್ಕೆಗೆ ಇಂಡಿಗೋ ವಿಮಾನದಲ್ಲಿ  ತೆರಳುತ್ತಿತ್ತು. ಈ ಸಂದರ್ಭದಲ್ಲಿ ಹವಾಮಾನ ವೈಪರೀತ್ಯದಿಂದ ವಿಮಾನವನ್ನು ಲ್ಯಾಂಡಿಂಗ್ ಮಾಡಲು ಸಾಧ್ಯವಾಗದೇ ಪೈಲಟ್ ಪರದಾಡಿದ್ದಾರೆ.

ಸೀಟುಗಳು ನಡುಗಿದೆ, ಪ್ರಯಾಣಿಕರು ಗಾಬರಿ ಆಗಿದ್ದಾರೆ. ಕೊನೆಗೆ ಪೈಲಟ್‍ನ ಸಮಯ ಪ್ರಜ್ಞೆಯಿಂದ ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಘಟನೆಯ ಬಳಿಕ ಮಾರ್ಟಿನ್ ಚಿತ್ರತಂಡವು ವಿಮಾನ ಇಳಿಯುವ ಸಂದರ್ಭದಲ್ಲಿಯೇ ವಿಡಿಯೋ ಮಾಡಿಕೊಂಡು ವಿಮಾನದಲ್ಲಿ ಎದುರಾಗಿದ್ದ ಕೆಟ್ಟ ಸಂದರ್ಭವನ್ನು ವಿವರಿಸಿ ಮರು ಜನ್ಮ ಸಿಕ್ಕಿದೆ ಎಂದಿದೆ. ನನ್ನ ಜೀವಮಾನದಲ್ಲಿಯೇ ವಿಮಾನದಲ್ಲಿ ಮೊದಲ ಬಾರಿ ಅತ್ಯಂತ ಕೆಟ್ಟ ಅನುಭವವಾಯಿತು. ಸದ್ಯ ನಾವು ಸುರಕ್ಷಿತವಾಗಿದ್ದೇವೆ. ಥ್ಯಾಂಕ್ ಗಾಡ್, ಜೈ ಆಂಜನೇಯ ಎಂದು ಧ್ರುವ ಸರ್ಜಾ ಹೇಳಿದ್ದು, ಇದಕ್ಕೆ ಮಾರ್ಟಿನ್‌ ತಂಡವೂ ದನಿಗೂಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತವನ್ನು ಗೆಲ್ಲಿಸಿದ ಬಡವರ ಮಕ್ಕಳ ಬೆರಗಿನ ಆಟ

ಈ ವಿಡಿಯೋದಲ್ಲಿ ಚಿತ್ರದ ನಿರ್ದೇಶಕ ಎ ಪಿ ಅರ್ಜುನ್, ನಾಯಕ ನಟಿ ಅನ್ವೇಶಿ ಜೈನ್, ನೃತ್ಯ ಸಂಯೋಜಕ ಇಮ್ರಾನ್ ಸರ್ಧಾರಿಯಾ ಸೇರಿದಂತೆ 15ಕ್ಕೂ ಹೆಚ್ಚು ಮಂದಿ ಇದ್ದಾರೆ. ಈ ಬಗ್ಗೆ ನಟ ಧ್ರುವ ಸರ್ಜಾ ಸಹ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಮೊದಲ ಬಾರಿಗೆ ಸಾವನ್ನು ಎದುರಿಸಿ ಮತ್ತೆ ಜೀವ ಸಿಕ್ಕಂತಾಗಿದೆ. ಇದು ನನ್ನ ತಂದೆ ತಾಯಿಯರ, ನನ್ನ ವಿಐಪಿಗಳ ಮತ್ತು ನನ್ನ ದೇವರು ಚಿರು ಅಣ್ಣನ ಅವರ ಸಂಪೂರ್ಣ ಆಶೀರ್ವಾದದ ಫಲ. ಇದು ಪುನರ್ಜನ್ಮವಾಗಿದೆ. ನಮಗೆಲ್ಲರಿಗೂ ಜೀವನವನ್ನು ಪೂರ್ಣವಾಗಿ ಬದುಕಲು ಅವಕಾಶ ಮತ್ತೆ ಸಿಕ್ಕಿದೆ. ಜೈ ಆಂಜನೇಯ ಎಂದು ಧ್ರುವ ಸರ್ಜಾ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಗೆ ಪೋಸ್ಟ್ ಮಾಡಿದ್ದಾರೆ.

ಉದಯ್ ಕೆ ಮೆಹ್ತಾ ನಿರ್ಮಾಣದ ‘ಮಾರ್ಟಿನ್’ ಸಿನಿಮಾ ಕಳೆದೆರಡು ವರ್ಷಗಳ ಹಿಂದೆ ಸೆಟ್ಟೇರಿದ್ದು, ಬಹಳ ಅದ್ಧೂರಿಯಾಗಿ ಮೂಡಿ ಬರುತ್ತಿದೆ. 5 ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾದಲ್ಲಿ ವೈಭವಿ ಶಾಂಡಿಲ್ಯ ನಾಯಕಿಯಾಗಿ ನಟಿಸುತ್ತಿದ್ದಾರೆ.

ಧ್ರವಸರ್ಜಾ
Dhruva sarja post
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...