ನವಗ್ರಹ ಸಿನಿಮಾದಲ್ಲಿ ನಟಿಸಿದ್ದ ನಟ ಗಿರಿ ದಿನೇಶ್‌ಗೆ ಹಠಾತ್ ಹೃದಯಾಘಾತ

Date:

ಚಾಲೆಂಜಿಂಗ್​ ಸ್ಟಾರ್ ದರ್ಶನ್​ ಅಭಿನಯದ ನವಗ್ರಹ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದ ನಟ ಗಿರಿ ದಿನೇಶ್ ಹಠಾತ್ ಹೃದಯಾಘಾತದಿಂದ ‌ಸಾವನ್ನಪ್ಪಿದ್ದಾರೆ.

ಶುಕ್ರವಾರ ಸಂಜೆ ಮನೆಯಲ್ಲಿ ಪೂಜೆ ಮಾಡುವ ವೇಳೆ ಗಿರಿ ದಿನೇಶ್​ ಅವರು ಹೃದಯಾಘಾತದಿಂದ ಕುಸಿದು ಬಿದ್ದಿದ್ದರು. ತಕ್ಷಣ ಗಿರಿ ದಿನೇಶ್​ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆಯೇ ನಿಧನರಾಗಿದ್ದಾರೆ. ಅವರಿಗೆ ಕೇವಲ 45 ವಯಸ್ಸಾಗಿತ್ತು.

ಗಿರಿ ದಿನೇಶ್​ ನವಗ್ರಹ ಸಿನಿಮಾದ ಮೂಲಕ ಖ್ಯಾತಿ ಗಳಿಸಿದ್ದರು. ಗಿರಿ ದಿನೇಶ್​ ಅವರು ಚಮಕಾಯ್ಸಿ ಚಿಂದಿ ಉಡಾಯ್ಸಿ, ವಜ್ರ ಸೇರಿ ಕೆಲ ಚಿತ್ರಗಳಲ್ಲಿ ನಟಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಠಾತ್ ಸಾವುಗಳ ಅಧ್ಯಯನಕ್ಕೆ ತಜ್ಞರು- ವಿಜ್ಞಾನಿಗಳ ಸಮಿತಿ ರಚನೆ

ಹಠಾತ್ ಸಾವುಗಳ ಕುರಿತಂತೆ ಮತ್ತು ಮುಂದೆ ಈ ರೀತಿಯ ಸಾವುಗಳು ಸಂಭವಿಸದಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಮರ್ಪಕ ಸಂಶೋಧನೆ ನಡೆಸಲು ತಜ್ಞರ ಹಾಗೂ ವಿಜ್ಞಾನಿಗಳ ಸಮಿತಿ ರಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಶುಕ್ರವಾರ ತಿಳಿಸಿದ್ದರು.

ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರು ಇತ್ತೀಚಿಗೆ ಮುಖ್ಯಮಂತ್ರಿಗಳಿಗೆ ಇ-ಮೇಲ್ ಮೂಲಕ ಪತ್ರ ಬರೆದು, ರಾಜ್ಯದಲ್ಲಿ ಹೃದಯಾಘಾತ, ಹೃದಯಸ್ತಂಭನ, ಮೆದುಳು ಸಂಬಂಧಿ, ನರ ಸಂಬಂಧಿ ಮತ್ತಿತರ ಕಾರಣಗಳಿಂದಾಗಿ ಯುವ ಜನರು ಹಠಾತ್ ಸಾವಿಗೀಡಾಗುತ್ತಿರುವುದು ದಿನಪತ್ರಿಕೆಗಳಲ್ಲಿ ವರದಿಯಾಗುತ್ತಿದೆ. ಈ ಸಾವುಗಳು ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡ ಪರಿಣಾಮಗಳ ಕಾರಣಕ್ಕೆ ಸಂಭವಿಸುತ್ತಿರಬಹುದೆಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಪ್ರತಿ ಸಾವು ಅವರ ಅವಲಂಬಿತ ಕುಟುಂಬಗಳನ್ನು ಆರ್ಥಿಕ-ಸಾಮಾಜಿಕ ಸಮಸ್ಯೆಗಳಿಗೆ ತಳ್ಳುತ್ತಿದೆ. ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡಪರಿಣಾಮಗಳಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಇಂತಹ ಸಾವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಕೋರಿದ್ದರು.

ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ ಒಂದು ಸಮಿತಿ ರಚನೆಗೆ ನಿರ್ಧರಿಸಲಾಗಿದೆ. ಕೊರೊನಾ ಕಾಲದ ನಂತರದಿಂದ ಎಳೆಯ ವಯಸಿನವರು, ಯುವಜನರು ಸೇರಿದಂತೆ ಬದುಕಿ ಬಾಳಬೇಕಾದವರು ಇದ್ದಕ್ಕಿದ್ದಂತೆ ಇಲ್ಲವಾಗುತ್ತಿದ್ದಾರೆ, ಇವರನ್ನು ನಂಬಿದ ಕುಟುಂಬಗಳು ಬೀದಿಪಾಲಾಗುತ್ತಿವೆ. ಇದೊಂದು ಗಂಭೀರ ಸಮಸ್ಯೆ, ಆದಷ್ಟು ಶೀಘ್ರ ಈ ಸಮಸ್ಯೆಯ ಮೂಲ ಪತ್ತೆಮಾಡಿ, ಪರಿಹರಿಸಬೇಕು ಎನ್ನುವುದು ನನ್ನ ಯೋಚನೆಯೂ ಆಗಿತ್ತು. ಇಂತಹ ಸಂದರ್ಭದಲ್ಲಿ ಈ ಸಮಸ್ಯೆಯ ಬಗ್ಗೆ ಗಮನ ಸೆಳೆದು ಹಿರಿಯ ಪತ್ರಕರ್ತರಾದ ರಾಜಾರಾಂ ತಲ್ಲೂರು ಅವರು ಬರೆದ ಪತ್ರ ನನ್ನ ಯೋಚನೆಯನ್ನು ಕಾರ್ಯರೂಪಕ್ಕೆ ತರಲು ಪ್ರೇರಣೆಯಾಯಿತು. ಅವರಿಗೆ ಕೃತಜ್ಞತೆಗಳು.ತಜ್ಞರು ಹಾಗೂ ವಿಜ್ಞಾನಿಗಳ ಸಮಿತಿ ನೀಡುವ ವರದಿಯನ್ನು ಆಧರಿಸಿ ಕ್ರಮಗಳನ್ನು ಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...