ಧರ್ಮ, ದೇವರನ್ನು ಮುಂದಿಟ್ಟು ರಾಜಕಾರಣಿಗಳು ಪ್ರಶ್ನಾತೀತರಾಗುವುದು ನಾಡಿನ ಭವಿಷ್ಯಕ್ಕೆ ಅಪಾಯಕಾರಿ: ನಟ ಕಿಶೋರ್

Date:

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಇಂದು ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆಯ ನಡುವೆಯೇ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಹುಭಾಷಾ ನಟ ಕಿಶೋರ್ ಕುಮಾರ್, “ಇಂದು ಮತ್ತೆ ರಾಜರ ಕಾಲಕ್ಕೆ ಹೋದ ಅನುಭವ” ಎಂದು ಬರೆದುಕೊಂಡಿದ್ದಾರೆ.

ಈ ಪೋಸ್ಟ್‌ಗಿಂತಲೂ ಮುನ್ನ ಬಸವಣ್ಣನವರ ‘ಉಳ್ಳವರು ಶಿವಾಲಯ ಕಟ್ಟುವರು, ನಾನೇನು ಮಾಡಲಿ ಬಡವನಯ್ಯಾ’ ಎಂಬ ವಚನವೊಂದನ್ನು ಹಂಚಿಕೊಂಡಿದ್ದರು. ಆ ಬಳಿಕ ಈ ಪೋಸ್ಟ್ ಹಾಕಿರುವ ಅವರು, “ಧರ್ಮ, ದೇವರನ್ನು ಮುಂದಿಟ್ಟು ರಾಜಕಾರಣಿಗಳು ಪ್ರಶ್ನಾತೀತರಾಗುವುದು ನಾಡಿನ ಭವಿಷ್ಯಕ್ಕೆ ಅಪಾಯಕಾರಿ” ಎಂದು ಬರೆದುಕೊಂಡಿದ್ದಾರೆ.

“ಮಂದಿರ, ರಾಜರು ಮತ್ತು ರಾಜಕೀಯ ನಿಯಂತ್ರಣ ನಾವು ನೋಡದ್ದೇನಲ್ಲ. ಇಂದು ಮತ್ತೆ ರಾಜರ ಕಾಲಕ್ಕೆ ಹೋದ ಅನುಭವ.. ದೇವರ ಹೆಸರಲ್ಲಿ ಪೂಜಾರಿಯೊಂದಿಗೆ ಸೇರಿ ಜನರನ್ನು ನಿಯಂತ್ರಿಸಿ, ದೇಗುಲ ಕಟ್ಟಿಸಿ, ತಮ್ಮ ಹೆಸರು ಕೆತ್ತಿಸಿ, ದೇಗುಲದ ಶಿಲ್ಪಿಯ ಕೈ ಕತ್ತರಿಸಿ, ತಮ್ಮ ಕೀರ್ತಿ ಪತಾಕೆಯನ್ನು ಹಾರಿಸಿ, ಅಜರಾಮರರಾದ ದೊರೆಗಳು, ಉಧೋ ಉಧೋ ಎಂದ ಪ್ರಜೆಗಳು, ಭಟ್ಟಂಗಿಗಳು, ಧರ್ಮ ಮತ್ತು ದೇವರು ರಾಜಕಾರಣಿಗಳ ಕೈಗೆ ಹೋಗಿ ತಾವೂ ಪ್ರಶ್ನಾತೀತವಾಗಿ ಅವರನ್ನೂ ಪ್ರಶ್ನಾತೀತರನ್ನಾಗಿಸಿಬಿಡುವುದು ಸಂಸ್ಕೃತಿಯ ಚಲನಶೀಲತೆಗೆ, ನಾಡಿನ ಭವಿಷ್ಯಕ್ಕೆ ಅತೀ ಅಪಾಯಕಾರಿ” ಎಂದು ಬಹುಭಾಷಾ ನಟ ಕಿಶೋರ್ ಕುಮಾರ್ ಪರೋಕ್ಷವಾಗಿ ಪ್ರಧಾನಿ ನರೇಂದ್ರಯವರನ್ನು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪೋಸ್ಟ್‌ನ ಜೊತೆಗೆ ಖ್ಯಾತ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ ಬಿಡಿಸಿದ್ದ ವ್ಯಂಗ್ಯಚಿತ್ರವೊಂದನ್ನು ಕೂಡ ಹಂಚಿಕೊಂಡಿದ್ದಾರೆ. ಈ ವ್ಯಂಗ್ಯಚಿತ್ರದಲ್ಲಿ ಗೋದಿ ಮಾಧ್ಯಮಗಳು ರಾಮಮಂದಿರ ಉದ್ಘಾಟನೆ ಪ್ರಸಾರದ ಬಗ್ಗೆ ನಿರತವಾಗಿದ್ದರೆ, ದೇಶದಲ್ಲಿರುವ ಹಣದುಬ್ಬರ, ಬಡತನ, ನಿರುದ್ಯೋಗ, ಕೋಮುವಾದ ಹಾಗೂ ಬಂಡವಾಳಶಾಹಿ ವ್ಯವಸ್ಥೆಯ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರುವ ದೃಶ್ಯವನ್ನು ಚಿತ್ರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...