ಹಿಜಾಬು ಮತ್ತು ಕುಸ್ತಿ ಅಖಾಡದಲ್ಲಿ ಮನುವಾದಿ ಮಸಲತ್ತು

Date:

  • ಲೈಂಗಿಕ ದೌರ್ಜನ್ಯದ ವಿರುದ್ಧ ಕುಸ್ತಿಪಟುಗಳ ಹೋರಾಟ
  • ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿ ಪಟುಗಳು

ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್‌ ಭೂಷಣ್‌ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಹೊಸ ಸಂಸತ್‌ ಭವನದ ಎದುರು ಭಾನುವಾರ ಶಾಂತಿಯುತ ಪ್ರತಿಭಟನೆ ನಡೆಸಲು ಮುಂದಾದ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರು ನಡೆಸಿದ ದೌರ್ಜನ್ಯದ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ದೆಹಲಿ ಪೊಲೀಸರ ವರ್ತನೆಗೆ ದೇಶವ್ಯಾಪಿ ಖಂಡನೆ ವ್ಯಕ್ತವಾಗುತ್ತಿದೆ. ಇದೇ ಹೊತ್ತಿನಲ್ಲಿ ಬಹುಭಾಷಾ ನಟ ಕಿಶೋರ್‌, ಹೋರಾಟನಿರತ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ದೀರ್ಘ ಲೇಖನವನ್ನು ಹಂಚಿಕೊಂಡಿದ್ದಾರೆ.

ಕಿಶೋರ್‌ ಬಹಿರಂಗ ಪತ್ರದ ಸಾರಾಂಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾವ ಮುಸಲ್ಮಾನ ಮಹಿಳೆ, ಪುರುಷ ಪ್ರಾಬಲ್ಯದ ಸಂಕೇತವಾದ ಹಿಜಾಬನ್ನು ವಿರೋಧಿಸಿಯೂ ವಿರೋಧಿಸದಂತೆ ಮೆಲ್ಲ ಮೆಲ್ಲನೆ ಅದರಿಂದ ಸ್ವತಂತ್ರಳಾಗಿ ಶಿಕ್ಷಿತಳು, ಸಶಕ್ತಳಾಗುತ್ತಿದ್ದಳೊ ಅವಳನ್ನು ಅಡ್ಡಗಟ್ಟಿ, ಭಯ ಹುಟ್ಟಿಸಿ ಆಕೆ ತನ್ನ ಆತ್ಮರಕ್ಷಣೆಗಾಗಿ, ತನ್ನ ಅಸ್ಮಿತೆಯ ಹುಡುಕಾಟದಲ್ಲಿ, ತನ್ನನ್ನು ಬಂಧನದಲ್ಲಿಟ್ಟಿದ್ದ ಅದೇ ಹಿಜಾಬಿನ ಮೊರೆ ಹೋಗುವ ಹಾಗೆ ಮಾಡಿದ ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು.

ಒಂದು ಹೆಣ್ಣು ಶಿಕ್ಷಣ ಪಡೆದರೆ ಅವಳ ಮುಂದಿನ ಇಡೀ ಪೀಳಿಗೆ ಶಿಕ್ಷಣ ಪಡೆಯುತ್ತದೆ. ಸರ್ಕಾರಿ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿ ಇಂದೂ ಸಹ ನೂರರಲ್ಲಿ 14 ಮುಸ್ಲಿಂ ಹೆಣ್ಣು ಮಕ್ಕಳು ಮಾತ್ರ ಕಾಲೇಜು ಶಿಕ್ಷಣ ಪಡೆಯಲು ಸಾಧ್ಯವಾಗಿದೆ. ಇಂಥ ಕಾಲದಲ್ಲಿ ಅದನ್ನೂ ತಡೆದು ಬಿಟ್ಟರೆ? ಮುಸಲ್ಮಾನರನ್ನು ಮುಖ್ಯವಾಹಿನಿಯಿಂದ ಹೊರಗಿಡುವ ಷಡ್ಯಂತ್ರ ಯಶಸ್ವಿಯಾದಂತೆಯೇ ಸರಿ.

ತನ್ನ ಮನೆ, ಸಂಬಂಧಿಕರು, ಮತ, ಸಂಪ್ರದಾಯವಾದ ಎಲ್ಲವನ್ನೂ ದಾಟಿಬಂದು ಕೊನೆಯ ಹಂತದಲ್ಲಿ ಶಿಕ್ಷಣ ವಂಚಿತಳಾಗುವುದಕ್ಕೆ ಕಾರಣ ಕೂಡ ಸ್ವಯಂ ಅವಳೇ ಆಗಿಬಿಟ್ಟರೆ? ದೇಶದ ಮುಖ್ಯವಾಹಿನಿಯಿಂದ ಮುಸ್ಲಿಂ ಮಹಿಳೆ ಮತ್ತು ಜನಾಂಗ ಎರಡೂ ಹೊರಗೆ. ಅದೂ ತನ್ನ ಕಾಲ ಮೇಲೆ ತಾನೇ ಕೊಡಲಿ ಹಾಕಿಕೊಂಡು. ಇದಲ್ಲವೇ ʼಮಾಸ್ಟರ್ ಸ್ಟ್ರೋಕ್‌ʼ?

ಜಂತರ್ ಮಂತರ್‌ನಲ್ಲಿ ಲೈಂಗಿಕ ದೌರ್ಜನದ ವಿರುದ್ಧ ಧರಣಿ ಕುಳಿತ ಹೆಣ್ಣುಮಕ್ಕಳು, ಅತ್ಯಾಚಾರಿಯ ಹೂಂಕಾರ, ಆಗಾಗ ಆ ಹೆಣ್ಣುಮಕ್ಕಳ ಮೇಲೇ ತನ್ನ ಶಕ್ತಿ ತೋರಿಸುವ ನರಸತ್ತ ಪೊಲೀಸ್, ಕಮಕ್ ಕಿಮಕ್ ಅನ್ನದೇ ಅತ್ಯಾಚಾರಿಗೆ ಪರೋಕ್ಷ ಬೆಂಬಲ ಕೊಟ್ಟು ಕುಳಿತ ಏಕವ್ಯಕ್ತಿ ಸರ್ಕಾರವಾದ ಪ್ರಧಾನಿ.

ಆಗ ಹೊರಟದ್ದು, ವಿಶ್ವಮಟ್ಟದ ತಾರೆಯರಿಗೇ ಹೀಗಾದರೆ ನಮ್ಮಂಥ ಸಾಮಾನ್ಯರ ಸ್ಥಿತಿ ಹೇಗೆ ಎಂಬ ಜನಸಾಮಾನ್ಯರ ಉದ್ಗಾರ. ಶತಮಾನಗಳ ಕಾಲ ಹೋರಾಡಿ ವಿಶ್ವದ ಉತ್ತುಂಗಕ್ಕೇರಿದ ಹೆಣ್ಣು ಮಕ್ಕಳನ್ನು, ಅವರ ಬೆಂಗಾವಲಾಗಿ ನಿಂತ ದೇಶದ ತಾಯಿ ತಂದೆಯರೇ ಮತ್ತೆ ಮನುವಿನ ಕಲ್ಪನೆಯ ನಾಲ್ಕು ಗೋಡೆಗಳ ಕೂಪಕ್ಕೆ ತಳ್ಳಲು ಇಷ್ಟು ಸಾಲದೇ?

ಭಾರತಾಂಬೆ ಅಂದು ಹಿಜಾಬಿನಲ್ಲಿ ಇಂದು ಜಂತರ್ ಮಂತರ್ ಅಖಾಡದಲ್ಲಿ ಮನುವಾದಿಗಳಿಗೆ ಸವಾಲೆಸೆಯುತ್ತಲೇ ಬಂದಿದ್ದಾಳೆ.

– ಕಿಶೋರ್‌ ಕುಮಾರ್‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...