ಅಭಿವೃದ್ಧಿ ಹೆಸರಲ್ಲಿ ಕೆರೆ ನಾಶ : ಬಿಬಿಎಂಪಿ ವಿರುದ್ಧ ಕಿಶೋರ್‌ ಆಕ್ರೋಶ

Date:

ಸಾವಿರ ವರ್ಷಗಳ ಇತಿಹಾಸವಿರುವ ದೇವರಕೆರೆ

ಐತಿಹಾಸಿಕ ಕೆರೆಗೆ ಹರಿದು ಬರುತ್ತಿದೆ ಕೊಳಚೆ ನೀರು

ರಿಯಲ್‌ ಎಸ್ಟೇಟ್‌ ಹಾವಳಿಗೆ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೆರೆಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂಬ ಕೂಗು ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಈ ನಡುವೆ ನಗರದಲ್ಲಿರುವ ಸಾವಿರ ವರ್ಷಗಳ ಇತಿಹಾಸವುಳ್ಳ ʼದೇವರಕೆರೆʼಯನ್ನು ಬಿಬಿಎಂಪಿ ನಾಶ ಮಾಡುತ್ತಿದೆ ಎಂದು ಬಹುಭಾಷಾ ನಟ ಕಿಶೋರ್‌ ಕುಮಾರ್‌ ಆರೋಪಿಸಿದ್ದು, ಕೆರೆಯ ರಕ್ಷಣೆಗೆ ಕರೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನ ದಕ್ಷಿಣ ಭಾಗದಲ್ಲಿರುವ ದೇವರಕೆರೆಗೆ ಕೊಳಚೆ ನೀರು ಹರಿದು ಬರುತ್ತಿರುವ ವಿಡಿಯೋವನ್ನು ತಮ್ಮ ʼಇನ್‌ಸ್ಟಾಗ್ರಾಂʼ ಖಾತೆಯಲ್ಲಿ ಹಂಚಿಕೊಂಡಿರುವ ಕಿಶೋರ್‌, “ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಸಾವಿರ ವರ್ಷಗಳ ಇತಿಹಾಸವಿರುವ ದೇವರಕೆರೆ ಇದೆ. ಈ ಕೆರೆ ಹೊಯ್ಸಳರ ಕಾಲದ್ದು ಎಂದು ಪುರಾತತ್ವ ಇಲಾಖೆ ದೃಢಪಡಿಸಿದೆ. ಈ ಹಿಂದೆ ಅರಣ್ಯ ಇಲಾಖೆಯ ಸುಪರ್ಧಿಯಲ್ಲಿದ್ದ ಈ ಕೆರೆ ಸ್ವಾಭಾವಿಕವಾಗಿ ಶುದ್ಧ, ತಾಜಾ ನೀರಿನಿಂದ ಕೂಡಿತ್ತು. ಕಳೆದ 10 ವರ್ಷಗಳ ಹಿಂದೆ ಈ ಕೆರೆಯನ್ನು ಬಿಬಿಎಂಪಿಯ ಸುಪರ್ಧಿಗೆ ನೀಡಲಾಯಿತು. ಆದರೆ, ಬಿಬಿಎಂಪಿ ಅನಗತ್ಯ ಅಭಿವೃದ್ಧಿಯ ಹೆಸರಿನಲ್ಲಿ ಜನರ ತೆರಿಗೆ ಹಣವನ್ನು ಬೇಕಾಬಿಟ್ಟಿ ಖರ್ಚು ಮಾಡಿ ಈ ಐತಿಹಾಸಿಕ ಕೆರೆಯನ್ನು ಕೇವಲ 5 ವರ್ಷಗಳಲ್ಲೇ ನಾಶ ಮಾಡಿತು” ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

“ಕೆಲಸಕ್ಕೆ ಬಾರದ ಅಭಿವೃದ್ಧಿಯ ಹೆಸರಲ್ಲಿಇನ್ನೊಂದು ಕೆರೆಯನ್ನು ಕಳೆದುಕೊಳ್ಳಲು ಸಿದ್ಧರಾಗಿದ್ದೀರಾ? ಅಥವಾ ಪರಿಸ್ಥಿತಿ ಕೈ ಮೀರುವ ಮುನ್ನ ಸಂಬಂಧ ಪಟ್ಟವರನ್ನು ಪ್ರಶ್ನಿಸಿ, ಕ್ರಮಕ್ಕೆ ಆಗ್ರಹಿಸುತ್ತೀರಾ” ಎಂದು ಕೆರೆಯ ಸಂರಕ್ಷಣೆಗೆ ಕರೆ ನೀಡಿದ್ದಾರೆ.

ಕಿಶೋರ್‌ ಅವರು ತಮ್ಮ ʼಇನ್‌ಸ್ಟಾಗ್ರಾಂʼ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಕೊಳಚೆ ನೀರು ಕೆರೆಯನ್ನು ಸೇರುತ್ತಿರುವುದು ಸ್ಪಷ್ಟವಾಗಿದೆ. “ಕೇವಲ 10 ನಿಮಿಷಗಳ ಕಾಲ ಸುರಿದ ಮಳೆಗೆ ಎಷ್ಟು ದೊಡ್ಡ ಪ್ರಮಾಣದಲ್ಲಿ ಕೊಳಚೆ ನೀರು ಕೆರೆಯನ್ನು ತುಂಬಿಕೊಳ್ಳುತ್ತಿದೆ ನೋಡಿ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...