ನಟ ಚೇತನ್‌ ವೀಸಾ ರದ್ದು: ಸರ್ಕಾರದ ಅತಿರೇಕ ಎಂದ ಕಿಶೋರ್‌

Date:

ಸಹನಟನ ಬೆಂಬಲಕ್ಕೆ ನಿಂತ ಬಹುಭಾಷಾ ನಟ ಕಿಶೋರ್‌

ಕಾನೂನು ಹೋರಾಟಕ್ಕೆ ಮುಂದಾದ ʼಆ ದಿನಗಳುʼ ಚೇತನ್‌

ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಕುಮಾರ್‌ ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಕೇಂದ್ರ ಗೃಹ ಸಚಿವಾಲಯ ಅವರ ವೀಸಾ ರದ್ದುಗೊಳಿಸಿದೆ. ಸರ್ಕಾರದ ಈ ನಡೆಗೆ ವ್ಯಾಪಾಕ ಖಂಡನೆ ವ್ಯಕ್ತವಾಗುತ್ತಿರುವಾಗಲೇ ಬಹುಭಾಷಾ ನಟ ಕಿಶೋರ್‌ ಕುಮಾರ್‌ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚೇತನ್‌ ಅವರ ವೀಸಾ ಮತ್ತು ʼಓಸಿಐʼ ಕಾರ್ಡ್‌ (ಭಾರತೀಯ ಮೂಲದ ವಿದೇಶಿ ಪ್ರಜೆಗೆ ಭಾರತದಲ್ಲಿ ಅನಿರ್ದಿಷ್ಟ ಅವಧಿಯವರೆಗೆ ವಾಸಿಸಲು ಮತ್ತು ಕೆಲಸ ಮಾಡಲು ಇರುವ ವಲಸೆ ವ್ಯವಸ್ಥೆ)  ಅನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿರುವ ಕುರಿತ ವರದಿಯನ್ನು ಉಲ್ಲೇಖಿಸಿ ಇನ್‌ಸ್ಟಾಗ್ರಾಂನಲ್ಲಿ ಪ್ರತಿಕ್ರಿಯಿಸಿರುವ ಕಿಶೋರ್‌,” ʼಹಿಂದುತ್ವ’ ಅನ್ನುವ ಪದ ವರ್ತಮಾನದ ರಾಜಕೀಯ ಪರಿಸ್ಥಿತಿಯಲ್ಲಿ ಹಿಂದೂ ಧರ್ಮ ಅಲ್ಲ. ನಿಜವಾದ ಹಿಂದೂ ಧರ್ಮ ಸಕಲರನ್ನೂ ಒಳಗೊಂಡ ವಸುಧೆಯೇ ಒಂದು ಕುಟುಂಬವೆಂದು ನೋಡುವ ವಿಶಾಲ ಮನೋಸ್ಥಿತಿ. ಆದರೆ, ʼಹಿಂದುತ್ವʼ ಎನ್ನುವ ಪದ ಬಳಕೆಯಾಗುತ್ತಿರುವುದು ಒಂದು ಪಕ್ಷದ, ಒಂದು ಸಂಘದ, ಅಧಿಕಾರಕ್ಕಾಗಿ ಒಡೆದಾಳುವ, ಪರ ದ್ವೇಷದ, ಮೂಲಭೂತವಾದಿ ವೈದಿಕ ಸಂಪ್ರದಾಯದ ಸಂಕುಚಿತ ಪರಿಕಲ್ಪನೆಯಾಗಿಯಷ್ಟೆ” ಎಂದಿದ್ದಾರೆ.

“ನಮ್ಮ ತಪ್ಪುಗಳನ್ನು ಎತ್ತಿ ತೋರಿಸುವ ನಮ್ಮದೇ ಜನರನ್ನು ನಿಂದಿಸುವ, ಆರೋಪಿಸುವ, ಜೈಲಿಗೆ ಹಾಕುವ ಅಥವಾ ಗಡೀಪಾರು ಮಾಡುವ ಅತಿರೇಕಕ್ಕೆ ಹೋಗುವ ಬದಲು ನಮ್ಮನ್ನು ನಾವು ತಿದ್ದಿಕೊಂಡು ಹಿಂದೂ ಧರ್ಮವನ್ನು ಎಲ್ಲರಿಗೂ ಮಾದರಿಯಾಗಿಸಬೇಕಲ್ಲವೇ? ಈ ಜೀವ ವಿರೋಧಿ ರಾಜಕೀಯದ ಟೀಕೆಯಿಂದ ಹಿಂದೂಗಳಿಗೆಲ್ಲರಿಗೂ ಅಪಮಾನವಾಯಿತೆನ್ನುವುದು ಎಷ್ಟು ಉಚಿತ? ಹಾಗೆ ಅವಮಾನ ಪಡಲೇಬೇಕೆಂದರೆ ವೈದಿಕ ಪರಂಪರೆ ಇಂದಿಗೂ ಪ್ರತಿಪಾದಿಸುತ್ತಿರುವ ನಮ್ಮಲ್ಲೇ ಇರುವ ಜಾತಿ ಪದ್ಧತಿ, ಅಸ್ಪೃಶ್ಯತೆ, ಲಿಂಗ ಬೇಧ ಇವುಗಳಿಂದಲ್ಲವೇ?” ಎಂದು ಪ್ರಶ್ನೆಗಳನ್ನು ಹಾಕುವ ಮೂಲಕ ಚೇತನ್‌ ಬೆಂಬಲಕ್ಕೆ ನಿಂತಿದ್ದಾರೆ.

ತಮ್ಮ ವೀಸಾ ಮತ್ತು ʼಓಸಿಐʼ ಕಾರ್ಡ್‌ ಅನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿರುವ ಚೇತನ್‌ ಸದ್ಯ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ವೀಸಾ ಮತ್ತು ʼಓಸಿಐʼ ಕಾರ್ಡ್‌ ರದ್ಧತಿ ಆದೇಶಕ್ಕೆ ತಡೆ ನೀಡುವಂತೆ ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...