ಸುದೀಪ್, ಪ್ರಶ್ನೆ ಎದುರಿಸಲು ಸಜ್ಜಾಗಿ ಎಂದ ಪ್ರಕಾಶ್ ರಾಜ್

Date:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಸುದೀಪ್ ಪ್ರಚಾರ

ಸರಣಿ ಟ್ವೀಟ್ ಮಾಡಿ ವಿರೋಧ ವ್ಯಕ್ತಪಡಿಸಿದ ಬಹುಭಾಷಾ ನಟ

ನಟ‌ ಸುದೀಪ್ ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬೆಂಬಲಿಸುತ್ತಿರುವುದಕ್ಕೆ ಬಹುಭಾಷಾ ನಟ ಪ್ರಕಾಶ್ ರಾಜ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುದೀಪ್ ನಡೆಯ ಬಗ್ಗೆ ಸರಣಿ ಟ್ವೀಟ್ ಮೂಲಕ ಅಸಮಾಧಾನ ಹೊರಹಾಕಿರುವ ಪ್ರಕಾಶ್ ರಾಜ್, “ಸುದೀಪ್ ಒಬ್ಬ ಮೇರು ಕಲಾವಿದನಾಗಿ ಸಮಾಜದ ಎಲ್ಲ ವರ್ಗದ ಪ್ರೀತಿಯಿಂದ ಬೆಳೆದ ನೀವು ಜನ ಸಾಮಾನ್ಯನ ದನಿಯಾಗುವಿರಿ ಎಂದು ಆಶಿಸಿದ್ದೆ. ಆದರೆ, ತಾವು ಒಂದು ರಾಜಕೀಯ ಪಕ್ಷದ ಬಣ್ಣ ಬಳಿದುಕೊಳ್ಳುತ್ತೀರಿ ಎಂದು ನಿರೀಕ್ಷಿಸಿರಲ್ಲ. ಇನ್ನು ಮುಂದೆ ನಿಮ್ಮನ್ನು, ನಿಮ್ಮ ಪಕ್ಷವನ್ನು ಪ್ರಶ್ನಿಸುವ ಜನ ದನಿಗೆ ತಯಾರಾಗಿರಿ” ಎಂದಿದ್ದಾರೆ.

ಬೊಮ್ಮಾಯಿ ಮಾಮ ನಾನು ಕಷ್ಟದಲ್ಲಿದ್ದಾಗ ನೆರವಾಗಿದ್ದರು. ಆ ಋಣ ತೀರಿಸಲು ಅವರ ಪರ ಪ್ರಚಾರ ಮಾಡತ್ತಿದ್ದೇನೆ ಎನ್ನುವ ಸುದೀಪ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪ್ರಕಾಶ್ ರಾಜ್,”ನೋಡ್ರಪ್ಪ ನಿಮ್ಮ ಮಾಮನೊ, ಅತ್ತೆಯೊ ನಿಮ್ಮ ಕಷ್ಟಕಾಲದಲ್ಲಿ ಸಹಾಯ ಮಾಡಿದ್ದರೆ, ನೀವು ದುಡಿದಿದ್ದರಲ್ಲಿ 10%, 20% ಇಲ್ಲ 30% ಕೊಡಿ, ಅದು ನಿಮ್ಮಿಷ್ಟ. ಆದರೆ, ಪ್ರಜೆಗಳ 30% ಕೊಳ್ಳೆ ಹೊಡೆಯೋಕೆ ಬಿಡಬೇಡಿ” ವ್ಯಂಗ್ಯವಾಡಿದ್ದಾರೆ.

ಜೊತೆಗೆ ಬಸವರಾಜ ಬೊಮ್ಮಾಯಿ ಮತ್ತು ಸುದೀಪ್ ಕುರಿತ ವ್ಯಂಗ್ಯಚಿತ್ರವನ್ನು ಹಂಚಿಕೊಂಡಿರುವ ಅವರು, “ನೀವು ಈಗ ಹೊರಲೇಬೇಕಾದ ಬೇರೆ ಬಣ್ಣದ ಲೋಕದ ಭಾರ” ಎಂದು ಸುದೀಪ್ ಅವರನ್ನು ಟ್ಬೀಟ್‌‌ನಲ್ಲೇ ತಿವಿದಿದ್ದಾರೆ.

ಈ ಹಿಂದೆ ಸುದೀಪ್ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹರಿದಾಡಿದ್ದಾಗ ಪ್ರತಿಕ್ರಿಯಿಸಿದ್ದ ಪ್ರಕಾಶ್ ರಾಜ್, “ಕರ್ನಾಟಕದಲ್ಲಿ ಸೋಲುವ ಭಯದಲ್ಲಿ ಭ್ರಷ್ಟ ಬಿಜೆಪಿ ಹರಡುತ್ತಿರುವ ಸುಳ್ಳು ಸುದ್ದಿ ಎಂದು ನಾನು ನಂಬುತ್ತೇನೆ. ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ” ಎಂದಿದ್ದರು.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...