ಮಂತ್ರಿಯಾದ ಮಧು ಬಂಗಾರಪ್ಪ : ಶ್ರಮದ ಪ್ರತಿಫಲ ಎಂದ ಶಿವಣ್ಣ

Date:

ಮೊದಲ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಧು ಬಂಗಾರಪ್ಪ

ಚುನಾವಣೆಯಲ್ಲಿ ಕಾಂಗ್ರೆಸ್‌ ನಾಯಕರ ಪರ ಪ್ರಚಾರ ಮಾಡಿದ್ದ ಶಿವಣ್ಣ

ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಕಿರಿಯ ಪುತ್ರ, ಸೊರಬ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಮಧು ಬಂಗಾರಪ್ಪ ಇದೇ ಮೊದಲ ಬಾರಿಗೆ ಮಂತ್ರಿಯಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಧು ಬಂಗಾರಪ್ಪ ಸಚಿವರಾಗಿ ಆಯ್ಕೆಯಾದ ಬೆನ್ನಲ್ಲೇ ಅವರ ಕುಟುಂಬದಲ್ಲಿ ಸಂತದ ಮನೆ ಮಾಡಿದ್ದು, ಚುನವಾಣೆಯ‌ ಸಂದರ್ಭದಲ್ಲಿ ಮಧು ಅವರನ್ನು ಬೆಂಬಲಿಸಿದ್ದ ಅವರ ಸಂಬಂಧಿ, ಕನ್ನಡದ ಹಿರಿಯ ನಟ ಶಿವರಾಜ್‌ ಕುಮಾರ್ ಕೂಡ ಹರ್ಷ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೂತನ ಸಚಿವರ ಪ್ರಮಾಣವಚನ ಸಮಾರಂಭಕ್ಕೆ ಮಧು ಬಂಗಾರಪ್ಪ ಮತ್ತು ತಮ್ಮ ಪತ್ನಿ ಗೀತಾ ಅವರೊಂದಿಗೆ ರಾಜಭವನಕ್ಕೆ ಆಗಮಿಸಿದ್ದ ಶಿವರಾಜ್‌ಕುಮಾರ್‌, “ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ ಎಂಬ ಮಾತು ಇಂದು ನಿಜವಾಗಿದೆ. ಮಧು ಅವರಿಗೆ ಸಚಿವ ಸ್ಥಾನ ಸಿಕ್ಕಿದ್ದಕ್ಕೆ ತುಂಬಾ ಖುಷಿಯಾಗುತ್ತಿದೆ. ಮಧು ಖಂಡಿತವಾಗಿಯೂ ಜನಸೇವೆ ಮಾಡುತ್ತಾರೆ. ನಾನು ಇವತ್ತಿನಿಂದ ಅವರನ್ನು ನೋಡುತ್ತಿಲ್ಲ. ಯಾವುದೇ ಸ್ಥಾನಮಾನ ಇಲ್ಲದಿದ್ದಾಗಲೂ ಅವರು ಜನರಿಗೆ ಸಹಾಯ ಮಾಡಿದ್ದಾರೆ. ನೆರವಾಗುವ ಗುಣವಿದ್ದವರೇ ಒಳ್ಳೆಯ ನಾಯಕರಾಗಲು ಸಾಧ್ಯ. ಮಧು ಸಚಿವರಾಗಿ ಜನಪರ ಕೆಲಸಗಳನ್ನು ಮಾಡುತ್ತಾರೆ ಎಂಬ ನಂಬಿಕೆ ಇದೆ” ಎಂದಿದ್ದಾರೆ.

ಇದೇ ವೇಳೆ ಮಾತನಾಡಿರುವ ಮಧು ಬಂಗಾರಪ್ಪ ಅವರ ಸಹೋದರಿ, ಶಿವರಾಜ್‌ ಕುಮಾರ್‌ ಪತ್ನಿ ಗೀತಾ, “ನನ್ನ ಸಹೋದರನಿಗೆ ಸಚಿವ ಸ್ಥಾನ ಸಿಕ್ಕಿರುವುದಕ್ಕೆ ತುಂಬಾ ಖುಷಿಯಾಗುತ್ತಿದೆ. ಇದು ತೋರಿಸಿಕೊಳ್ಳಲಾಗದ ಖುಷಿ, ಆತ ಈ ಸ್ಥಾನಕ್ಕೆ ಬರಲು ಬಹಳ ಕಷ್ಟ ಪಟ್ಟಿದ್ದಾನೆ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಾಗರದಾಚೆಗೂ `ಡೇರ್‌ಡೆವಿಲ್‌ ಮುಸ್ತಾಫಾʼ ಸದ್ದು

ನಂತರ ಮಧು ಬಂಗಾರಪ್ಪ ಮಾತನಾಡಿ, “ನಮಗೆ ಅವಕಾಶ ಕೊಟ್ಟ ಕರ್ನಾಟಕದ ಜನತೆಗೆ ಧನ್ಯವಾದಗಳು. ವಿಶೇಷವಾಗಿ ಶಿವಣ್ಣ ಹಲವು ಕಾಂಗ್ರೆಸ್‌ ನಾಯಕರನ್ನು ಗೆಲ್ಲಿಸಲು ಪ್ರಯತ್ನ ಪಟ್ಟಿದ್ದಾರೆ. ಅವರಿಗೆ ವೈಯಕ್ತಿಕವಾಗಿ ಮತ್ತು ಪಕ್ಷದ ಪರವಾಗಿ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸುತ್ತೇನೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...