ಕನ್ನಡ ವಿರೋಧಿ ಫೋನ್ ಪೇ ವಿರುದ್ಧ ನಟ ಸುದೀಪ್ ಆಕ್ರೋಶ: ರಾಯಭಾರಿ ಒಪ್ಪಂದದಿಂದ ಹೊರಬರುವ ಸೂಚನೆ?

Date:

ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ವಿರೋಧ ಮಾಡಿರುವ ಫೋನ್ ಪೇ ಸಂಸ್ಥೆ ವಿರುದ್ಧ ಕನ್ನಡಿಗರಿಂದ ನಿಷೇಧ ಅಭಿಯಾನ ಆರಂಭವಾಗಿದೆ. ಇದೀಗ ಈ ಅಭಿಯಾನಕ್ಕೆ ನಟ ಸುದೀಪ್ ಬೆಂಬಲವಾಗಿ ನಿಂತಿದ್ದಾರೆ. ಈಗಾಗಲೇ ಫೋನ್ ಪೇಗೆ ಕರ್ನಾಟಕದಲ್ಲಿ ನಟ ಸುದೀಪ್ ಅವರು ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಸುದೀಪ್ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಕನ್ನಡಿಗರಿಗೆ ಉದ್ಯೋಗ ಮೀಸಲಾತಿಯನ್ನು ಹಲವು ಉದ್ಯಮಿಗಳು ವಿರೋಧಿಸಿದ್ದರು. ಹೀಗಾಗಿ ಕೈಗಾರಿಕೋದ್ಯಮಿಗಳ ವಿರುದ್ಧ ಪ್ರತಿಭಟನೆ ಕೂಡ ನಡೆದಿತ್ತು. ಅಲ್ಲದೆ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿಯನ್ನು ಕಡ್ಡಾಯಗೊಳಿಸುವ ಬಗ್ಗೆ ಕರ್ನಾಟಕ ಸರ್ಕಾರದ ಹೊಸ ಮಸೂದೆಯ ವಿರುದ್ಧ ಫೋನ್ ಪೇ ಸಿಇಓ ಸಮೀರ್ ನಿಗಮ್ ಕಮೆಂಟ್ ಮಾಡಿದ್ದರು. ಹೀಗಾಗಿ ಕನ್ನಡಿಗರ ವಿರೋಧಿ ಸಮೀರ್ ನಿಗಮ್ ಒಡೆತನದ ಫೋನ್ ಪೇಯನ್ನು ಮೊಬೈಲ್ ನಿಂದ ಅನ್‌ ಇನ್ಸ್ಟಾಲ್‌ ಮಾಡಿ ಆತನಿಗೆ ಬುದ್ಧಿ ಕಲಿಸಿ ಎಂಬ ಅಭಿಯಾನ ನಡೆಯುತ್ತಿದೆ.

ಈ ಸುದ್ದಿ ಓದಿದ್ದೀರಾ? ತಂಗಲಾನ್ ಟ್ರೈಲರ್ ಬಿಡುಗಡೆ: ಆಗಸ್ಟ್‌ 15ರಿಂದ ಬೆಳ್ಳಿತೆರೆ ಮೇಲೆ ಅಬ್ಬರಿಸಲಿದೆ ಕೋಲಾರದ ಕಥೆ ‘ತಂಗಲಾನ್’

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯ ಕನ್ನಡಿಗರ ವಿರುದ್ಧ ನಿಂತಿರುವ ಕಂಪನಿಯ ಪರ ಪ್ರಚಾರ ಮಾಡದಿರುವ ನಿಲುವಿಗೆ ಸುದೀಪ್ ಬಂದಿದ್ದಾರೆ ಎನ್ನಲಾಗಿದೆ. ಕನ್ನಡಿಗರಲ್ಲಿ ಕ್ಷಮೆ ಕೇಳದಿದ್ದರೆ ಫೋನ್ ಪೇ ಒಪ್ಪಂದ ರದ್ದು ಮಾಡುವ ನಿರ್ಧಾರ ಮಾಡುವ ಸಾಧ್ಯತೆಯಿದೆ.

“ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಕಂಪನಿ, ಹಣಕ್ಕಿಂತಾ ಕನ್ನಡಿಗನಾಗಿ ನನ್ನ ಸ್ವಾಭಿಮಾನ ಮುಖ್ಯ” ಎಂದು ತಮ್ಮ ನಿಲುವು ವ್ಯಕ್ತಪಡಿಸಿದ್ದಾರೆ.

ಕನ್ನಡಿಗರ ವಿರುದ್ಧ ಮಾತನಾಡಿದ್ದ ಫೋನ್ ಪೇ ವಿರುದ್ಧ ಅನ್ ಇನ್ಸ್ಟಾಲ್ ಅಭಿಯಾನ ಆರಂಭಿಸಿದ್ದ ಈ ಹಿನ್ನೆಲೆಯಲ್ಲಿ ಸುದೀಪ್ ಕರುನಾಡ ಜನತೆಗೆ ಬೆಂಬಲ ನೀಡಲು ಮುಂದಾಗಿದ್ದಾರೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...