ಕೊತ್ತಲವಾಡಿ ಸಿನಿಮಾ ಬಗ್ಗೆ ಅಪಪ್ರಚಾರ ಆರೋಪ: ಪೊಲೀಸ್‌ ಠಾಣೆಗೆ ನಟ ಯಶ್ ತಾಯಿ ಪುಷ್ಪಾ ದೂರು

Date:

ಕೊತ್ತಲವಾಡಿ ಸಿನಿಮಾದ ಬಗ್ಗೆ ಅಪಪ್ರಚಾರ ಹಿನ್ನೆಲೆ ಕೆಜಿಎಫ್ ನಟ ಯಶ್ ತಾಯಿ ಪುಷ್ಪಾ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಸ್ವರ್ಣಗೌರಿ ಹಾಗೂ ಪಿಆರ್‌ಒ ಹರೀಶ್ ಸೇರಿ ನಾಲ್ಕು ಮಂದಿಯ ವಿರುದ್ಧ ದೂರು ನೀಡಲಾಗಿದೆ. ಕಳೆದ ಒಂದು ವಾರದ ಹಿಂದೆ ಕೊಟ್ಟಿರುವ ದೂರು ತಡವಾಗಿ ಬೆಳಕಿಗೆ ಬಂದಿದೆ. ಕೊತ್ತಲವಾಡಿ ಸಿನಿಮಾದ ಬಗ್ಗೆ ಅಪಪ್ರಚಾರ ಮಾಡಿ ಕೊಟ್ಟ ಹಣ ಸರಿಯಾಗಿ ಉಪಯೋಗ ಪಡಿಸಿಕೊಂಡಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಎ1 ಹರೀಶ್ ಅರಸು, ಎ2 ಮನು, ಎ3 ನಿತಿನ್, ಎ4 ಮಹೇಶ್ ಗುರು, ಎ5 ಸ್ವರ್ಣಗೌರಿ ವಿರುದ್ಧ ದೂರು ನೀಡಲಾಗಿದೆ. ಸದ್ಯ ಸ್ವರ್ಣಗೌರಿಗೆ ಹೈಗ್ರೌಂಡ್ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಟ್ಟು 64 ಲಕ್ಷ ಹಣ ಪಡೆದು ಸಿನಿಮಾ ಪ್ರಚಾರ ಮಾಡಲಿಲ್ಲ. ಅಲ್ಲದೆ ಚಿತ್ರವನ್ನು ಇವರೇ ಅಪ ಪ್ರಚಾರ ಮಾಡಿದ್ದಾರೆಂದು ಆರೋಪ ಮಾಡಲಾಗಿದೆ. ಅಷ್ಟೇ ಅಲ್ಲದೇ ಇನ್ನು ಹಣಕ್ಕೆ ಬೇಡಿಕೆ ಇಟ್ಟ ಆರೋಪವೂ ಇದೆ. ಹಣ ಕೊಡದೆ ಇದ್ದಲ್ಲಿ ಮನೆ ಬಳಿ ಬಂದು ಗಲಾಟೆ ಮಾಡೋದಾಗಿ ಬೆದರಿಕೆ ಹಾಕಿದ್ದಾಗಿ ಆರೋಪ ಮಾಡಿದ್ದಾರೆ. ಇತ್ತೀಚಿಗೆ ಬೆದರಿಕೆ ಕರೆಗಳು ಬರುತ್ತಿರೋದಾಗಿಯೂ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.

ಇದನ್ನು ಓದಿದ್ದೀರಾ? ತಂತ್ರಜ್ಞಾನವು ಸಿನಿಮಾದಲ್ಲಿ ಏಕರೂಪತೆ ಹೇರುತ್ತಿದೆ: ನಿರ್ದೇಶಕ ಗಿರಿರಾಜ್

ಹರೀಶ್ ಅವರು ಕಳೆದ ಮೇ 18 ರಂದು 10 ಲಕ್ಷ ರೂಪಾಯಿ, ನಂತರ ಮೇ 21 ರಂದು 5 ಲಕ್ಷ ರೂಪಾಯಿ ಪಡೆದಿದ್ದರು. ನಂತರ ಚಿತ್ರದ ಬ್ರಾಂಡ್ ಹೆಸರನ್ನು ಬಳಸಿಕೊಂಡು ವಿವಿಧ ಚಾನೆಲ್‌ಗಳ ಮೂಲಕ ಹೆಚ್ಚುವರಿಯಾಗಿ 24 ಲಕ್ಷ ರೂಪಾಯಿ ಸಂಗ್ರಹಿಸಿದ್ದರು ಎಂದು ಪುಷ್ಪಾ ದೂರಿನಲ್ಲಿ ತಿಳಿಸಿದ್ದಾರೆ. ಒಟ್ಟಾರೆಯಾಗಿ, ಹರೀಶ್ ತನ್ನಿಂದ 64,87,700 ರೂಪಾಯಿ ಪಡೆದಿದ್ದಾರೆ, ಇದರಲ್ಲಿ ಜುಲೈ 31 ರಂದು ಮುದ್ರಣ ಮಾಧ್ಯಮ ಜಾಹೀರಾತಿಗಾಗಿ 4 ಲಕ್ಷ ರೂಪಾಯಿ ನಗದು ಸೇರಿದೆ.

ಇಷ್ಟೆಲ್ಲಾ ಹಣ ಪಡೆದುಕೊಂಡರೂ ಆಗಸ್ಟ್ 1ರಂದು ಬಿಡುಗಡೆಯಾಗಿದ್ದ ಚಿತ್ರಕ್ಕೆ ಯಾವುದೇ ಪ್ರಚಾರ ಮಾಡಿರಲಿಲ್ಲ. ಜುಲೈ 23 ರಂದು ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು, ಆದರೆ ಹರೀಶ್ ಪ್ರಚಾರ ಕಾರ್ಯವನ್ನು ನಿರ್ವಹಿಸದ ಕಾರಣ ನಟರೇ ತಮ್ಮ ಸ್ವಂತ ಖರ್ಚಿನಿಂದ 21,75,000 ರೂಪಾಯಿ ಖರ್ಚು ಮಾಡಬೇಕಾಯಿತು ಎಂದು ಪುಷ್ಪಾ ಹೇಳಿಕೊಂಡಿದ್ದಾರೆ. ಹಲವಾರು ಸಾಮಾಜಿಕ ಮಾಧ್ಯಮ ಮತ್ತು ಚಲನಚಿತ್ರ ಮಾಧ್ಯಮ ಪ್ರವರ್ತಕರಿಗೆ ಸಂಬಳ ನೀಡಿಲ್ಲ ಎಂದು ಕೂಡ ಆರೋಪಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...