ಅನಾರೋಗ್ಯದಿಂದ ಬಳಲುತ್ತಿರುವ ನಟಿ, ಬಿಜೆಪಿ ನಾಯಕಿ ಖುಷ್ಬೂ; ಬದಲಾದ ಮುಖಚರ್ಯೆ

Date:

ನಟಿಯಾಗಿ ಗುರುತಿಸಿಕೊಂಡು ರಾಜಕೀಯದಲ್ಲೂ ಸಕ್ರಿಯವಾಗಿದ್ದ ಖ್ಯಾತ ನಟಿ ಖುಷ್ಬೂ ಸುಂದರ್ ಅವರು ಅನಾರೋಗ್ಯದಿಂದ ಬಳಲುತ್ತಿರುವುದಾಗಿ ವರದಿಯಾಗಿದೆ.

ಇತ್ತೀಚೆಗೆ, ಖುಷ್ಬೂ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದು, ಅವರು ಕೆಲವು ಗಾಯಗಳಿಂದ ಬಳಲುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಸದ್ಯ ಅವರ ಫೋಟೋಗಳು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದ್ದು, ಅಭಿಮಾನಿಗಳು ಫೋಟೋ ನೋಡಿ, ಆಘಾತಕ್ಕೊಳಗಾಗಿದ್ದಾರೆ.

ಫೋಟೋಗಳನ್ನು ನೋಡಿದ ನಂತರ ಅವರ ಅಭಿಮಾನಿಗಳು ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಖುಷ್ಬೂ ಅವರು ತಮ್ಮ ಎಡಗೈಗೆ ಆಗಿರುವ ಗಾಯಗಳ ಫೋಟೋಗಳನ್ನು ಹಂಚಿಕೊಂಡಿದ್ದು, ಸ್ನಾಯು ಅಲರ್ಜಿ ಇದೆ. ತೀವ್ರವಾದ ನೋವಿನಿಂದ ಬಳಲುತ್ತಿದ್ದರೂ, ಗುಣಮುಖವಾಗುತ್ತಿದ್ದೇನೆ ಎಂದು ಅಭಿಮಾನಿಯೋರ್ವರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಮಾನ್ಯವಾಗಿ, ಕಠಿಣ ವ್ಯಾಯಾಮದಿಂದಾಗಿ ಕ್ರೀಡಾಪಟುಗಳು ಈ ರೀತಿಯ ಸ್ನಾಯು ಅಲರ್ಜಿ ಸಮಸ್ಯೆಯನ್ನು ಎದುರಿಸುತ್ತಾರೆ. ಖುಷ್ಬೂ ಕೂಡ ಈಗ ಅದೇ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ.

ನಟಿ ಖುಷ್ಬೂ ಅವರು ಸ್ವಲ್ಪ ದಪ್ಪಗಿದ್ದರು.. ಆದರೆ ಕಠಿಣ ವ್ಯಾಯಾಮದಿಂದಾಗಿ ತುಂಬಾ ಸ್ಲಿಮ್ ಆಗಿದ್ದಾರೆ. ಹೀಗಾಗಿ ಈ ಸ್ನಾಯು ಸಮಸ್ಯೆ ಈಗ ಅವರಿಗೆ ಒಂದು ಸಮಸ್ಯೆಯಾಗಿ ಪರಿಣಮಿಸಿದೆ ಎನ್ನಲಾಗಿದೆ.

ಈ ಅನಾರೋಗ್ಯದ ಹೊರತಾಗಿಯೂ ಚಿತ್ರೀಕರಣದಲ್ಲಿ ಭಾಗವಹಿಸುತ್ತಿದ್ದಾರೆ. ಇದನ್ನು ಅರಿತಿರುವ ಅಭಿಮಾನಿಗಳು ಅವರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಸೂಚಿಸುತ್ತಿದ್ದಾರೆ. ಕೆಲವು ವರ್ಷಗಳ ಹಿಂದೆ ರಾಜಕೀಯ ಪ್ರವೇಶಿಸಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಖುಷ್ಬೂ ಆ ಬಳಿಕ., ಬಿಜೆಪಿ ಸೇರಿಕೊಂಡಿದ್ದರು. ಬಿಜೆಪಿ ಸೇರಿದ ಬಳಿಕ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾಗಿದ್ದರು.

ತಮಿಳು, ತೆಲುಗು, ಕನ್ನಡ, ಮಲಯಾಳಂ ಸೇರಿದಂತೆ ಹಲವು ಚಿತ್ರರಂಗಗಳಲ್ಲಿ ಖುಷ್ಬೂ ಸುಂದರ್ ತಮ್ಮದೇ ಛಾಪು ಮೂಡಿಸಿಕೊಂಡವರು. 1980ರಲ್ಲಿ ‘ದಿ ಬರ್ನಿಂಗ್ ಟ್ರೇನ್’ ಎಂಬ ಸಿನಿಮಾದಲ್ಲಿ ಬಾಲನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ರಜನಿಕಾಂತ್ ಅವರ ‘ಧರ್ಮಾತಿನ್ ತಲೈವಾನ್’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಅವರು ಕೆಲ ಹಿಂದಿ ಚಿತ್ರಗಳಲ್ಲಿ ನಟಿಸಿದರು. ದಕ್ಷಿಣ ಭಾರತದ ಸಿನಿಮಾಗಳು ಖುಷ್ಬೂಗೆ ದೊಡ್ಡ ಜನಪ್ರಿಯತೆ ತಂದುಕೊಟ್ಟಿತು. ಖುಷ್ಬೂ ಅವರು ಒಟ್ಟೂ 200 ಸಿನಿಮಾಗಳಲ್ಲಿ ನಟಿಸಿದ್ದು, ಅದರಲ್ಲಿ 100 ಸಿನಿಮಾಗಳು ತಮಿಳು ಭಾಷೆಗೆ ಸೇರಿವೆ.

ಸ್ಯಾಂಡಲ್‌ವುಡ್ ನಟ ರವಿಚಂದ್ರನ್ ಅವರ ರಣಧೀರ ಸಿನಿಮಾದ ಮೂಲಕ ಕನ್ನಡ ಚಿತ್ರರಂಗದಲ್ಲೂ ಪದಾರ್ಪಣೆಗೈದಿದ್ದ ಖುಷ್ಬೂ ಸುಂದರ್, ಸರಿಸುಮಾರು 20ಕ್ಕೂ ಅಧಿಕ ಕನ್ನಡ ಸಿನಿಮಾದಲ್ಲಿ ನಟಿಸಿದ್ದಾರೆ.

ನಟಿ, ರಾಜಕಾರಣಿಯಾಗಿ ಗುರುತಿಸಿಕೊಂಡಿರುವ ಖುಷ್ಬೂ ಸುಂದರ್ ಅವರು ಕೆಲ ವರ್ಷಗಳ ಹಿಂದೆ ತಮ್ಮ ತಂದೆ ನಡೆಸಿದ ಲೈಂಗಿಕ ದೌರ್ಜನ್ಯದ ಬಗ್ಗೆಯೂ ಮುಕ್ತವಾಗಿ ಮಾತನಾಡಿದ್ದರು. “8ನೇ ವಯಸ್ಸಿನಿಂದ ನನ್ನ ಮೇಲೆ ದೌರ್ಜನ್ಯ ನಡೆಯಲು ಶುರುವಾಯ್ತು, 15ನೇ ವಯಸ್ಸಿಗೆ ಮಾತನಾಡಲು ಆರಂಭಿಸಿದೆ. ತಾಯಿಯ ಬಳಿ ಈ ಬಗ್ಗೆ ಹೇಳಿದರೂ ಅವಳು ನಂಬುತ್ತಿರಲಿಲ್ಲ ಎಂಬ ಭಯವಿತ್ತು” ಎಂದು ಖುಷ್ಬೂ ಹೇಳಿದ್ದರು.

ಇದನ್ನು ಓದಿದ್ದೀರಾ? ಕಾಂಗ್ರೆಸ್‌ ನಾಯಕರು ಕೋಮುವಾದದ ಪರವೋ, ವಿರುದ್ಧವೋ?

ಕೋವಿಡ್ ಲಾಕ್‌ಡೌನ್‌ ನಂತರದಲ್ಲಿ ಖುಷ್ಬೂ ಸುಂದರ್ ಅವರು ಆರೋಗ್ಯದ ಕಡೆಗೆ ಹೆಚ್ಚು ಗಮನ ನೀಡಿ, ಡಯೆಟ್, ವರ್ಕೌಟ್ ಮೂಲಕ ಭಾರೀ ಪ್ರಮಾಣದಲ್ಲಿ ಸಣ್ಣಗಾಗಿದ್ದರು. ಈಗ ಅದುವೇ ಅವರಿಗೆ ಈಗ ಸ್ನಾಯು ಸಮಸ್ಯೆ ತಂದೊಡ್ಡಿರುವುದಾಗಿ ವರದಿಯಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...