ಹೈದರಾಬಾದ್‌ | ಕಾಲ್ತುಳಿತ ಪ್ರಕರಣ: ಪುಷ್ಪಾ 2 ನಾಯಕ ಅಲ್ಲು ಅರ್ಜುನ್‌ ಬಂಧನ

Date:

ಪುಷ್ಪಾ 2 ಸಿನಿಮಾದ ಯಶಸ್ಸಿನ ಸಂಭ್ರಮದಲ್ಲಿದ್ದ ಅಲ್ಲು ಅರ್ಜುನ್ ಅವರಿಗೆ ಪೊಲೀಸರು ಆಘಾತ ನೀಡಿದ್ದಾರೆ. ಹೈದರಾಬಾದ್‌ನ ಸಂಧ್ಯಾ ಚಿತ್ರಮಂದಿರದಲ್ಲಿ ಪುಷ್ಪಾ 2 ಸಿನಿಮಾದ ಪ್ರೀಮಿಯರ್ ಶೋ ವೇಳೆ ನಡೆದ ಘಟನೆಗೆ ಸಂಬಂಧಿಸಿದಂತೆ ನಾಯಕ ನಟ ಅಲ್ಲು ಅರ್ಜುನ್‌ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ.

ನಟನನ್ನು ಚಿಕ್ಕಡಪಲ್ಲಿ ಠಾಣೆಗೆ ಕರೆದೊಯ್ಯಲಾಗಿದೆ. ಡಿ. 4ರಂದು ಪುಷ್ಪಾ 2 ಬಿಡುಗಡೆಯಾಗುವ ಸಂದರ್ಭ ಸಂಧ್ಯಾ ಚಿತ್ರಮಂದಿರದಲ್ಲಿ ನೂಕುನುಗ್ಗಲು ಉಂಟಾಗಿದ್ದು ಮಹಿಳೆ ಮೃತಪಟ್ಟಿದ್ದರು. ಕಾಲ್ತುಳಿತದಲ್ಲಿ ರೇವತಿ ಎಂಬ ಮಹಿಳೆ ಸಾವನ್ನಪ್ಪಿದ್ದರು. ಕಾಲ್ತುಳಿತ ಘಟನೆ ಕುರಿತು ಚಿಕ್ಕಡಪಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

‘ಪುಷ್ಪಾ-2’ ವೀಕ್ಷಣೆ ವೇಳೆ ಮಹಿಳೆ ಸಾವು; ಕುಟುಂಬಕ್ಕೆ ನೆರವು ನೀಡುತ್ತೇವೆಂದ ಅಲ್ಲು ಅರ್ಜುನ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಕೂಡ ಪೊಲೀಸರು ಆರೋಪಿಯನ್ನಾಗಿ ಸೇರಿಸಿದ್ದಾರೆ. ಆದರೆ ಅಲ್ಲು ಅರ್ಜುನ್ ಈಗಾಗಲೇ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಸಂಧ್ಯಾ ಚಿತ್ರಮಂದಿರದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆಯ ಬಗ್ಗೆ ಅಲ್ಲು ಅರ್ಜುನ್ ಈಗಾಗಲೇ ಪ್ರತಿಕ್ರಿಯಿಸಿದ್ದರು.

ಮೃತರ ಕುಟುಂಬಕ್ಕೆ ಎಲ್ಲ ರೀತಿಯಿಂದಲೂ ನೆರವು ನೀಡುವುದಾಗಿ ನಟ ಭರವಸೆ ನೀಡಿದ್ದರು.
ನನ್ನ ಪರವಾಗಿ ಸಂತ್ರಸ್ತ ಕುಟುಂಬಕ್ಕೆ 25 ಲಕ್ಷ ರೂ. ಅಲ್ಲದೆ, ನಮ್ಮ ತಂಡದಿಂದ ಯಾವುದೇ ಸಹಾಯವನ್ನು ನೀಡಲು ನಾವು ಸಿದ್ಧರಿದ್ದೇವೆ. ಅವರಿಗೆ ನನ್ನ ಕೈಲಾದಷ್ಟು ಸಹಾಯ ಮಾಡುತ್ತೇನೆ ಎಂದು ಅಲ್ಲು ಅರ್ಜುನ್ ತಿಳಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಸೆರಗ ಸರ್ಸೆʼ ಚೀಪ್‌ ಗಿಮಿಕ್‌ನ ಭಾಗ- ಕಂಗನಾ ಗುಡುಗು, ಅರ್ಮಾನ್‌ ಅಸಹನೆ

ಪ್ರೇಮ್‌ ನಿರ್ದೇಶನದ ಕೆಡಿ ದ ಡೆವಿಲ್‌ ಸಿನಿಮಾದ ವಿವಾದಿತ ಹಾಡು ʼಸೆರಗ...

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...