‘ಪುಷ್ಪಾ-2’ ನಟನೆಗಾಗಿ ಅಲ್ಲು ಅರ್ಜುನ್‌ಗೆ 300 ಕೋಟಿ ರೂ. ಸಂಭಾವನೆ; ರಶ್ಮಿಕಾ ಪಡೆದದ್ದೆಷ್ಟು?

Date:

ತೆಲುಗು ಚಿತ್ರರಂಗದ ಸ್ಟಾರ್‌ ನಟ ಅಲ್ಲು ಅರ್ಜುನ್ ಅವರ ಬಹುನಿರೀಕ್ಷಿತ ಚಿತ್ರ ‘ಪುಷ್ಪಾ-2: ದ ರೂಲ್’ ಸಿನಿಮಾ ಬಿಡುಗಡೆಯಾಗಿದೆ. ಈಗಾಗಲೇ, ಮುಂಗಡ ಬುಕಿಂಗ್ ಮತ್ತು ಮೊದಲ ದಿನ ಕಲೆಕ್ಷನ್‌ನಿಂದಾಗಿ 250 ಕೋಟಿ ರೂ. ಗಳಿಸಿದೆ ಎಂದು ವರದಿಯಾಗಿದೆ. ಈ ನಡುವೆ, ಚಿತ್ರದಲ್ಲಿ ನಟಿಸಿದ ಕಲಾವಿದರ ಸಂಭಾವನೆ ವಿಚಾರ ಗಮನ ಸೆಳೆಯುತ್ತಿದೆ. ಸಿನಿಮಾದಲ್ಲಿನ ನಟನೆಗಾಗಿ ಅಲ್ಲು ಅರ್ಜುನ್‌ ಅವರು 300 ಕೋಟಿ ರೂ. ಪಡೆದಿದ್ದಾರೆ. ಅವರೊಂದಿಗೆ ಬಣ್ಣ ಹಚ್ಚಿದ್ದ ನಾಯಕ ನಟಿ ರಶ್ಮಿಕಾ ಮಂದಣ್ಣ ಅವರು 10 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ.

ಪುಷ್ಪಾ-2 ಸಿನಿಮಾವನ್ನು 400ರಿಂದ 500 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ನಿರ್ಮಾಣ ಸಂಸ್ಥೆ ಮೈತ್ರಿ ಮೂವೀಸ್‌ ಹೇಳಿಕೊಂಡಿದೆ. ಈ ಪೈಕಿ, ಕಲಾವಿದರ ಸಂಭಾವನೆಗಾಗಿಯೇ ಹೆಚ್ಚು ಹಣವನ್ನು ಚಿತ್ರತಂಡ ಖರ್ಚು ಮಾಡಿದೆ. ಅಲ್ಲು ಅರ್ಜುನ್‌ಗೆ 300 ಕೋಟಿ ರೂ., ರಶ್ಮಿಕಾಗೆ 10 ಕೋಟಿ ರೂ. ಕೊಟ್ಟಿದೆ. ಅಲ್ಲದೆ, ಬನ್ವರ್ ಸಿಂಗ್ ಶೆಖಾವತ್ ಪಾತ್ರದಲ್ಲಿ ನಟಿಸಿರುವ ನಟ ಫಹಾದ್ ಫಾಸಿಲ್ ಅವರಿಗೆ 8 ಕೋಟಿ ರೂ. ನೀಡಿದೆ. ‘ಕಿಸಕ್’ ಹಾಡಿನಲ್ಲಿ ಮಾತ್ರವೇ ಕಾಣಿಸಿಕೊಂಡಿರುವ ನಟಿ ಶ್ರೀಲೀಲಾ ಅವರಿಗೆ 2 ಕೋಟಿ ರೂ. ನೀಡಿದೆ. ಈ ಹಿಂದೆ, ಪುಷ್ಪ-1ರಲ್ಲಿ ‘ಊ ಅಂಟಾವ’ ಹಾಡಿನಲ್ಲಿ ಕಾಣಿಸಿಕೊಂಡಿದ್ದ ನಟಿ ಸಮಂತಾ ಅವರು 5 ಕೋಟಿ ರೂ. ಪಡೆದಿದ್ದರು.

ಥಿಯೇಟರ್‌ಗಳಲ್ಲಿ ಅಬ್ಬರಿಸುತ್ತಿರುವ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆದಾಗ್ಯೂ, ಸಿನಿಮಾ ಬಿಡುಗಡೆಗೂ ಮುನ್ನವೇ ಮುಂಗಡ ಬುಕಿಂಗ್‌ನಲ್ಲಿಯೇ 100 ಕೋಟಿ ರೂ. ಗಳಿಸಿದೆ. ಮೊದಲ ದಿನದ ಕಲೆಕ್ಷನ್‌ನಲ್ಲಿ 150 ಕೋಟಿ ರೂ. ಬಾಚಿಕೊಂಡಿದೆ. ಅಲ್ಲದೆ, ಮಾಧ್ಯಮಗಳ ವರದಿಗಳ ಪ್ರಕಾರ, OTT ಹಕ್ಕುಗಳು, ಉಪಗ್ರಹ ಹಕ್ಕುಗಳು, ಹಾಡುಗಳ ಹಕ್ಕುಗಳ ಮಾರಾಟದ ಮೂಲಕವೇ ಸುಮಾರು 1,000 ಕೋಟಿ ರೂ. ಗಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಂಧ್ರಪ್ರದೇಶದಲ್ಲಿ ಪುಷ್ಪಾ-2 ಸಿನಿಮಾ ಕಾರಣಕ್ಕಾಗಿಯೇ ಟಿಕೆಟ್‌ ದರ ಹೆಚ್ಚಿಸಲು ಆಂಧ್ರ ಸರ್ಕಾರ ಅನುಮತಿ ನೀಡಿದ್ದು, ಟಿಕೆಟ್‌ ದರವನ್ನು ಮೂರು/ನಾಲ್ಕು ಪಟ್ಟು ಹೆಚ್ಚಿಸಲಾಗಿದೆ. ಸಿನಿಮಾ ಭಾರತದಾದ್ಯಂತ ಸುಮಾರು 40,000 ಸ್ಕ್ರೀನ್‌ಗಳಲ್ಲಿ ಪ್ರದರ್ಶನವಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...