ಎದೆ ನೋವಿನಿಂದ ಆಸ್ಪತ್ರೆಗೆ ದಾಖಲಾದ ಸಂಗೀತ ನಿರ್ದೇಶಕ ಎ ಆರ್ ರೆಹಮಾನ್

Date:

ಹಠಾತ್‌ ಎದೆ ನೋವು ಕಾಣಿಸಿಕೊಂಡ ಪರಿಣಾಮ ಖ್ಯಾತ ಸಂಗೀತ ನಿರ್ದೇಶಕ, ಆಸ್ಕರ್‌ ಪ್ರಶಸ್ತಿ ವಿಜೇತ ಎ ಆರ್‌ ರೆಹಮಾನ್ ಅವರನ್ನು ಚೆನ್ನೈನ ಅಪೊಲೊ ಆಸ್ಪತ್ರೆಗೆ ದಾಖಲಾಗಿದೆ. 58 ವರ್ಷದ ರೆಹಮಾನ್ ಅವರ ಆರೋಗ್ಯದ ಬಗ್ಗೆ ತೀವ್ರ ನಿಗಾ ವಹಿಸುತ್ತಿರುವುದಾಗಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಇತ್ತೀಚಿಗಷ್ಟೆ ವಿದೇಶದಿಂದ ವಾಪಸಾದ ನಂತರ ಕುತ್ತಿಗೆ ಭಾಗದಲ್ಲಿನ ನೋವು ಉಂಟಾದ ಕಾರಣ ಚಿಕಿತ್ಸೆ ಪಡೆದುಕೊಂಡಿದ್ದರು. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. ರೆಹಮಾನ್‌ ಅವರು ಬೇಗ ಚೇತರಿಸಿಕೊಳ್ಳಲೆಂದು ಅವರ ಅಭಿಮಾನಿಗಳು ಸಾಮಾಜಿಕ ಮಾಧ್ಯಮದ ಮೂಲಕ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಕೆಲ ವಾರಗಳ ಹಿಂದೆ ರೆಹಮಾನ್‌ ಅವರ ಪತ್ನಿ ಸಾಯಿರಾ ಬಾನು ಕೂಡ ಅನಾರೋಗ್ಯದ ಕಾರಣ ಚಿಕಿತ್ಸೆ ಪಡೆದುಕೊಂಡಿದ್ದರು. ಅವರನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಲೈಂಗಿಕ ಕಾರ್ಯಕರ್ತೆಯ ನೋವು-ನಲಿವುಗಳ ಕಥೆ ‘ಅನೋರಾ’ಗೆ ಐದು ಆಸ್ಕರ್‌ ಪ್ರಶಸ್ತಿಗಳ ಗರಿ

ಸಾಯಿರಾ ಬಾನು ಅವರು ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ತುರ್ತು ಸಮಯದಲ್ಲಿಯೂ ಅವರು ಬೇಗನೆ ಚೇತರಿಸುಕೊಳ್ಳುವುದಕ್ಕೆ ಗಮನ ನೀಡುತ್ತಿದ್ದಾರೆ. ರೆಹಮಾನ್‌ ಅವರ ಆಪ್ತರು ಹಾಗೂ ಅಭಿಮಾನಿಗಳು ಸಾಯಿರಾ ಅವರು ಗುಣಮುಖರಾಗಲು ಬೆಂಬಲ ವ್ಯಕ್ತಪಡಿಸಿರುವುದಕ್ಕೆ ಸಾಯಿರಾ ಕೃತಜ್ಞತೆ ಸಲ್ಲಿಸಿರುವುದಾಗಿ ಸಾಯಿರಾ ಅವರ ವಕೀಲರಾದ ವಂದನಾ ಶಿವ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದರು.

ಎ ಆರ್ ರೆಹಮಾನ್‌ ಅವರು ಸಾಯಿರಾ ಅವರನ್ನು 1995ರಲ್ಲಿ ವಿವಾಹವಾಗಿದ್ದು, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನಿದ್ದಾನೆ. ರೆಹಮಾನ್‌ ಅವರು ಹಲವು ಭಾಷೆಯ ನೂರಾರು ಚಿತ್ರಗಳಿಗೆ ಸಂಗೀತ ನಿರ್ದೇಶನ ನೀಡಿದ್ದಾರೆ. 2009 ರಲ್ಲಿ ಸ್ಲಂ ಡಾಗ್‌ ಮಿಲೇನಿಯರ್‌ ಚಿತ್ರದ ಸಂಗೀತ ನಿರ್ದೇಶನಕ್ಕಾಗಿ 2 ಆಸ್ಕರ್ ಪ್ರಶಸ್ತಿ ಲಭಿಸಿತ್ತು.

ರೆಹಮಾನ್ ಅವರು ನಿರ್ಲಜೀಕರಣದ ಪ್ರಯುಕ್ತ ಅವರು ಅನಾರೋಗ್ಯಕ್ಕೀಡಾಗಿದ್ದರು. ಚಿಕಿತ್ಸೆ ನೀಡಲಾಗಿದ್ದು, ಕೆಲವು ಪರೀಕ್ಷೆಗಳನ್ನು ನಡೆಸಲಾಗಿದೆ. ಅಭಿಮಾನಿಗಳ ಪ್ರಾರ್ಥನೆಯಿಂದ ಅವರು ಆರೋಗ್ಯವಾಗಿದ್ದಾರೆ ಎಂದು ಪುತ್ರ ಅಮೀನ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿದ್ದಾರೆ. ಸದ್ಯ ರೆಹಮಾನ್‌ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...