ಹಿಂದಿ ಬದಲು ತಮಿಳು ಮಾತಾಡುವಂತೆ ಪತ್ನಿಗೆ ಹೇಳಿದ ತಾಯ್ನುಡಿ ಪ್ರೇಮಿ ಎ.ಆರ್‌ ರೆಹಮಾನ್‌

Date:

ʼವಿಕಟನ್‌ʼ ಸಿನೆಮಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಿದ್ದ ದಂಪತಿ

ಪತ್ನಿಗೆ, ದಯವಿಟ್ಟು ತಮಿಳಿನಲ್ಲೇ ಮಾತನಾಡು ಹಿಂದಿ ಬೇಡ ಎಂದ ರೆಹಮಾನ್‌

ಖ್ಯಾತ ಚಲನಚಿತ್ರ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್, ಪ್ರಶಸ್ತಿ ಪ್ರದಾನ ಸಮಾರಂಭವೊಂದರಲ್ಲಿ ಹಿಂದಿ ಬದಲು ತಮಿಳಿನಲ್ಲಿ ಮಾತಾಡುವಂತೆ ತಮ್ಮ ಪತ್ನಿಗೆ ಹೇಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಕಟನ್ ಸಿನೆಮಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತಮ್ಮೊಂದಿಗೆ ಸ್ಮರಣ ಫಲಕ ಸ್ವೀಕರಿಸಿ ಕೆಲ ಮಾತುಗಳನ್ನು ಆಡುವಂತೆ ಪತ್ನಿ ಸಾಯಿರಾ ಬಾನು ಅವರನ್ನು ವೇದಿಕೆಗೆ ಕರೆಯುತ್ತಾರೆ ರೆಹಮಾನ್. ಪತಿ ಕೃತಜ್ಞತೆ ಸಲ್ಲಿಸಿ ತಮ್ಮ ಜೊತೆ ಬರುವಂತೆ ಕರೆದಾಗ ಭಾವುಕರಾಗುವ ಸಾಯಿರಾ ವೇದಿಕೆಯೆಡೆಗೆ ನಡೆಯುತ್ತಾರೆ. ಟ್ರೋಫಿಯನ್ನು ತಮಗೆ ಒಪ್ಪಿಸಿದ ಪತಿಯನ್ನು ಆಲಿಂಗಿಸುತ್ತಾರೆ. ಕೆಲ ಮಾತುಗಳನ್ನು ಆಡುವಂತೆ ಪತ್ನಿಗೆ ಹೇಳುವ ರೆಹಮಾನ್, ಆಕೆ ಮೈಕ್‌ನತ್ತ ತೆರಳುತ್ತಿದ್ದಂತೆ ‘ದಯವಿಟ್ಟು ತಮಿಳಿನಲ್ಲೇ ಮಾತನಾಡು, ಹಿಂದೀ ಬೇಡ’ ಎನ್ನುತ್ತಾರೆ.

ಸಾಯಿರಾ ಕೊಂಚ ತಬ್ಬಿಬ್ಬಾಗಿ “ಸ್ಸಾರೀ, ನನಗೆ ತಮಿಳಿನಲ್ಲಿ ಸರಾಗವಾಗಿ ಮಾತಾಡಲು ಬರುವುದಿಲ್ಲ, ದಯಮಾಡಿ ಕ್ಷಮಿಸಿ. ಅವರ ಕೊರಳು ನನ್ನ ಅಚ್ಚುಮೆಚ್ಚು. ಹೀಗಾಗಿ ನಾನು ‘ಸೂಪರ್ ಎಕ್ಸೈಟ್’ ಆಗಿದ್ದೇನೆ. ಅವರ (ರೆಹಮಾನ್) ದನಿಯೊಂದಿಗೆ ಪ್ರೇಮಕ್ಕೆ ಬಿದ್ದೆ ನಾನು. ಇಷ್ಟು ಮಾತ್ರ ಹೇಳಬಲ್ಲೆ” ಎಂದು ಮಾತು ಮುಗಿಸುತ್ತಾರೆ.

ಈ ಸುದ್ದಿ ಓದಿದ್ದೀರಾ? ‘ಅಗ್ನಿಸಾಕ್ಷಿ’ ಧಾರವಾಹಿ ನಟ ಸಂಪತ್ ಜಯರಾಮ್‌ ಆತ್ಮಹತ್ಯೆ

ರೆಹಮಾನ್ ತಮಿಳು ಭಾಷೆಯ ಪ್ರತಿಪಾದಕರು. ಭಿನ್ನ ರಾಜ್ಯಗಳ ಜನ ಪರಸ್ಪರ ಭೇಟಿಯಾದಾಗ ಇಂಗ್ಲಿಷ್ ಬದಲು ಹಿಂದಿಯಲ್ಲಿ ಮಾತಾಡಬೇಕೆಂದು ಗೃಹಮಂತ್ರಿ ಅಮಿತ್ ಶಾ ಕಳೆದ ವರ್ಷ ಅಪ್ಪಣೆ ಕೊಡಿಸಿದ್ದಾಗ ರೆಹಮಾನ್ ಅವರು ಮನೋನ್ಮಣಿಯಂ ಸುಂದರಂ ಪಿಳ್ಳೈ ಬರೆದು ಎಂ.ಎಸ್.ವಿಶ್ವನಾಥನ್ ಸಂಗೀತಕ್ಕೆ ಅಳವಡಿಸಿದ್ದ ತಮಿಳು ನಾಡಗೀತೆಗೆ ಸಂಬಂಧಿಸಿದ ತಮಿಳು ತಾಯಿಯ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಪ್ರತಿಕ್ರಿಯಿಸಿದ್ದರು.

ರೆಹಮಾನ್ ಸಾಯಿರಾ 1995ರಲ್ಲಿ ವಿವಾಹವಾಗಿದ್ದರು. ರೆಹಮಾನ್ ತಾಯಿಯವರೇ ಸಾಯಿರಾ ಅವರನ್ನು ಹುಡುಕಿ ಮದುವೆ ಏರ್ಪಾಡು ಮಾಡಿದ್ದರು. ಹೆಚ್ಚು ತೊಂದರೆ ಕೊಡದೆ, ಸ್ಫೂರ್ತಿ ತುಂಬುವ ವಧುವನ್ನು ಹುಡುಕಿಕೊಡುವಂತೆ ತಾಯಿಯನ್ನು ಕೇಳಿದ್ದರಂತೆ ರೆಹಮಾನ್.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...