‘RCB ಸೋಲಿಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಕಾರಣ’ ಎಂದು ಅವಹೇಳನಕಾರಿ ಟ್ವೀಟ್: ಕಮಿಷನರ್‌ಗೆ ದೂರು

Date:

ಕನ್ನಡ ಚಿತ್ರರಂಗದ ನಟ, ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್  ಅವರು ಇತ್ತೀಚೆಗೆ ಆರ್​ಸಿಬಿ ಅನ್​ಬಾಕ್ಸಿಂಗ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆ ಬಳಿಕ ನಡೆದ ಪಂದ್ಯಗಳಲ್ಲಿ ಆರ್​ಸಿಬಿ ಸೋಲು ಕಾಣುತ್ತಿದೆ. ನಾಲ್ಕು ಪಂದ್ಯಗಳ ಪೈಕಿ ಮೂರು ಪಂದ್ಯಗಳನ್ನು ಬೆಂಗಳೂರು ತಂಡ ಸೋತಿದೆ. ಇದಕ್ಕೆ ಕೆಲವರು ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರನ್ನು ಹೊಣೆ ಮಾಡಿ, ಅವರ ಬಗ್ಗೆ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದಾರೆ.

ಇದನ್ನು ಖಂಡಿಸಿರುವ ಅಪ್ಪು ಅಭಿಮಾನಿಗಳ ಸಂಘಟನೆಯಾದ ‘ಅಪ್ಪು ಹುಡುಗರು ಕರ್ನಾಟಕ’ ಕಡೆಯಿಂದ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ.

ಕಳೆದ ಮಾರ್ಚ್ ತಿಂಗಳ 19ನೇ ತಾರೀಕಿನಂದು ಬೆಂಗಳೂರಿನ ಆರ್‌ಸಿಬಿ ತಂಡದ ಜೆರ್ಸಿ ಉದ್ಘಾಟನಾ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರನ್ನು ಆಹ್ವಾನಿಸಲಾಗಿತ್ತು. ಅದರಂತೆ ಅಶ್ವಿನಿ ಅವರು ಆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದಾದ ನಂತರ ಐಪಿಎಲ್ ಪ್ರಾರಂಭವಾಗಿ ಆರ್‌ಸಿಬಿ ತಂಡವು ಕೆಲ ಪಂದ್ಯಗಳಲ್ಲಿ ಸೋತ ಕಾರಣ ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್​ನಲ್ಲಿ ‘ಗಜ ಪಡೆ’ ಎಂಬ ನಕಲಿ ಖಾತೆ ಸೃಷ್ಟಿಸಿ, “ಗಂಡನನ್ನು ಕಳೆದುಕೊಂಡಿರುವ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಆ ಕಾರ್ಯಕ್ರಮಕ್ಕೆ ಬಂದಿದ್ದೇ ಆರ್‌ಸಿಬಿ ತಂಡದ ಸೋಲಿಗೆ ಕಾರಣ ಎಂದು ಅಶ್ವಿನಿ ಅವರನ್ನು ಸೋಲಿನ ಹೊಣೆ ಮಾಡಿದ್ದಲ್ಲದೇ, ಅಶ್ವಿನಿ ಅವರನ್ನು ಕೆಟ್ಟದಾಗಿ ನಿಂದಿಸಿ ಪೋಸ್ಟ್ ಮಾಡಲಾಗಿದೆ” ಎಂದು ದೂರಿನಲ್ಲಿ ವಿವರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

”ಇದಾದ ನಂತರ ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದಾಗ ‘ಗಜ ಪಡೆ’ ಎಂಬ ನಕಲಿ ಖಾತೆಯ ಹೆಸರನ್ನು ‘ಸುದೀಪ್ ಅಭಿಮಾನಿ’ ಎಂದು ಬದಲಾಯಿಸಿ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿಗಳು ಹಾಗೂ ಸುದೀಪ್ ಅವರ ಅಭಿಮಾನಿಗಳ ನಡುವೆ ಭಿನ್ನಾಭಿಪ್ರಾಯ ಉಂಟಾಗುವಂತೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿದ್ದಾನೆ. ಅಶ್ವಿನಿ ಪುನೀತ್ ರಾಜ್ ಕುಮಾರ್ ಮತ್ತು ಸುದೀಪ್ ಅವರಿಗೆ ಅವಮಾನ ಮಾಡಿರುತ್ತಾನೆ. ಈ ಘಟನೆಯಿಂದ ಪುನೀತ್ ಅಭಿಮಾನಿಗಳಿಗೆ ತುಂಬಾ ನೋವುಂಟಾಗಿದೆ. ಹಾಗಾಗಿ, ನಕಲಿ ಖಾತೆಯನ್ನು ಸೃಷ್ಟಿಸಿ ಮಹಿಳೆಯನ್ನು ಅವಮಾನಗೈದರಿರುವವನನ್ನು ಶೀಘ್ರದಲ್ಲೇ ಪತ್ತೆ ಹಚ್ಚಿ, ಬಂಧಿಸಿ ಅವನಿಗೆ ತಕ್ಕ ಶಿಕ್ಷೆ ನೀಡಬೇಕಾಗಿ ಕೋರುತ್ತಿದ್ದೇವೆ” ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ ದಯಾನಂದ ಅವರಿಗೆ ನೀಡಿರುವ ದೂರಿನಲ್ಲಿ ಆಗ್ರಹಿಸಲಾಗಿದೆ.

ಖಾತೆಯ ಹೆಸರು ಬದಲಾಯಿಸಿದ ದುಷ್ಕರ್ಮಿ

ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರನ್ನು ಅವಹೇಳನಗೈದು, ಮೊದಲು ಟ್ವೀಟ್ ಮಾಡುವಾಗ Gajapade-ಗಜಪಡೆ (@GAJAPADE6) ಎಂದು ಇತ್ತು. ಈ ಟ್ವೀಟ್‌ನಲ್ಲಿ, “ಶುಭ ಕಾರ್ಯಕ್ಕೆ ಮುತ್ತೈದೆಯರನ್ನು ಕರೆಯಬೇಕು. ಗಂಡ ಸತ್ತ ಮುಂ..ಯರನ್ನು ಕರೀಬಾರದು. ಆರ್‌ಸಿಬಿ ಅನ್‌ಬಾಕ್ಸ್‌ ಇವೆಂಟ್‌ಗೆ ಈ ಮುಂ…ಯನ್ನು ಕರೆದಿದ್ದಕ್ಕೆ ಎಲ್ಲ ಮ್ಯಾಚ್‌ ಸೋಲ್ತಾ ಇದ್ದಾರೆ” ಎಂದು #Yuvarajkumar #PuneethRajkumar #Yuva #Dboss #DevilTheHero ಎಂಬ ಹ್ಯಾಷ್‌ಟ್ಯಾಗ್‌ ಹಾಕಿ ಪೋಸ್ಟ್‌ ಮಾಡಲಾಗಿತ್ತು.

ಈ ಟ್ವೀಟ್ ವೈರಲ್ ಆದ ಬಳಿಕ ಖಾತೆಯನ್ನು ಪ್ರೈವೆಟ್ ಮಾಡಿದ್ದೂ ಅಲ್ಲದೆ, ‘ಸುದೀಪ್ ಅಭಿಮಾನಿ’ ಎಂದು ಬದಲಾಯಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...

‘ಜೋಗಿ’ಯಿಂದ ‘ಕೆಡಿ’ವರೆಗೆ: ಕಲಾತ್ಮಕ ಮೌಲ್ಯಗಳ ಕುಸಿತ?

ʼನಾನು ಎಣ್ಣೆ ಹಾಗೂ ಉಪ್ಪಿನಕಾಯಿಯ ಬಗ್ಗೆ ಬರೆದಿದ್ದೇನೆʼ. ʼಈ ಹಾಡಿನ ಸಾಹಿತ್ಯದಲ್ಲಿ...

ಐಪಿಎಲ್ | ಅತಿ ಹೆಚ್ಚು ವಿಕೆಟ್ ಪಡೆದರೂ ‘ಪರ್ಪಲ್ ಕ್ಯಾಪ್’ ಒಲಿಯದ 5 ದಿಗ್ಗಜ ಬೌಲರ್‌ಗಳು

ಐಪಿಎಲ್ ಇತಿಹಾಸದಲ್ಲಿ ಬೌಲರ್‌ಗಳ ಸಾಧನೆಯನ್ನು ಗುರುತಿಸಲು ಪ್ರತಿ ಆವೃತ್ತಿಯಲ್ಲಿ ಅತಿ ಹೆಚ್ಚು...