ಸಂಬಂಧಗಳ ಮೌಲ್ಯಗಳನ್ನು ಎತ್ತಿ ಹಿಡಿಯುವ ಸಾರ್ವಕಾಲಿಕ ಕೃತಿ ಬೆಟ್ಟದ ಜೀವ: ಪಿ ಶೇಷಾದ್ರಿ

Date:

ಡಾ. ಶಿವರಾಮ ಕಾರಂತ ಅವರ ‘ಬೆಟ್ಟದ ಜೀವ’ ಕೃತಿ ಮಾನವೀಯ ಸಂಬಂಧಗಳ ಮೌಲ್ಯಗಳನ್ನು ಅತ್ಯಂತ ಕಲಾತ್ಮಕವಾಗಿ ಹಿಡಿದಿಟ್ಟಿರುವ ಕೃತಿಯಾಗಿರುವುದರಿಂದಲೇ ಅದು ಇಂದಿಗೂ ಪ್ರಸ್ತುತವಾಗಿದೆ ಹಾಗೆಯೇ ಎಂದಿಗೂ ಪ್ರಸ್ತುತವಾಗಿರುತ್ತದೆ ಎಂದು ಚಲನಚಿತ್ರ ನಿರ್ದೇಶಕ ಪಿ ಶೇಷಾದ್ರಿ ಹೇಳಿದ್ದಾರೆ.

ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರಿನ ಸುರಾನಾ ಕಾಲೇಜಿನಲ್ಲಿ ಕನ್ನಡ ವಿಭಾಗದ ಸಹಯೋಗದೊಂದಿಗೆ ಆಯೋಜಿಸಿದ್ದ, ‘ಅಂಗಳದಲ್ಲಿ ತಿಂಗಳ ಪುಸ್ತಕ’ ಮಾಲಿಕೆಯಡಿ ಮಾತನಾಡುತ್ತಿದ್ದರು. ಪ್ರತೀ ತಿಂಗಳು ಒಂದು ಸಾಹಿತ್ಯ ಕೃತಿಯನ್ನು ಕುರಿತು ಒಬ್ಬ ಗಣ್ಯರು ಮಾತನಾಡುವ ಈ ಯೋಜನೆಯಡಿ ಇಂದು ಪಿ. ಶೇಷಾದ್ರಿ ಅವರು ಡಾ. ಶಿವರಾಮ ಕಾರಂತ ಅವರ ಬಹುಜನಪ್ರಿಯ ಕಾದಂಬರಿ ‘ಬೆಟ್ಟದ ಜೀವ’ ಕುರಿತು ಮಾತನಾಡುತ್ತಿದ್ದರು.

1935ರಲ್ಲಿ ಪ್ರಕಟವಾದ ಈ ಕಾದಂಬರಿ 90 ವರ್ಷಗಳ ನಂತರವು ಚರ್ಚೆಗೆ ಒಳಪಡುತ್ತಿದೆ ಎಂದರೆ ಅದಕ್ಕೆ ಕಾರಣ ಆ ಕೃತಿಯಲ್ಲಿರುವ ಮೌಲ್ಯಗಳು. ಸಂಬಂಧಗಳ ಸೂಕ್ಷ್ಮತೆಯನ್ನು ಅತ್ಯಂತ ಮನೋಜ್ಞವಾಗಿ ವರ್ಣಿತವಾಗಿರುವ ಈ ಕಾದಂಬರಿ ಅನೇಕ ರೂಪಕಗಳಿಗೆ ಮಾದರಿಯಾಗಿದೆ. ವೃದ್ಧ ತಂದೆ- ತಾಯಿಗಳು, ಮನೆ ಬಿಟ್ಟು ಹೋಗಿರುವ ಮಗ, ಆತ ಮರಳಿ ಬರಬಹುದೆನ್ನುವ ನಿರೀಕ್ಷೆ, ಜೊತೆಗಿರುವ ಸಂಬಂಧಿಗಳ ಆತಂಕ ಈ ಎಲ್ಲವೂ ‘ಬೆಟ್ಟದ ಜೀವ’ ಕೃತಿಯಲ್ಲಿ ಒಡಮೂಡಿದೆ. ಮನುಷ್ಯ ಜೀವನದ ಆಂತರಿಕ ತುಮುಲಗಳನ್ನು ತೆರೆದಿಡುವ ಈ ಕಾದಂಬರಿ ಇಂದಿಗೂ ಪ್ರಸ್ತುತವಾಗಿರುವುದು ಇದರ ಕಥಾವಸ್ತುವಿನಿಂದಲೇ ಎಂದು ಶೇಷಾದ್ರಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತೀ ಸಂಬಂಧಗಳ ಮಧ್ಯೆಯೂ ಒಂದು ಸಣ್ಣ ಗುಟ್ಟು ಇರುತ್ತದೆ. ಅದು ಮನುಷ್ಯನ ಬದುಕಿನ ಒಳನೋಟವನ್ನು ಪ್ರತಿನಿಧಿಸುತ್ತದೆ. ಹಾಗೆಂದು ಆ ಗುಟ್ಟುಗಳು ಹಾನಿಕಾರಕವಲ್ಲ. ಸಂಬಂಧಗಳ ಕಟ್ಟುವಿಕೆಗಾಗಿ ಉಳಿಸಿಕೊಂಡಂತಹುದು ಎಂದು ಶೇಷಾದ್ರಿ ಬಣ್ಣಸಿದರು.

ಅಂಕಲ್–ಆಂಟಿ ಎಂದು ಕರೆಯುವ ಪದ್ಧತಿಯನ್ನು ಬಿಟ್ಟು ಅಚ್ಚ ಕನ್ನಡದ ಸಂಬಂಧ ಸೂಚಕಗಳನ್ನು ಇಂದಿನ ಮಕ್ಕಳು ಬಳಸುವ ಪರಿಪಾಠವನ್ನು ಬೆಳೆಸಿಕೊಳ್ಳಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೈಕ್ರೋ ಫೈನಾನ್ಸ್‌ಗೆ ಬಲಿಯಾಗುತ್ತಿರುವ ಬಡವರು; ಸತ್ತಂತಿರುವ ಸರ್ಕಾರ

ಸಮಕಾಲೀನ ಸ್ಥಿತಿಗತಿಗಳ ಬಗ್ಗೆಯೂ ಅವಲೋಕನ ಮಾಡಿದ ಶೇಷಾದ್ರಿ ಅವರು ಪ್ರತಿಭಾ ಪಲಾಯನದ ಬಗ್ಗೆಯೂ ತಮ್ಮ ಅಸಮಾಧಾನ ತೋರಿದರು. ನಮ್ಮ ಮಕ್ಕಳು ನಮ್ಮ ದೇಶದಲ್ಲಿ ಉಳಿಯುವಂತಾಗಬೇಕು ಎಂದರು.

ಸಮಾರಂಭದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ಅವರು ಮಾತನಾಡಿ, ಶೇಷಾದ್ರಿ ಅವರ ಸಾಧನೆಯ ಕುರಿತು ಪ್ರಶಂಸೆ ವ್ಯಕ್ತಪಡಿಸಿದರು. ಕನ್ನಡ ಪುಸ್ತಕ ಪ್ರಾಧಿಕಾರ ಹೊಸ ಚಿಂತನೆಯೊಂದಿಗೆ ಯೋಜನೆಯನ್ನು ರೂಪಿಸಿದ್ದು ಸಾಹಿತ್ಯಾಸಕ್ತರು ಹಾಗೂ ವಿದ್ಯಾರ್ಥಿಗಳು ಅದರ ಲಾಭ ಪಡೆಯಬೇಕು ಎಂದರು. ಸಮಾರಂಭದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಪಿ. ಶೇಷಾದ್ರಿ ಅವರನ್ನು ಸನ್ಮಾನಿಸಲಾಯಿತು.

ಸುರಾನಾ ಕಾಲೇಜಿನ ಪ್ರಾಂಶುಪಾಲರಾದ ಡಾ. ವೀಣಾ ಕೆ.ಎನ್. ಸಮಾರಂಭದಲ್ಲಿ ಉಪಸ್ಥಿತರಿದ್ದರು. ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಸ್ವಾಗತಿಸಿದರು. ಸುರಾನಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ವತ್ಸಲಾ ಮೋಹನ್ ವಂದಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಸೆರಗ ಸರ್ಸೆʼ ಚೀಪ್‌ ಗಿಮಿಕ್‌ನ ಭಾಗ- ಕಂಗನಾ ಗುಡುಗು, ಅರ್ಮಾನ್‌ ಅಸಹನೆ

ಪ್ರೇಮ್‌ ನಿರ್ದೇಶನದ ಕೆಡಿ ದ ಡೆವಿಲ್‌ ಸಿನಿಮಾದ ವಿವಾದಿತ ಹಾಡು ʼಸೆರಗ...

ಕನ್ನಡಿಗರು ಕೇಂದ್ರದ ಮುಂದೆ ಭಿಕ್ಷೆಗೆ ನಿಂತಿಲ್ಲ: ಹೀಗಂದಿದ್ಯಾಕೆ ಸಿಎಂ?

ಮೈಸೂರು, ಬೆಂಗಳೂರು ಹಾಗೂ ಹುಬ್ಬಳಿಯಲ್ಲಿ ನಡೆಯಬೇಕಿದ್ದ ರೈಲ್ವೆ ಇಲಾಖೆ ಮುಂಬಡ್ತಿ ಪರೀಕ್ಷೆಗಳನ್ನು...

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...