‘ಬಿಗ್‌ ಬಾಸ್‌’ ಮನೆ ಪುನರಾರಂಭ: ಕಳೆದ 24 ಗಂಟೆಯಲ್ಲಿ ಅಂಥದ್ದು ಏನಾಯ್ತು?

Date:

ಕನ್ನಡದ ರಿಯಾಲಿಟಿ ಶೋ ‘ಬಿಗ್‌ ಬಾಸ್‌’ ಸೀಸನ್-12ರ ಮನೆಗೆ ಮಂಗಳವಾರ ಅಧಿಕಾರಿಗಳು ಬೀಗ ಜಡಿದು ಹೋಗಿದ್ದರು. ಬೀಗ ಹಾಕಿದ ಕೇವಲ 24 ಗಂಟೆಗಳ ಒಳಗೆ ಬಿಗ್‌ ಬಾಸ್‌ ಮನೆ ಮತ್ತೆ ತೆರೆಯಲು ಅಣಿಯಾಗಿದೆ. ಸ್ಪರ್ಧಿಗಳು ‘ಬಿಗ್‌ ಬಾಸ್‌’ ಮನೆಗೆ ಮರಳುವ ಉತ್ಸಾಹದಲ್ಲಿದ್ದಾರೆ. ರಿಯಾಲಿಟಿ ಶೋ ಮುಂದುವರೆಯುವುದು ಖಚಿತವೆಂದು ಹೇಳಲಾಗುತ್ತಿದೆ.

ಬಿಗ್‌ ಬಾಸ್‌ ಮನೆ ಇರುವ ಬಿಡದಿಯ ಜಾಲಿವುಡ್‌ ಸ್ಟುಡಿಯೋ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದವು. ಕಂದಾಯ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯ ನಿಯಮಗಳನ್ನು ಸ್ಟುಡಿಯೋ ಮಾಲೀಕರು ಉಲ್ಲಂಘಿಸಿದ್ದಾರೆ. ಸ್ಟುಡಿಯೋದಿಂದ ಹೊರಬರುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕೆಂಬ ನಿಯಮವನ್ನು ಉಲ್ಲಂಘಿಸಲಾಗಿದೆ ಎಂದು ಈ ಹಿಂದೆಯೇ ನೋಟಿಸ್‌ ನೀಡಲಾಗಿತ್ತು. ಮಾತ್ರವಲ್ಲದೆ, ಬಿಗ್‌ ಬಾಸ್‌ ಶೋ ಕೂಡ ಅನುಮತಿ ಪಡೆಯದೇ ಆರಂಭವಾಗಿದೆ ಎಂದು ದೂರಲಾಗಿತ್ತು.

ನೋಟಿಸ್‌ ನೀಡಿದ ಬಳಿಕವೂ ಎಚ್ಚೆತ್ತುಕೊಳ್ಳದೆ, ತ್ಯಾಜ್ಯ ನಿರ್ವಹಣೆಗೆ ಕ್ರಮ ಕೈಗೊಳ್ಳದೆ ಬಿಗ್‌ ಬಾಸ್‌ ಶೋ ಆರಂಭಿಸಿದ್ದು ಮತ್ತಷ್ಟು ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದರು. ಅದೇ ಕಾರಣದಿಂದಾಗಿ, ಮಂಗಳವಾರ ಸಂಜೆ, ಜಾಲಿವುಡ್‌ ಸ್ಟುಡಿಯೋಗೆ ಧಾವಿಸಿದ ಅಧಿಕಾರಿಗಳು ಸ್ಟುಡಿಯೋಗೆ ಬೀಗ ಹಾಕಿದ್ದರು. ಬಿಗ್‌ ಬಾಸ್‌ ಸ್ಪರ್ಧಿಗಳು ಮತ್ತು ಸಿಬ್ಬಂದಿಗಳು ಹೊರಕಳಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಇದೀಗ ಜಾಲಿವುಡ್‌ ಸ್ಟುಡಿಯೋ ಮತ್ತು ಬಿಗ್‌ ಬಾಸ್‌ ಮನೆ ಮತ್ತೆ ತೆರೆದಿವೆ. ಅಂದರೆ, ಬೀಗ ಜಡಿದ ಕಳೆದ 24 ಗಂಟೆಗಳೊಳಗೆ ಜಾಲಿವುಡ್‌ ಸ್ಟುಡಿಯೋ ಮಾಲೀಕರು ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿಗೆ ಕ್ರಮ ಕೈಗೊಂಡುಬಿಟ್ಟರೇ? ಅಥವಾ ನ್ಯಾಯಾಲಯವು ಜಿಲ್ಲಾಡಳಿತದ ಆದೇಶಕ್ಕೆ ತಡೆಯಾಜ್ಞೆ ನೀಡಿತೇ? ಎರಡೂ ಆಗಿಲ್ಲ.

ಆಗಿದ್ದೇನು? ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಕೃಪಾಕಟಾಕ್ಷ ಬಿಗ್‌ ಬಾಸ್‌ ಮನೆ ಮೇಲೆ ಬಿದ್ದಿದೆ. ಜಾಲಿವುಡ್‌ ಸ್ಟುಡಿಯೋಗೆ ಮತ್ತೊಂದು ಅವಕಾಶ ನೀಡುವಂತೆ ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲಾಡಳಿತಕ್ಕೆ ಡಿ.ಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ. ಅವರ ಸೂಚನೆಗೆ ಮಣಿದು ಅಧಿಕಾರಿಗಳು ಜಾಲಿವುಡ್‌ ಸ್ಟುಡಿಯೋದ ಬೀಗ ತೆಗೆಯಲು ಮುಂದಾಗಿದ್ದಾರೆ.

ಹೇಳಿ ಕೇಳಿ, ರಾಮನಗರ ಜಿಲ್ಲೆ ಡಿ.ಕೆ ಶಿವಕುಮಾರ್ ಅವರ ಭದ್ರಕೋಟೆ. ಅದರಲ್ಲೂ, ಬಿಡದಿ ಪ್ರದೇಶವು ಅವರ ನೇರ ರಾಜಕೀಯದ ಭಾಗ. ಹೀಗಾಗಿ, ಅಲ್ಲಿನ ಚಟುವಟಿಕೆಗಳ ಮೇಲೆ ಡಿ,ಕೆ ಶಿವಕುಮಾರ್ ಅವರಿಗೆ ಹಿಡಿತವಿದೆ.

ಈ ಹಿಂದೆ, ಇದೇ ಡಿ.ಕೆ ಶಿವಕುಮಾರ್ ಅವರು ‘ಸಿನಿಮಾದವರು ಸರ್ಕಾರಕ್ಕೆ ಸಹಕಾರ ನೀಡುತ್ತಿಲ್ಲ. ಅವರ ನಟ್ಟು-ಬೋಲ್ಟು ಹೇಗೆ ಟೈಟ್‌ ಮಾಡಬೇಕು ಎಂಬುದು ನಮಗೂ ಗೊತ್ತಿದೆ’ ಎಂದಿದ್ದರು. ಬಿಗ್‌ ಬಾಸ್‌ ಮನೆ ಮುಚ್ಚುತ್ತಿದ್ದಂತೆಯೇ, ಅವರ ಈ ಹೇಳಿಕೆ ಮತ್ತೆ ವೈರಲ್ ಆಗಿತ್ತು.

ಡಿ.ಕೆ ಶಿವಕುಮಾರ್ ಅವರೇ ಅಧಿಕಾರಿಗಳ ಮೇಲೆ ಒತ್ತಡ ಹಾಕಿ, ಬಿಗ್‌ ಬಾಸ್‌ ಮನೆಗೆ (ಜಾಲಿವುಡ್‌ ಸ್ಟುಡಿಯೋ) ಬೀಗ ಹಾಕಿಸಿದ್ದಾರೆ. ತಮ್ಮ ಅಧಿಕಾರದ ಪರಾಕ್ರಮ ತೋರಿಸಿದ್ದಾರೆ. ಸಿನಿಮಾ ಮಂದಿ ತಮ್ಮ ಎದುರು ಮಂಡಿಯೂರುವಂತೆ ಮಾಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು. ಈಗ, ಡಿ.ಕೆ ಶಿವಕುಮಾರ್ ಅವರೇ ಜಾಲಿವುಡ್‌ಗೆ ಅವಕಾಶ ನೀಡಲು ಸೂಚಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ವಿಧಾನಸೌಧ ಆಯ್ತು, ಇನ್ನು ರಾಜಭವನ ತೆರೆಯಲಿದೆ ಪ್ರವಾಸಿಗರ ವೀಕ್ಷಣೆಗೆ

ಸದ್ಯ, “ಖಾಸಗಿಯವರು ಹೂಡಿಕೆ ಮಾಡಿ ಏನೋ ತಪ್ಪು ಮಾಡಿರುತ್ತಾರೆ. ಅದನ್ನು ಸರಿ ಮಾಡಿಕೊಳ್ಳಲು ಅವಕಾಶ ಕೊಡಬೇಕು. ಜಾಲಿವುಡ್ ಸ್ಟುಡಿಯೋಸ್‌ಗೆ ಇದೊಂದು ಬಾರಿ ಅನುಮತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ತಪ್ಪು ಸರಿ ಮಾಡಿಕೊಳ್ಳಲು ಒಮ್ಮೆ ಅವಕಾಶ ಕೊಡಿ ಎಂದಿದ್ದೇನೆ. ಉದ್ಯೋಗ ಮುಖ್ಯ. ಜೊತೆಗೆ, ಮನೋರಂಜನೆ ಕೂಡ ಮುಖ್ಯ” ಎಂದು ಹೇಳಿದ್ದಾರೆ.

ಬೀಗ ಹಾಕಿದ ಮತ್ತು ತೆಗೆದ ನಡುವಿನ ಸಮಯದಲ್ಲಿ ಜಾಲಿವುಡ್‌ ಸ್ಟುಡಿಯೋ ಮಾಲೀಕರು ಮತ್ತು ಬಿಗ್‌ ಬಾಸ್‌ ಆಯೋಜಕರು ಡಿ.ಕೆ ಶಿವಕುಮಾರ್ ಅವರ ಮನೆಯ ಕದ ತಟ್ಟಿರಬಹುದು. ಮಾತುಕತೆ, ಮನವಿ ಇತ್ಯಾದಿಗಳು ನಡೆದಿರಬಹುದು ಎಂದು ಹೇಳಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...