ಘೋಸ್ಟ್‌ ಚಿತ್ರತಂಡ ಸೇರಿಕೊಂಡ ಅನುಪಮ್‌ ಖೇರ್‌

Date:

ಸ್ಯಾಂಡಲ್‌ವುಡ್‌ನ ಸ್ಟಾರ್‌ ನಟ ಶಿವರಾಜ್‌ ಕುಮಾರ್‌ ಅಭಿನಯದ ಘೋಸ್ಟ್‌ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ. ವೇದ ಸಿನಿಮಾದ ಯಶಸ್ಸಿನ ಬಳಿಕ ಘೋಸ್ಟ್‌ ಚಿತ್ರದ ಮೂರನೇ ಹಂತದ ಚಿತ್ರೀಕರಣದಲ್ಲಿ ಶಿವಣ್ಣ ಭಾಗಿಯಾಗಿದ್ದು, ಬಾಲಿವುಡ್‌ನ ಖ್ಯಾತ ನಟ ಅನುಪಮ್‌ ಖೇರ್‌ ಕೂಡ ಚಿತ್ರತಂಡ ಸೇರಿಕೊಂಡಿದ್ದಾರೆ.

ʼಓಲ್ಡ್‌ಮಾಂಕ್‌ʼ ಖ್ಯಾತಿಯ ನಿರ್ದೇಶಕ ಶ್ರೀನಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ʼಆ್ಯಕ್ಷನ್ʼ, ʼಥ್ರಿಲ್ಲರ್‌ʼ ಕಥಾಹಂದರವುಳ್ಳ ಘೋಸ್ಟ್‌ ಚಿತ್ರದ ಅನುಪಮ್‌ ಖೇರ್‌ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅವರು ಚಿತ್ರದಲ್ಲಿ ನಟಿಸುತ್ತಿರುವ ವಿಚಾರವನ್ನು ನಿರ್ದೇಶಕರು ಈ ಹಿಂದೆಯೇ ಬಹಿರಂಗಪಡಿಸಿದ್ದರು. ಮೂರನೇ ಹಂತದ ಶೂಟಿಂಗ್‌ ಶುರುವಾದ ಬೆನ್ನಲ್ಲೇ ಅನುಪಮ್‌ ಖೇರ್‌ ಬೆಂಗಳೂರಿಗೆ ಬಂದಿಳಿದಿದ್ದು, ಹಿರಿಯ ನಟನನ್ನು ಚಿತ್ರತಂಡ ಆತ್ಮೀಯವಾಗಿ ಬರಮಾಡಿಕೊಂಡಿದೆ. ಶ್ರೀನಿ, ಅನುಪಮ್‌ ಖೇರ್‌ ಅವರಿಗೆ ಪಾತ್ರದ ಬಗ್ಗೆ ವಿವರಿಸುತ್ತಿರುವ ಫೋಟೋಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

ಕೇವಲ ಅನುಪಮ್‌ ಖೇರ್‌ ಮಾತ್ರವಲ್ಲ ಮಲಯಾಳಂನ ಖ್ಯಾತ ನಟ ಜಯರಾಂ ಈ ಚಿತ್ರದಲ್ಲಿ ಪೊಲೀಸ್‌ ಅಧಿಕಾರಿಯ ಪಾತ್ರದಲ್ಲಿ ನಟಿಸಿದ್ದಾರೆ. ಈಗಾಗಲೇ ಅವರ ಪಾತ್ರದ ಚಿತ್ರೀಕರಣ ಮುಕ್ತಾಯಗೊಂಡಿದೆ. ಬಹುಭಾಷಾ ನಟ ಪ್ರಶಾಂತ್‌ ನಾರಾಯಣನ್‌ ಕೂಡ ಚಿತ್ರದಲ್ಲಿದ್ದಾರೆ. ಉಳಿದಂತೆ ಅಚ್ಯುತ್‌ ಕುಮಾರ್‌, ದತ್ತಣ್ಣ, ಅವಿನಾಶ್‌ ಮುಂತಾದವರು ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗಮನ ಸೆಳೆಯುತ್ತಿದೆ ʼಹೊಯ್ಸಳʼ ಚಿತ್ರದ ಜನಪದ ಹಾಡು

ʼಸಂದೇಶ್‌ ಪ್ರೊಡಕ್ಷನ್ಸ್‌ʼ ಬ್ಯಾನರ್‌ನಡಿಯಲ್ಲಿ ಸಿದ್ಧಗೊಳ್ಳುತ್ತಿರುವ ʼಘೋಸ್ಟ್‌ʼ ಚಿತ್ರಕ್ಕಾಗಿ ಬೆಂಗಳೂರಿನ ಮಿನರ್ವ ಮಿಲ್‌ ಮತ್ತು ಮೈಸೂರಿನ ಹೊರವಲಯದಲ್ಲಿ ಅಂದಾಜು 6 ಕೋಟಿ ರೂಪಾಯಿ ವೆಚ್ಚದಲ್ಲಿ ಎರಡು ಬೃಹತ್‌ ಸೆಟ್‌ಗಳನ್ನು ನಿರ್ಮಾಣ ಮಾಡಲಾಗಿದೆ. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ಸಂಗೀತ ಸಂಯೋಜನೆಯ ಹೊಣೆ ಹೊತ್ತುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...