ಸಲ್ಮಾನ್‌ ಖಾನ್‌ಗೆ ಮತ್ತೆ ಜೀವ ಬೆದರಿಕೆ

Date:

ಏಪ್ರಿಲ್‌ 30ರಂದು ಸಲ್ಮಾನ್‌ ಖಾನ್‌ ಕೊಲ್ಲುವುದಾಗಿ ಬೆದರಿಕೆ

ಪೊಲೀಸರ ಎದುರು ಗೋರಕ್ಷಕನೆಂದು ಪರಿಚಯಿಸಿಕೊಂಡ ವ್ಯಕ್ತಿ

ಬಾಲಿವುಡ್‌ನ ಸ್ಟಾರ್‌ ನಟ ಸಲ್ಮಾನ್‌ ಖಾನ್‌ಗೆ ದುಷ್ಕರ್ಮಿಗಳು ಮತ್ತೆ ಜೀವ ಬೆದರಿಕೆ ಹಾಕಿದ್ದಾರೆ. ಕೆಲ ದಿನಗಳ ಹಿಂದಷ್ಟೇ ನಟನ ಆಪ್ತ ಸಹಾಯಕರಿಗೆ ಇ-ಮೇಲ್‌ ಮೂಲಕ ಬೆದರಿಕೆ ಸಂದೇಶ ರವಾನಿಸಲಾಗಿತ್ತು. ಇ-ಮೇಲ್‌ನಲ್ಲಿ ನಟನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಆರೋಪಿ ಬಂಧನಕ್ಕೊಳಗಾದ ಬೆನ್ನಲ್ಲೇ ಮತ್ತೊಂದು ಬೆದರಿಕೆ ಕರೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೋಮವಾರ ರಾತ್ರಿ 9 ಗಂಟೆ ಸುಮಾರಿಗೆ ಮುಂಬೈನ ಪೊಲೀಸ್‌ ಕಂಟ್ರೋಲ್‌ ರೂಮ್‌ಗೆ ಕರೆ ಮಾಡಿದ್ದ ರಾಜಸ್ತಾನ ಮೂಲದ ರಾಕಿ ಭಾಯ್‌ ಎಂಬಾತ ತಾನು ಗೋ ರಕ್ಷಕ ಎಂದು ಪರಿಚಯಿಸಿಕೊಂಡಿದ್ದಾನೆ. ಜೊತೆಗೆ ಏಪ್ರಿಲ್‌ 30ರಂದು ಸಲ್ಮಾನ್‌ ಖಾನ್‌ರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಈ ಬಗ್ಗೆ ಮಾಹಿತಿ ನೀಡಿರುವ ಮುಂಬೈ ಪೊಲೀಸರು, “ಕರೆ ಮಾಡಿದ್ದ ವ್ಯಕ್ತಿ ತನ್ನನ್ನು ರಾಕಿ ಭಾಯ್‌ ಎಂದು ಪರಿಚಯಿಸಿಕೊಂಡಿದ್ದಾನೆ. ಇದೇ ಏಪ್ರಿಲ್‌ 30ರಂದು ನಟನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಘಟನೆಗೆ ಸಂಬಂಧಿಸಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದೇವೆ” ಎಂದಿದ್ದಾರೆ.

ಕಳೆದ ಮಾರ್ಚ್‌ನಲ್ಲಿ ಇದೇ ರಾಜಸ್ತಾನದ ಜೋಧ್‌ಪುರ ಮೂಲದ ಧಾಕಡ್‌ ರಾಮ್‌ ಬಿಷ್ಣೋಯಿ, ಸಲ್ಮಾನ್‌ ಅವರ ಆಪ್ತ ಸಹಾಯಕ ಪ್ರಶಾಂತ್‌ ಗುಂಜಾಲ್ಕರ್‌ಗೆ ಇ-ಮೇಲ್‌ ಮೂಲಕ ಜೀವ ಬೆದರಿಕೆ ಸಂದೇಶ ರವಾನಿಸಿದ್ದ. ಇದಾದ ಕೆಲವೇ ದಿನಕ್ಕೆ ರಾಜಸ್ತಾನ ಪೊಲೀಸರ ನೆರವಿನೊಂದಿಗೆ ಮುಂಬೈ ಪೊಲೀಸರು ಜೋಧ್‌ಪುರ ಬಳಿಯ ರೋಹಿಚಾ ಕಲನ್‌ ಎಂಬಲ್ಲಿ ಆರೋಪಿಯನ್ನು ಬಂಧಿಸಿದ್ದರು. ಧಾಕಡ್‌ ರಾಮ್‌ ವಿಚಾರಣೆ ನಡೆಯುತ್ತಿರುವಾಗಲೇ ಸಲ್ಮಾನ್‌ ಖಾನ್‌ಗೆ ಮತ್ತೊಂದು ಜೀವ ಬೆದರಿಕೆ ಕರೆ ಬಂದಿರುವುದು ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

ಈ ಸುದ್ದಿ ಓದಿದ್ದೀರಾ? ‘ಚೆನ್ನೈ ಎಕ್ಸ್‌ಪ್ರೆಸ್‌’ ನೆನಪಿಸುವ ʼಕಿಸಿ ಕಾ ಭಾಯ್‌ ಕಿಸಿ ಕಿ ಜಾನ್‌ʼ ಟ್ರೈಲರ್‌

ಏಪ್ರಿಲ್‌ 21ರಂದು ಸಲ್ಮಾನ್‌ ಖಾನ್‌ ನಟನೆಯ ಬಹು ನಿರೀಕ್ಷಿತ ʼಕಿಸಿ ಕಾ ಭಾಯ್‌ ಕಿಸಿ ಕಿ ಜಾನ್‌ʼ ಸಿನಿಮಾ ತೆರೆಗೆ ಬರಲಿದೆ. ಜೀವ ಬೆರಿಕೆಯ ನಡುವೆಯೇ ಸಿನಿಮಾದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿರುವ ಅವರು ಇತ್ತೀಚೆಗೆ ವಿದೇಶದಿಂದ ದುಬಾರಿ ಬೆಲೆಯ ಬುಲೆಟ್‌ ಪ್ರೂಫ್‌ ಕಾರನ್ನು ಆಮದು ಮಾಡಿಸಿಕೊಂಡಿದ್ದು, ಅದರಲ್ಲೇ ಸಂಚರಿಸುತ್ತಿದ್ದಾರೆ. ಮುಂಬೈ ಪೊಲೀಸರು ಸಲ್ಮಾನ್‌ ಖಾನ್‌ ಮತ್ತು ಕುಟುಂಬಸ್ಥರಿಗೆ ಭದ್ರತೆಯನ್ನು ಕೂಡ ಹೆಚ್ಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...