ಮೈಸೂರಿನಲ್ಲಿ ಉದ್ಯಮಿ, ಡಿಜೆಗೆ ಬೆದರಿಕೆ ಹಾಕಿದ್ದ ದರ್ಶನ್: ವಿಡಿಯೋ ವೈರಲ್

Date:

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ 19 ಮಂದಿ ಆತನ ಸಹಚರರನ್ನು ಬೆಂಗಳೂರು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ನಡುವೆ ನಟನ ಹಿಂದಿನ ಕರಾಳ ಮುಖಗಳು ಒಂದೊಂದಾಗಿ ತೆರೆದುಕೊಳ್ಳುತ್ತಿವೆ.

ಮೈಸೂರಿನ ಪಬ್‌ನಲ್ಲಿ ಉದ್ಯಮಿ ಹಾಗೂ ಡಿಜೆಗೆ ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ವಿಡಿಯೋವೊಂದು ಎಲ್ಲಡೆ ವೈರಲ್‌ ಆಗುತ್ತಿದೆ. ಈ ಘಟನೆಯು ಕಳೆದ ವರ್ಷ ಫೆ. 26ರಂದು ನಡೆದಿದೆ ಎನ್ನಲಾಗಿದೆ.

ಪೊಲೀಸರ ಪ್ರಕಾರ, ಕಳೆದ ವರ್ಷ ಫೆ.26ರಂದು ದರ್ಶನ್‌ ಹಾಗೂ ಆತನ ಸಹಚರರು ಉದ್ಯಮಿ ಯಶವಂತ್‌ ಎಂಬುವವರ ಪಬ್‌ಗೆ ತನ್ನ ಪತ್ನಿಯ ಹುಟ್ಟುಹಬ್ಬ ಆಚರಿಸಲು ತೆರಳಿದ್ದ. ರಾತ್ರಿ 12. 30ರ ಸಮಯದಲ್ಲಿ ಯಶವಂತ್‌ ಡಿಜೆಗೆ ಆಗಷ್ಟೆ ಕೆಲವು ತಿಂಗಳ ಹಿಂದೆ ಮೃತಪಟ್ಟ ಪುನೀತ್‌ ರಾಜ್‌ಕುಮಾರ್‌ ಅವರ ಹಾಡುಗಳನ್ನು ನುಡಿಸಲು ಡಿಜೆ ಅವರಿಗೆ ತಿಳಿಸಿದ್ದಾರೆ. ಉದ್ಯಮಿ ಈ ರೀತಿ ಹೇಳಿರುವುದನ್ನು ಕೇಳಿ ದರ್ಶನ್‌ ಹಾಗೂ ಆತನ ಸಂಗಡಿಗರು ಕೋಪಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಪೊಲೀಸ್ ಭಾಷೆಯಲ್ಲಿ ದರ್ಶನ್ ವಿಚಾರಣೆ: ಕಾಲಿಗೆ ಬಿದ್ದು ಬೇಡಿಕೊಳ್ಳುತ್ತಿರುವ ಆರೋಪಿ ನಟ?

ಈ ಸಂದರ್ಭದಲ್ಲಿ ದರ್ಶನ್‌ ಹಾಗೂ ಆತನ ಸಂಗಡಿಗರು ತನ್ನ ಸಿನಿಮಾದ ಚಿತ್ರಗಳನ್ನು ಮಾತ್ರ ನುಡಿಸುವಂತೆ ಗಲಾಟೆ ಶುರು ಮಾಡಿದ್ದಾರೆ. ಕ್ಷಣಾರ್ಧದಲ್ಲಿ ಗಲಾಟೆ ತಾರಕಕ್ಕೆ ಹೋಗಿದ್ದು, ದರ್ಶನ್‌ ಹಾಗೂ ಆತನ ಸಂಗಡಿಗರು ಯಶವಂತ್ ಹಾಗೂ ಡಿಜೆ ಮೇಲೆ ನಿಂದಿಸುವುದರ ಜೊತೆ ಬೆದರಿಕೆಯೊಡ್ಡುವುದಕ್ಕೆ ಶುರು ಮಾಡಿದ್ದಾರೆ. ಇವೆಲ್ಲವೂ ವೈರಲ್‌ ಆಗಿರುವ ವಿಡಿಯೋದಲ್ಲಿ ಸೆರೆಯಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ದರ್ಶನ್‌ ಹಾಗೂ ಆತನ ಸಂಗಡಿಗರ ವಿರುದ್ಧ ದೂರು ದಾಖಲಾದರೂ ಎಫ್‌ಐಆರ್‌ ದಾಖಲಾಗಲಿಲ್ಲ.

ದರ್ಶನ್‌ ವಿರುದ್ಧದ ಹಳೆಯ ಪ್ರಕರಣಗಳು

  • ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ನಡೆಸಿದ್ದ ಆರೋಪದಡಿ ದರ್ಶನ್ ವಿರುದ್ಧ 2011ರಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ದರ್ಶನ್ ಅವರು 28 ದಿನ ಜೈಲಿನಲ್ಲಿದ್ದರು
  • 2019ರಲ್ಲಿ ಸಿನಿಮಾ ಚಿತ್ರೀಕರಣದ ವೇಳೆ ಸಹ ನಟನ ಮೇಲೆ ದರ್ಶನ್ ಹಲ್ಲೆ ನಡೆಸಿದ್ದರು ಎನ್ನಲಾಗಿತ್ತು. ಆದರೆ ದೂರು ದಾಖಲಾಗಿರಲಿಲ್ಲ.
  • 2021ರಲ್ಲಿ ಸಾಲ ಹಾಗೂ ವಂಚನೆ ಸಂಬಂಧ ನಿರ್ಮಾಪಕರೊಬ್ಬರು ಹಾಗೂ ದರ್ಶನ್ ನಡುವೆ ಆರೋಪ- ಪ್ರತ್ಯಾರೋಪ ನಡೆದಿತ್ತು
  • ಮೈಸೂರಿನ ಹೋಟೆಲ್ ಸಿಬ್ಬಂದಿಯ ಮೇಲೆ ದರ್ಶನ್ ಅವರು ಹಲ್ಲೆ ನಡೆಸಿದ್ದಾರೆ ಎಂದು ನಿರ್ದೇಶಕರೊಬ್ಬರು ಆರೋಪಿಸಿದ್ದರು. ಪೊಲೀಸರು ಹೋಟೆಲ್‌ಗೆ ತೆರಳಿ ತನಿಖೆ ನಡೆಸಿದ್ದರು.
  • 2023ರ ನವೆಂಬರ್‌ನಲ್ಲಿ ದರ್ಶನ್ ಮನೆಯ ಸಾಕು ನಾಯಿ ಮಹಿಳಾ ವಕೀಲರೊಬ್ಬರಿಗೆ ಕಚ್ಚಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜರಾಜೇಶ್ವರಿ ಠಾಣಾ ಪೊಲೀಸರು ದರ್ಶನ್‌ಗೆ ನೋಟಿಸ್‌ ನೀಡಿದ್ದರು.
  • ‘ಕಾಟೇರ’ ಸಿನಿಮಾ ಯಶಸ್ಸಿಗೆ ಸಂಬಂಧಿಸಿ ಬೆಂಗಳೂರಿನ ಜೆಟ್‌ಲ್ಯಾಗ್‌ ಪಬ್‌ನಲ್ಲಿ ಪಾರ್ಟಿ ಆಯೋಜಿಸಲಾಗಿತ್ತು. ದರ್ಶನ್ ಸೇರಿ ಹಲವರು ನಿಯಮ ಉಲ್ಲಂಘಿಸಿ ತಡರಾತ್ರಿ ವರೆಗೆ ಪಾರ್ಟಿ ನಡೆಸಿದ್ದ ಆರೋಪವಿತ್ತು. ಸುಬ್ರಹ್ಮಣ್ಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದರ್ಶನ್ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದರು.
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...