ಬೆದರಿಕೆ ಪ್ರಕರಣ : ನಟ ಸುದೀಪ್‌ ಮಾಜಿ ಕಾರು ಚಾಲಕನ ವಿಚಾರಣೆ

Date:

ಖಾಸಗಿ ವಿಡಿಯೋ ಹರಿ ಬಿಡುವುದಾಗಿ ಅಪರಿಚಿತರಿಂದ ಬೆದರಿಕೆ

ಬೆದರಿಕೆ ಪತ್ರದ ಹಿಂದಿರುವ ವ್ಯಕ್ತಿಯ ಬಗ್ಗೆ ಗೊತ್ತು ಎಂದಿದ್ದ ಸುದೀಪ್‌

ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿ ನಟ ಸುದೀಪ್‌ ಅವರ ಮಾಜಿ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ಶುಕ್ರವಾರ ವಿಚಾರಣೆ ನಡೆಸಿದ್ದಾರೆ. ಆದರೆ, ಸುದೀಪ್‌ ಅವರಿಗೆ ಬಂದಿರುವ ಬೆದರಿಕೆ ಪತ್ರಗಳಿಗೂ ಆತನಿಗೂ ಯಾವುದೇ ಸಂಬಂಧವಿಲ್ಲ ಎಂಬುದು ವಿಚಾರಣೆಯಲ್ಲಿ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ ಸುದೀಪ್‌ ಅವರ ಪುಟ್ಟೇನಹಳ್ಳಿ ನಿವಾಸಕ್ಕೆ ಅಪರಿಚಿತರಿಂದ ಎರಡು ಬೆದರಿಕೆ ಪತ್ರಗಳು ಬಂದಿದ್ದವು. ನಟನ ಖಾಸಗಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿ ಕಿಡಿಗೇಡಿಗಳು ಬೆದರಿಕೆ ಹಾಕಿದ್ದರು. ಈ ಸಂಬಂಧ ಸುದೀಪ್‌ ಅವರ ಆಪ್ತ ಸಹಾಯಕ ಜಾಕ್‌ ಮಂಜು ಪುಟ್ಟೇನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಬೆದರಿಕೆ ಆರೋಪದಡಿ ದೂರು ದಾಖಲಿಸಿದ್ದರು. ಜೊತೆಗೆ ನಟನ ಮಾಜಿ ಕಾರು ಚಾಲಕನ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಇದಾದ ಕೆಲ ದಿನಗಳ ನಂತರ ಪ್ರಕರಣ ಸಿಸಿಬಿಗೆ ವರ್ಗಾವಣೆಗೊಂಡಿತ್ತು.

ಈ ಹಿನ್ನೆಲೆ ಸದ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಸುದೀಪ್‌ ಅವರ ಮಾಜಿ ಕಾರು ಚಾಲಕನ್ನು ಕರೆದು ವಿಚಾರಣೆಗೆ ನಡೆಸಿದ್ದು, ಆತನ ಮೊಬೈಲ್‌ ಅನ್ನು ಕೂಡ ಪರಿಶೀಲಿಸಿದ್ದಾರೆ. ಆದರೆ, ಆತ 3 ವರ್ಷಗಳ ಹಿಂದೆಯೇ ಸುದೀಪ್‌ ಬಳಿ ಕೆಲಸ ಬಿಟ್ಟಿರುವುದಾಗಿ ತಿಳಿಸಿದ್ದಾನೆ. ಸುದೀರ್ಘ ವಿಚಾರಣೆಯ ಬಳಿಕ ಆತನಿಗೂ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂಬುದು ಸ್ಪಷ್ಟವಾಗಿದೆ.

ಈ ಸುದ್ದಿ ಓದಿದ್ದೀರಾ? ‘ಟ್ವಿಟರ್‌ ಬ್ಲೂಟಿಕ್‌’ಗೆ ಬೈ ಹೇಳಿದ ಪ್ರಕಾಶ್‌ ರಾಜ್‌

ಬೆದರಿಕೆ ಪತ್ರದ ವಿಚಾರಕ್ಕೆ ಸಂಬಂಧಿಸಿ ಇತ್ತೀಚೆಗೆ ಪ್ರತಿಕ್ರಿಯಿಸಿದ್ದ ಸುದೀಪ್‌, “ಸಿನಿಮಾ ರಂಗದವರೇ ಬೆದರಿಕೆ ಪತ್ರ ಕಳುಹಿಸಿದ್ದಾರೆ. ಈ ಕೃತ್ಯದ ಹಿಂದಿರುವ ವ್ಯಕ್ತಿ ಯಾರು ಎಂಬುದು ನನಗೆ ಗೊತ್ತಿದೆ. ಅವರಿಗೆ ಕಾನೂನಾತ್ಮಕವಾಗಿಯೇ ಉತ್ತರ ಕೊಡುತ್ತೇನೆ ಎಂದಿದ್ದರು. ಆದರೆ, ಪ್ರಕರಣ ದಾಖಲಾಗಿ ತಿಂಗಳು ಕಳೆಯುತ್ತ ಬಂದರೂ ಆರೋಪಿಗಳ ಸುಳಿವಿಲ್ಲ. ಹೀಗಾಗಿ ಸುದೀಪ್‌ ಅವರಿಗೆ ಬೆದರಿಕೆ ಹಾಕಿದವರ ಬಗ್ಗೆ ಮಾಹಿತಿ ಎಂದಾದರೆ, ಅವರು ಪೊಲೀಸರಿಗೆ ತಿಳಿಸಬೇಕು ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ.

ಕಳೆದ ಮಾರ್ಚ್‌ನಲ್ಲಿ ದೊಮ್ಮಲೂರಿನ ಅಂಚೆ ಕಚೇರಿಗೆ ನಕಲಿ ನಂಬರ್‌ ಪ್ಲೇಟ್‌ ಹೊಂದಿದ್ದ ಸ್ವಿಫ್ಟ್‌ ಕಾರಿನಲ್ಲಿ ಬಂದ ಕಿಡಿಗೇಡಿಗಳು ಅಂಚೆ ಡಬ್ಬದಲ್ಲಿ ಪತ್ರವನ್ನು ಹಾಕಿ ಸ್ಥಳದಿಂದ ಪರಾರಿಯಾಗಿದ್ದರು ಎನ್ನಲಾಗಿದೆ. ಕೆಲ ದಿನಗಳ ಬಳಿಕ ಅಂಚೆ ಸೇವೆಯ ಮೂಲಕ ಪತ್ರ ಸುದೀಪ್‌ ಅವರ ನಿವಾಸ ತಲುಪಿತ್ತು. ಖಾಸಗಿ ವಿಡಿಯೋ ಬಹಿರಂಗ ಪಡಿಸುವ ಬೆದರಿಕೆ ಪತ್ರ ಕೈಸೇರಿದ ಬೆನ್ನಲ್ಲೇ ಹೈಕೋರ್ಟ್‌ ಮೊರೆ ಹೋಗಿದ್ದ ಸುದೀಪ್‌, ತಮ್ಮ ಘನತೆಗೆ ಧಕ್ಕೆಯುಂಟು ಮಾಡುವ ಸುದ್ದಿಗಳ ಪ್ರಸಾರಕ್ಕೆ ತಡೆಯಾಜ್ಞೆ ತಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...