ಸಿಸಿಎಲ್ 2025 | ಕರ್ನಾಟಕ – ಪಂಜಾಬ್‌ ಆಟಗಾರರ ನಡುವೆ ಗಲಾಟೆ; ಸಿಟ್ಟಿಗೆದ್ದ ಸುದೀಪ್

Date:

ಸೆಲೆಬ್ರಿಟಿ ಕ್ರಿಕೆಟ್ ಲೀಗ್‌ (ಸಿಸಿಎಲ್‌)-2025ರ ಪಂದ್ಯಾವಳಿಯಲ್ಲಿ ಕರ್ನಾಟಕ ಬುಲ್ಡೋಜರ್ಸ್‌ ಮತ್ತು ಪಂಜಾಬ್ ದಿ ಶೇರ್ ತಂಡದ ಆಟಗಾರರ ನಡುವೆ ಗಲಾಟೆ ನಡೆದಿದೆ. ಮೈದಾನದಲ್ಲೇ ನಡೆದ ಗಲಾಟೆ ವೇಳೆ ನಟ ಸುದೀಪ್‌ ಸಿಟ್ಟಾಗಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಶನಿವಾರ ಸಂಜೆ, ಕರ್ನಾಟಕ ಮತ್ತು ಪಂಜಾಬ್ ನಡುವೆ ಸೂರತ್‌ನ ಲಾಲ್‌ಭಾಯಿ ಕಾಂಟ್ರಾಕ್ಟರ್ ಕ್ರೀಡಾಂಗಣದಲ್ಲಿ ಪಂದ್ಯದಲ್ಲಿ ನಡೆದಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ತಂಡವು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಉತ್ತಮವಾಗಿ ಬ್ಯಾಟಿಂಗ್‌ ನಡೆಸುತ್ತಿತ್ತು. ಆದಾಗ್ಯೂ, 6ನೇ ಓವರ್‌ನಲ್ಲಿ ಚಂದನ್ ಕುಮಾರ್ ಬೌಲಿಂಗ್ ಮಾಡಲು ಬಂದಾಗ, ಉಭಯ ತಂಡಗಳ ಆಟಗಾರರ ನಡುವೆ ವಾಗ್ವಾದ ನಡೆದಿದೆ.

ಬೌಲಿಂಗ್ ಮಾಡುತ್ತಿದ್ದ ಚಂದನ್, ಅರ್ಧ ಸ್ಕ್ರೀಸ್‌ಗೆ ಬಂದು ಚೆಂಡನ್ನು ಎಸೆಯದೆ ವಾಪಸ್‌ ಹೋಗಿದ್ದಾರೆ. ಆ ಬಳಿಕ, ಚಂದನ್‌ ಬೌಲಿಂಗ್‌ಅನ್ನು ಪಂಜಾಬ್‌ನ ಬ್ಯಾಟರ್ ನಿಂಜಾ ಅರ್ಧಕ್ಕೆ ತಡೆದಿದ್ದಾರೆ. ತಾಳ್ಮೆ ಕಳೆದುಕೊಂಡ ಚಂದನ್ ವಾಗ್ವಾದಕ್ಕೆ ಇಳಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಂದನ್ ಮತ್ತು ನಿಂಜಾ ನಡುವಿನ ಜಗಳವನ್ನು ತಡೆಯಲು ಸುದೀಪ್‌ ಬಂದಿದ್ದಾರೆ. ಆದರೆ, ನಿಂಜಾ ಅವರು ಸುದೀಪ್ ಜೊತೆ ಜೋರು ಜಗಳಕ್ಕಿಳಿಸಿದ್ದಾರೆ. ಇದರಿಂದ, ಸುದೀಪ್ ಕೂಡ ಕೋಪ ಮಾಡಿಕೊಂಡಿದ್ದು, ಎರಡು ತಂಡಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಕೆಲ ಸಮಯದ ನಂತರ, ಎಲ್ಲರೂ ಸಮಾಧಾನಗೊಂಡು ಆಟವನ್ನು ಮುಂದುವರೆಸಿದ್ದಾರೆ.

ಪಂದ್ಯದಲ್ಲಿ, ಮೊದಲ ಇನ್ನಿಂಗ್ಸ್‌ನಲ್ಲಿ ಪಂಜಾಬ್ ತಂಡವು 10 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 121 ರನ್‌ ಕಲೆಹಾಕಿತು. 121 ರನ್‌ಗಳ ಗುರಿಯ ಬೆನ್ನತ್ತಿದ ಕರ್ನಾಟಕ ತಂಡ 10 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 91 ರನ್ ಗಳಿಸಿ ಹಿನ್ನಡೆ ಅನುಭಿವಿತು. ಆ ನಂತರ, ಎರಡನೇ ಇನ್ನಿಂಗ್ಸ್‌ನಲ್ಲಿ ಪಂಜಾಬ್‌ ತಂಡ 10 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟದೊಂದಿಗೆ 94 ರನ್‌ಗಳಿಸಿದರೆ, ಕರ್ನಾಟಕ ತಂಡ 8 ವಿಕೆಟ್ ನಷ್ಟದೊಂದಿಗೆ 122 ರನ್ ಪೇರಿಸಿತು. ಆದಾಗ್ಯೂ, ಕರ್ನಾಟಕ ತಂಡ 2 ರನ್‌ಗಳ ಅಂತರದಲ್ಲಿ ಸೋಲುಂಡಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಸರೆಕ್ಷನ್: ಇಂದ್ರಿಯಗಳ ಮೂಲಕ ಒಂದು ಶತಮಾನದ ಸಿನೆಮಾ ಪಯಣ ಬಿಡಿಸಿಡುವ ಚಿತ್ರ

'ರಸರೆಕ್ಷನ್' ಸಿನಿಮಾ ಅಂತಿಮವಾಗಿ ಹೇಳುವುದೇನೆಂದರೆ ಬದುಕು ಎಷ್ಟೇ ದೀರ್ಘವಾಗಿದ್ದರೂ, ಕನಸುಗಳಿಲ್ಲದಿದ್ದರೆ ಅದು...

‘ಜೋಗಿ’ಯಿಂದ ‘ಕೆಡಿ’ವರೆಗೆ: ಕಲಾತ್ಮಕ ಮೌಲ್ಯಗಳ ಕುಸಿತ?

ʼನಾನು ಎಣ್ಣೆ ಹಾಗೂ ಉಪ್ಪಿನಕಾಯಿಯ ಬಗ್ಗೆ ಬರೆದಿದ್ದೇನೆʼ. ʼಈ ಹಾಡಿನ ಸಾಹಿತ್ಯದಲ್ಲಿ...

ಐಪಿಎಲ್ | ಅತಿ ಹೆಚ್ಚು ವಿಕೆಟ್ ಪಡೆದರೂ ‘ಪರ್ಪಲ್ ಕ್ಯಾಪ್’ ಒಲಿಯದ 5 ದಿಗ್ಗಜ ಬೌಲರ್‌ಗಳು

ಐಪಿಎಲ್ ಇತಿಹಾಸದಲ್ಲಿ ಬೌಲರ್‌ಗಳ ಸಾಧನೆಯನ್ನು ಗುರುತಿಸಲು ಪ್ರತಿ ಆವೃತ್ತಿಯಲ್ಲಿ ಅತಿ ಹೆಚ್ಚು...