ರೈಲು ದುರಂತಕ್ಕೆ ಸರ್ಕಾರ ಹೊಣೆಯಲ್ಲವೇ? ನಟ ಕಿಶೋರ್‌ ಪ್ರಶ್ನೆ

Date:

  • ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕಿಶೋರ್‌ ಆಗ್ರಹ
  • ಹಳ್ಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ಎಂದ ನಟ

ಒಡಿಶಾದ ಬಾಲಸೋರ್‌ ಬಳಿ ನಡೆದ ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಬಹುಭಾಷಾ ನಟ ಕಿಶೋರ್‌ ಸಂತಾಪ ಸೂಚಿಸಿದ್ದಾರೆ. ರೈಲು ದುರಂತಕ್ಕೆ ಸಂಬಂಧಿಸಿದ ಪತ್ರಿಕಾ ವರದಿಯೊಂದನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡು ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಆಡಳಿತಾರೂಢ ಸರ್ಕಾರಗಳು ಅಪಘಾತ, ದುರಂತಗಳನ್ನು ತಮ್ಮ ಇಮೇಜು ಬೆಳೆಸಿಕೊಳ್ಳಲು ಬಳಸುವುದನ್ನು ಬಿಟ್ಟು ಚುನಾವಣೆಯಾಚೆಗಿನ ತಮ್ಮ ಕರ್ತವ್ಯವನ್ನು ಇನ್ನಾದರೂ ನಿಭಾಯಿಸಲಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರೈಲು ದುರಂತದ ಕುರಿತು ದೀರ್ಘ ಲೇಖನವನ್ನೇ ಬರೆದಿರುವ ಕಿಶೋರ್‌, “ಯಾರ ಮೇಲೆ ಕಠಿಣ ಕ್ರಮ? ಯಾರು ಕಾರಣ?
ಇಷ್ಟು ಭೀಕರ ಸಾವು ನೋವು ತಡೆಗಟ್ಟಬಹುದಿತ್ತೇ? ರೈಲ್ವೆ ಮಂತ್ರಿ ಈಗ ಹೋಗಿ ನಿಂತು ಕ್ಯಾಮೆರಾ ಮುಂದೆ ಕಣ್ಣೀರು ಸುರಿಸುವ ನಾಟಕ ಬಿಟ್ಟು ಇಂದಿಗೂ ಖಾಲಿಯಿರುವ 3 ಲಕ್ಷಕ್ಕೂ ಹೆಚ್ಚು ರೈಲ್ವೆ ನೌಕರರ ಮತ್ತು 1,500ಕ್ಕೂ ಹೆಚ್ಚು ರೈಲ್ವೆ ಸುರಕ್ಷತೆಗೆ ಬೇಕಾದ, ಖಾಲಿಯಾಗೇ ಉಳಿದಿರುವ ಹುದ್ದೆಗಳನ್ನು ತುಂಬಬಹುದಿತ್ತಲ್ಲ?

ಕೋಟ್ಯಂತರ ರೂಪಾಯಿ ವ್ಯಯಿಸಿ ತಿಂಗಳಿಗೊಂದು ರೈಲಿಗೆ ಹಸಿರು ನಿಶಾನೆ ತೋರಿಸಿ ಫೋಟೋ ಕ್ಲಿಕ್ಕಿಸಿಕೊಳ್ಳುವ ಬದಲು, ‘ಕವಚ’ ತಂತ್ರಜ್ಞಾನಕ್ಕೆ ಪ್ರಾಮುಖ್ಯತೆ ಕೊಟ್ಟು ಎಲ್ಲೆಡೆ ಅಳವಡಿಸಬಹುದಿತ್ತಲ್ಲ” ಎಂದು ಕೇಂದ್ರ ಸರ್ಕಾರಕ್ಕೆ ಸಾಲು ಸಾಲು ಪ್ರಶ್ನೆಗಳನ್ನು ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಾಗೆ ನೋಡಿದರೆ ಕಳೆದ 6-7 ವರ್ಷಗಳಲ್ಲಿ 1,000 ಕ್ಕೂ ಹೆಚ್ಚು ರೈಲು ಗಳು ಹಳಿತಪ್ಪಿ ಅಪಘಾತಕ್ಕೀಡಾಗಿದ್ದರೂ, 2021ರ ʼಸಿಎಜಿʼ ವರದಿಯನ್ನು ಕಡೆಗಣಿಸಿ ಸುರಕ್ಷತೆಗಿಂತ ದೇಶದ ಸ್ವತ್ತನ್ನು ಮಾರಿ ದುಡ್ಡು ಮಾಡುವುದರಲ್ಲೇ ನಿರತವಾದ ಸರ್ಕಾರವೇ ಈ ದುರಂತಕ್ಕೆ ಕಾರಣವಲ್ಲವೇ? ಅಪರಾಧಿ ಸರ್ಕಾರವೇ ಅಪರಾಧದ ತನಿಖೆ ಮಾಡಿ ಅಪರಾಧಿ ಯಾರೆಂದು ಕಂಡು ಹಿಡಿಯುತ್ತದಂತೆ. ಎಂಥ ವಿಪರ್ಯಾಸ!” ಎಂದು ವ್ಯಂಗ್ಯವಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ನಾಸೀರುದ್ದೀನ್‌ ಶಾ ಮನೆಯ ಬಚ್ಚಲು ಕೋಣೆ ಬಾಗಿಲಿಗೆ ಹಿಡಿಕೆಯಾದ ʼಫಿಲ್ಮ್‌ ಫೇರ್‌ʼ ಪ್ರಶಸ್ತಿ

ಇಲ್ಲಿ ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕಿಶೋರ್‌, “ಮೂರ್ಖ ಸರ್ಕಾರದ, ನಾಲಾಯಕ್ಕು ಮಂತ್ರಿಗಳ, ಪ್ರಜೆಗಳೆಲ್ಲ ಬರೀ ಮತಗಳಂತೆ ಕಾಣುವ ಪ್ರಚಾರಿ ಪ್ರಧಾನಿಯ ಸಂಕುಚಿತ ದೃಷ್ಟಿಯನ್ನು ಮುಚ್ಚಿ ಹಾಕಲು ಹೋಗಿ ಆಡಳಿತ ಪಕ್ಷ ಮತ್ತದರ ಬೂಟು ನೆಕ್ಕುವ ಮಾಧ್ಯಮಗಳು ಇಮೇಜ್ ಮ್ಯಾನೇಜ್‌ಮೆಂಟ್‌ ಮಾಡುತ್ತಾ, ತಪ್ಪನ್ನೂ ಸರಿಯೆಂದು ಸಾಧಿಸ ಹೊರಟರೆ ಕಳೆದುಕೊಂಡ ಪ್ರಾಣಗಳಿಗೆ, ನೊಂದು ಜರ್ಜರಿತವಾದ ಕುಟುಂಬಗಳ ಕಣ್ಣೀರಿಗೆ ಅರ್ಥವಿಲ್ಲದೇ ಹೋದೀತು. ಮಡಿದ ನೂರಾರು ಅಮಾಯಕರ ಜೀವಗಳಿಗೆ ಅಶ್ರುತರ್ಪಣ. ಇನ್ನಾದರೂ ಸರ್ಕಾರಗಳು ಎಚ್ಚೆತ್ತುಕೊಳ್ಳಲಿ. ಅಪಘಾತ, ದುರಂತಗಳನ್ನು ತಮ್ಮ ಇಮೇಜು ಬೆಳೆಸಿಕೊಳ್ಳಲು ಬಳಸುವುದನ್ನು ಬಿಟ್ಟು ಚುನಾವಣೆಯಾಚೆಗಿನ ತಮ್ಮ ಕರ್ತವ್ಯವನ್ನು ಇನ್ನಾದರೂ ನಿಭಾಯಿಸಲಿ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...