ಸಿನಿಮಾ | ʼರವಿಕೆ ಪ್ರಸಂಗʼ ಚಿತ್ರತಂಡದಿಂದ ವಿಭಿನ್ನ ಪ್ರಚಾರತಂತ್ರ; ಬೆಸ್ಟ್‌ ಟೈಲರ್‌ ಸ್ಪರ್ಧೆ

Date:

ಯುವ ನಿರ್ದೇಶಕ ಸಂತೋಷ್‌ ಕೊಡೆಂಕೇರಿ ನಿರ್ದೇಶನ ಮತ್ತು ದೃಷ್ಟಿ ಮೀಡಿಯಾ ಅಂಡ್‌ ಪ್ರೊಡಕ್ಷನ್ಸ್‌ ನಿರ್ಮಾಣದ ಚಿತ್ರ ʼರವಿಕೆ ಪ್ರಸಂಗʼ ಇದೇ 16ರಂದು ಬಿಡುಗಡೆಯಾಗಲಿದೆ. ಈಗಾಗಲೇ ಚಿತ್ರದ ಹಾಡುಗಳು ಟ್ರೈಲರ್‌ ಬಿಡುಗಡೆಯಾಗಿ ಸದಭಿರುಚಿಯ ಚಿತ್ರ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ. ಚಿತ್ರದ ಪ್ರಚಾರ ಕಾರ್ಯವನ್ನು ವಿಭಿನ್ನವಾಗಿ ನಡೆಸುತ್ತಿರುವ ಚಿತ್ರ ತಂಡ ಕರ್ನಾಟಕದ ಬೆಸ್ಟ್‌ ಟೈಲರ್‌ಸ್ಪರ್ಧೆಯನ್ನು ಏರ್ಪಡಿಸಿದೆ.

ಕರ್ನಾಟಕದ ಬೆಸ್ಟ್ ಟೈಲರ್ಅನ್ನು ಗುರುತಿಸುವ ಕಂಟೆಸ್ಟ್ ಲಾಂಚ್ ಮಾಡಿದ ತಂಡ ಬೆಸ್ಟ್ ಟೈಲರನ್ನು ಗುರುತಿಸಿ ಭರ್ಜರಿ ಬಹುಮಾನ ನೀಡಿ ಸನ್ಮಾನಿಸಲಾಗುವುದು ಎಂದು ಘೋಷಿಸಿದೆ. ವಿಜೇತರಾದವರಿಗೆ, ಹೊಲಿಗೆ ಯಂತ್ರ, ಮೊಬೈಲ್ ಫೋನ್ ಹಾಗೂ ಸಿನಿಮಾ ಟಿಕೆಟ್ ನೀಡಲಾಗುವುದು ಎಂದು ಚಿತ್ರತಂಡ ಮಾಹಿತಿ ನೀಡಿದೆ.

ಹಾಗೆಯೇ ಬೆಸ್ಟ್‌ ಡಿಸೈನ್‌ ಎಂಬ ಸ್ಪರ್ಧೆಯೊಂದನ್ನು ಕೂಡಾ ಘೋಷಿಸಿದೆ. “ತಮಗೆ ಇಷ್ಟವಾದ ತಮ್ಮಲ್ಲಿರುವ ಬೆಸ್ಟ್‌ ಡಿಸೈನರ್‌ ರವಿಕೆಯ ಚಿತ್ರವನ್ನು ಕಳುಹಿಸಿಕೊಡಲು ಕೋರಲಾಗಿದೆ. ಈಗಾಗಲೇ ಹಲವು ಮಹಿಳೆಯರು ಫೋಟೋಗಳನ್ನು ಕಳುಹಿಸಿಕೊಟ್ಟಿದ್ದಾರೆ. ಎರಡೂ ಸ್ಪರ್ಧೆಗಳ ಪ್ರವೇಶಕ್ಕೆ ಫೆ 14 ಕೊನೆಯ ದಿನವಾಗಿದೆಎಂದು ನಿರ್ದೇಶಕ ಸಂತೋಷ್‌ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಷ್ಟೇ ಅಲ್ಲ ರಾಜ್ಯದಾದ್ಯಂತ ಹಲವು ಊರುಗಳಲ್ಲಿ ಜನರೊಂದಿಗೆ ಚಿತ್ರದ ಟ್ರೈಲರ್‌ ಪ್ರದರ್ಶಿಸಿ ಜನರೊಂದಿಗೆ ಸಂವಾದ ನಡೆಸುತ್ತಿರುವ ಚಿತ್ರತಂಡದ ಜೊತೆ ಮಹಿಳೆಯರು ರವಿಕೆ ಸಂಬಂಧಿಸಿದ ತಮ್ಮ ನವಿರು ಅನುಭವಗಳನ್ನು ಹಂಚಿಕೊಂಡು ಚಿತ್ರತಂಡಕ್ಕೆ ಶುಭ ಕೋರುತ್ತಿದ್ದಾರೆ.

trailar
ಚಿತ್ರದ ಟ್ರೈಲರ್‌ ರಿಲೀಸ್‌ ಮಾಡಿದ ನಟ ಧನಂಜಯ್‌ ಜೊತೆ ಚಿತ್ರ ತಂಡ

ಗಣ್ಯರ ಮೆಚ್ಚು,ಹಾರೈಕೆ : ಜನವರಿ 20ರಂದು ಚಿತ್ರದ ಟ್ರೈಲರನ್ನು ನಟ ಧನಂಜಯ್‌ ಬಿಡುಗಡೆ ಮಾಡಿ ಶುಭ ಹಾರೈಸಿದ್ದರು. ಗಾಯಕಿಯೂ ಆಗಿರುವ ಕಿರುತೆರೆ ನಟಿ ಗೀತಾ ಭಾರತಿ ಭಟ್‌ ನಟಿಸಿರುವ ಈ ಚಿತ್ರಕ್ಕೆ ಚಿತ್ರರಂಗದ ಹಲವು ಗಣ್ಯರು ವಿಡಿಯೋ ಮೂಲಕ ಶುಭ ಹಾರೈಸಿದ್ದಾರೆ. ಟ್ರೈಲರ್‌ ನೋಡಿದ ಹಿರಿಯ ಕಲಾವಿದರು ಚಿತ್ರದ ಬಗ್ಗೆ ಭರವಸೆಯ ಮಾತುಗಳನ್ನಾಡಿದ್ದಾರೆ. ಹಿರಿಯ ಪತ್ರಕರ್ತೆ ವಿಜಯಮ್ಮ, ಹಿರಿಯ ಕಲಾವಿದರಾದ ಡಾಲಿ ಧನಂಜಯ್‌, ಸಿಹಿಕಹಿ ಚಂದ್ರು, ಪದ್ಮಜಾ ರಾವ್‌, ನಿರ್ದೇಶಕ ಯೋಗರಾಜ್‌ ಭಟ್‌, ಮಹೇಶ್‌ ಬಾಬು, ನಟಿ ಲಕ್ಷ್ಮಿ ಭಟ್‌, ದಯಾಳ್ ಪದ್ಮನಾಭನ್‌, ಸಂಗೀತ ನಿರ್ದೇಶಕ ಗುರುಕಿರಣ್‌, ಗಾಯಕಿ ಶಮಿತಾ ಮಲ್ನಾಡ್‌, ಗುರುಕಿರಣ್‌, ಹಿರಿಯ ನಟಿ ಶ್ರುತಿ ಹಾಗೂ ಬೇರೆ ಬೇರೆ ಕ್ಷೇತ್ರದ ಗಣ್ಯರು ಟ್ರೈಲರ್‌ ವೀಕ್ಷಿಸಿ ವಿಡಿಯೋ ಮೂಲಕ ಶುಭ ಕೋರಿದ್ದಾರೆ.

ಚಿತ್ರಕ್ಕೆ ಮುರಳೀಧರ್‌ ಎನ್‌ ಅವರ ಛಾಯಾಗ್ರಹಣವಿದೆ. ರಘು ಶಿವರಾಮ್‌ ಸಂಕಲನ, ಕಿರಣ್‌ ಕಾವೇರಪ್ಪ ಸಾಹಿತ್ಯವಿದೆ. ವಿನಯ್‌ ಶರ್ಮಾ ಸಂಗೀತ ನೀಡಿದ್ಧಾರೆ. ರಮೇಶ್‌ ಕೃಷ್ಣ ಹಿನ್ನೆಲೆ ಸಂಗೀತ ನೀಡಿದ್ದಾರೆ. ಗೀತಾ ಭಾರತಿ ಭಟ್‌, ಸುಮನ್‌ ರಂಗನಾಥ್‌, ರಾಕೇಶ್‌ ಮಯ್ಯ, ಸಂಪತ್‌ ಮೈತ್ರೇಯ, ಪದ್ಮಜಾ ರಾವ್‌, ಕೃಷಮೂರ್ತಿ ಕವತ್ತಾರ್‌, ಪ್ರವೀಣ್‌ ಅಥರ್ವ, ರಘು ಪಾಂಡೇಶ್ವರ, ಹನುಮಂತೇಗೌಡ, ಖುಷಿ ಆಚಾರ್‌, ಹನುಮಂತ್‌ ರಾವ್‌ ಕೆ ಪಾತ್ರ ವರ್ಗದಲ್ಲಿದ್ದಾರೆ. ಕಂದಯ್ಯ ಶೆಟ್ಟಿ ಅವರು ಚಿತ್ರದ ಸಹ ನಿರ್ಮಾಪಕರಾಗಿದ್ದಾರೆ. ಚಿತ್ರಕತೆ ಮತ್ತು ಸಂಭಾಷಣೆ ಪಾವನಾ ಸಂತೋಷ್‌ ಬರೆದಿದ್ದಾರೆ. ರವಿಕೆ ಹೊಲಿಸುವಲ್ಲಿ ಅನುಭವಿಸಿದ ತಮ್ಮದೇ ಅನುಭವದ ಎಳೆ ಇಟ್ಟುಕೊಂಡು ಕಥೆಯನ್ನು ಹೆಣೆದಿರುವುದಾಗಿ ಪಾವನಾ ಹೇಳಿದ್ದಾರೆ.

ಮಧ್ಯಮ ಕುಟುಂಬವೊಂದರ ಕತೆ ಇದಾಗಿದೆ. ಮದುವೆಗೆ ತಯಾರಾಗುವ ಯುವತಿಯು ರವಿಕೆ ಹೊಲಿಯಲು ಟೈಲರ್‌ಗೆ ಕೊಟ್ಟಿರುತ್ತಾಳೆ. ಆತ ಆಕೆ ಹೇಳಿದಂತೆ ಹೊಲಿಯದ ಕಾರಣ ಶುರುವಾದ ಜಗಳ ಕೋರ್ಟ್‌ ಮೆಟ್ಟಿಲೇರುತ್ತದೆ. ಈ ಎಳೆಯ ಮಧ್ಯೆ ಹೆಣ್ಣಿನ ಭಾವನೆಗಳು, ತುಮುಲಗಳು, ಸಮಾಜ ನೋಡುವ ಬಗೆಯನ್ನು ನವಿರು ಹಾಸ್ಯದ ಮೂಲಕ ಚಿತ್ರಿಸಲಾಗಿದೆ. ಮಹಿಳೆಯರ ಬದುಕಿಗೆ ಆಪ್ತವಾಗುವ ಸಿನಿಮಾ ಇದಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಸಂಪಾಜೆ, ತೊಡಿಕಾನ ಸೇರಿದಂತೆ ಹಲವು ಕಡೆಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ದಕ್ಷಿಣ ಕನ್ನಡದ ಭಾಷಾ ಸೊಗಡು ಚಿತ್ರದಲ್ಲಿದೆ. ರಾಜ್ಯಾದ್ಯಂತ ಹಾಗೂ ಬೆಂಗಳೂರಿನ  ಮಲ್ಟಿಫ್ಲೆಕ್ಸ್‌ಗಳಲ್ಲಿ ಇದೇ 16 ರಂದು ಚಿತ್ರ ಬಿಡುಗಡೆಯಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...