ಜನರ ಭಾವನೆಗಳಿಗೆ ಧಕ್ಕೆ; ‘ಆದಿಪುರುಷ್’ ಚಿತ್ರದ ವಿರುದ್ಧ ಕಾಂಗ್ರೆಸ್, ಎಎಪಿ, ಶಿವಸೇನೆ ಆಕ್ರೋಶ

Date:

‘ಆದಿಪುರುಷ್’ ಸಿನಿಮಾದಲ್ಲಿ ಹನುಮಂತನ ಪಾತ್ರಕ್ಕೆ ಕೀಳು ಮಟ್ಟದ ಸಂಭಾಷಣೆ ಬಳಸಿ ಜನರ ಭಾವನೆಗಳಿಗೆ ಧಕ್ಕೆ ತಂದಿರುವುದಕ್ಕಾಗಿ ಕಾಂಗ್ರೆಸ್, ಎಎಪಿ ಮತ್ತು ಶಿವಸೇನೆಯ ಉದ್ಧವ್ ಠಾಕ್ರೆ ಬಣ ಆಕ್ರೋಶ ವ್ಯಕ್ತಪಡಿಸಿದೆ.

‘ಆದಿಪುರುಷ್’ ಚಿತ್ರದ ಸಂಭಾಷಣೆಗಾರ ಮನೋಜ್ ಮುಂತಶೀರ್ ಹನುಮಂತನ ಪಾತ್ರಕ್ಕೆ ಕೆಟ್ಟ ರೀತಿಯ ಸಂಭಾಷಣೆಗಳನ್ನು ಬರೆದಿರುವುದರ ವಿರುದ್ಧ ಎಲ್ಲೆಡೆ ಟೀಕೆ ವ್ಯಕ್ತವಾಗಿದೆ.

ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾತೆ ಟ್ವೀಟ್ ಮಾಡಿ, ‘ಆದಿಪುರುಷ್’ ಸಿನಿಮಾದಲ್ಲಿ ಬಳಸಿರುವ ಟಪೋರಿ ಭಾಷೆ (ರಸ್ತೆ ಅಥವಾ ಪುಂಡುಪೋಕರಿಗಳು ಬಳಸುವ ಭಾಷೆ) ಜನರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಆರಾಧ್ಯ ಭಗವಾನ್ ಶ್ರೀರಾಮನು ಮರ್ಯಾದಾ ಪುರುಷೋತ್ತಮ ಮತ್ತು ಭಗವಾನ್ ಶ್ರೀ ಹನುಮಂತನು ಸೌಮ್ಯತೆ ಮತ್ತು ಗಂಭೀರತೆಯ ಸಂಕೇತವಾಗಿದ್ದಾನೆ. 1987 ರಲ್ಲಿ ರಮಾನಂದ್ ಸಾಗರ್ ಅವರು ರಾಮಾಯಣ ಧಾರಾವಾಹಿಯನ್ನು ನಿರ್ಮಿಸಿದಾಗ, ಆಗಿನ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರು “ರಾಮಾಯಣ’ ಲಕ್ಷಾಂತರ ವೀಕ್ಷಕರ ಹೃದಯ ಮತ್ತು ಮನಸ್ಸನ್ನು ಬೆಳಗಿಸಿತು ಎಂದು ಹೇಳಿದ್ದರು. ಅಂದು ನಿರ್ಮಿಸಿದ ಧಾರಾವಾಹಿಯು ಭಾರತದ ಶ್ರೇಷ್ಠ ಸಂಸ್ಕೃತಿ, ಸಂಪ್ರದಾಯ ಮತ್ತು ನೈತಿಕ ಮೌಲ್ಯಗಳನ್ನು ತಿಳಿಸಿಕೊಟ್ಟಿತ್ತು” ಎಂದು ತಿಳಿಸಿದರು.

“ಈಗ ನಿರ್ಮಿಸಿರುವ ‘ಆದಿಪುರುಷ್’ ಸಿನಿಮಾವು ಟಪೋರಿ ಭಾಷೆಯಿಂದ ಕೋಟ್ಯಂತರ ಜನರ ನಂಬಿಕೆಗೆ ಘಾಸಿ ಮಾಡಿದೆ. ಆಗ ಸಮಾಜದ ಮನಸ್ಸು ಮತ್ತು ಹೃದಯಗಳಲ್ಲಿ ರಮಾನಂದ ಸಾಗರ್ ಅವರು ಸೀತಾರಾಮ್ ಅವರ ಆಕರ್ಷಕ ಚಿತ್ರಣವನ್ನು ಅಚ್ಚೊತ್ತಿದ್ದರು” ಎಂದು ಬರೆದುಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ಯುರೋಪಿಯನ್ ಎಸ್ಸೇ ಪ್ರೈಜ್’ ಪ್ರಶಸ್ತಿಗೆ ಭಾಜನರಾದ ಅರುಂಧತಿ ರಾಯ್

“ಇದೇ ಧರ್ಮಕ್ಕೂ ಧರ್ಮದ ವ್ಯವಹಾರಕ್ಕೂ ಇರುವ ವ್ಯತ್ಯಾಸ. ನಿಮ್ಮ ಹೊಗಳುಭಟ್ಟತನದಿಂದಾಗಿ ಅಗ್ಗದ ಜನಪ್ರಿಯತೆಯನ್ನು ಪಡೆಯುತ್ತೀರಿ. ದೇಶದಲ್ಲಿ ದೊಡ್ಡ ಪ್ರದರ್ಶನಗಳು ಸಹ ಲಭ್ಯವಿವೆ. ಆದರೆ ಪ್ರತಿಭೆಯ ಕೊರತೆಯು ಖಂಡಿತವಾಗಿಯೂ ಸಿನಿಮಾದಲ್ಲಿ ಕಂಡು ಬರುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 

ಸುಪ್ರಿಯಾ ಶ್ರೀನಾತೆ ಅವರು ತಮ್ಮ ಟ್ವೀಟ್‌ನಲ್ಲಿ ರಾಜೀವ್‌ ಗಾಂಧಿ ಅವರು ರಮಾನಂದ್‌ ಸಾಗರ್‌ ಅವರನ್ನು ಭೇಟಿ ಮಾಡಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಸಂಸದೆ ಪ್ರಿಯಾಂಕಾ ಚತುರ್ವೇದಿ, “ಮನರಂಜನೆಯ ಹೆಸರಿನಲ್ಲಿ ನಮ್ಮ ಪೂಜ್ಯ ದೇವರುಗಳಿಗೆ ಕೆಟ್ಟ ಭಾಷೆ ಬಳಸಿರುವುದು ಪ್ರತಿಯೊಬ್ಬ ಭಾರತೀಯನ ಸಂವೇದನೆಗಳಿಗೆ ನೋವುಂಟು ಮಾಡುತ್ತದೆ. ಸಂಭಾಷಣೆಗಾರ ಮನೋಜ್ ಮುಂತಶೀರ್ ಹಾಗೂ ಚಿತ್ರ ನಿರ್ದೇಶಕ ಓಂ ರಾವುತ್ ಅವರು ಸಿನಿಮಾದಲ್ಲಿ ಅಸಭ್ಯ ಭಾಷೆ ಬಳಸಿದ್ದಕ್ಕಾಗಿ ದೇಶದ ಜನರ ಕ್ಷಮೆಯಾಚಿಸಬೇಕು” ಎಂದು ಆಗ್ರಹಿಸಿದ್ದಾರೆ.

ಎಎಪಿ ರಾಷ್ಟ್ರೀಯ ವಕ್ತಾರ ಸಂಜಯ್ ಸಿಂಗ್, “ಈ ಚಿತ್ರವು ರಾಮ, ಸೀತಾ ದೇವತೆ ಮತ್ತು ಹನುಮಾನ್ ದೇವರಿಗೆ ಮತ್ತು ಹಿಂದೂ ಸಮಾಜಕ್ಕೆ “ಘೋರ ಅವಮಾನ” ಮಾಡಿದೆ. ಸಿನಿಮಾಕ್ಕೆ ಬಿಜೆಪಿ ಅನುಮತಿ ನೀಡಿದೆ. ಇಂತಹ ಚಿತ್ರ ನಿರ್ಮಾಣ ಮತ್ತು ಪ್ರದರ್ಶನಕ್ಕೆ ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ದೇಶದ ಕ್ಷಮೆ ಯಾಚಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಲಂಕಾ ರಾಜ ರಾವಣನ ಮಗ ಹನುಮಂತನ ಬಾಲಕ್ಕೆ ಬೆಂಕಿ ಹಚ್ಚುವ ದೃಶ್ಯವು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ‘ಕಪಡಾ ತೇರೆ ಬಾಪ್ ಕಾ, ತೇಲ್ ತೇರೆ ಬಾಪ್ ಕಾ, ಆಗ್ ಭೀ ತೇರೆ ಬಾಪ್ ಕಿ, ತೋ ಜಲೇಗಿ ಭೀ ತೇರೆ ಬಾಪ್ ಕಿ ( ಬಟ್ಟೆ ನಿಮ್ಮಪ್ಪಂದು, ಎಣ್ಣೆ ನಿಮ್ಮಪ್ಪಂದು, ಬೆಂಕಿ ನಿಮ್ಮಪ್ಪಂದು, ಉರಿಯುವುದು ನಿಮ್ಮಪ್ಪಂದು ) ಎಂಬ ಕೀಳು ಮಟ್ಟದ ಸಂಭಾಷಣೆಯು ದೇಶಾದ್ಯಂತ ವಿವಾದ ಸೃಷ್ಟಿಸಿದೆ.

“ಆದಿಪುರುಷ್” ಸಿನಿಮಾವನ್ನು ಓಂ ರಾವುತ್ ನಿರ್ದೇಶಿಸಿದ್ದು, ಭೂಷಣ್ ಕುಮಾರ್ ನಿರ್ಮಿಸಿದ್ದಾರೆ. ಬಾಹುಬಲಿ ಖ್ಯಾತಿಯ ಪ್ರಭಾಸ್ ರಾಮನಾಗಿ, ಕೃತಿ ಸನೋನ್ ಸೀತೆಯಾಗಿ ಮತ್ತು ಸನ್ನಿ ಸಿಂಗ್ ಲಕ್ಷ್ಮಣನಾಗಿ ನಟಿಸಿದ್ದಾರೆ. ಚಿತ್ರದಲ್ಲಿ ಸೈಫ್ ಅಲಿ ಖಾನ್ ರಾವಣನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

‘ಆದಿಪುರುಷ್’ ಬಿಡುಗಡೆಗೂ ಮುನ್ನ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸೇರಿದಂತೆ ಹಲವು ಬಿಜೆಪಿ ನಾಯಕರು ಚಿತ್ರದ ಯಶಸ್ಸಿಗೆ ಶುಭ ಕೋರಿದ್ದರು.

ಸಂಭಾಷಣೆ ಬದಲಿಸಲು ಚಿತ್ರತಂಡ ನಿರ್ಧಾರ

ವಿವಾದಕ್ಕೆ ಗುರಿಯಾಗಿರುವ ಸಿನಿಮಾದ ಕೆಲವು ಸಂಭಾಷಣೆಗಳನ್ನು ಪರಿಷ್ಕರಿಸಲು ನಿರ್ಮಾಪಕರು
ನಿರ್ಧರಿಸಿರುವುದಾಗಿ ಚಿತ್ರದ ಸಂಭಾಷಣಕಾರ ಮನೋಜ್ ಮುಂತಶೀರ್ ತಿಳಿಸಿದ್ದಾರೆ.

ಹಿಂದು ಮಹಾಕಾವ್ಯ ರಾಮಾಯಣ ಆಧಾರಿತ, ಪ್ರಭಾಸ್ ನಟನೆಯ, ಬಹುತಾರಾಗಣದ ‘ಆದಿಪುರುಷ’ ಸಿನಿಮಾಕ್ಕೆ ಮನೋಜ್‌ ಅವರು ಹಿಂದಿ ಸಂಭಾಷಣೆ ಮತ್ತು ಹಾಡುಗಳನ್ನು ಬರೆದಿದ್ದಾರೆ. ತಿದ್ದುಪಡಿ ಮಾಡಿದ ಸಾಲುಗಳನ್ನು ಈ ವಾರದೊಳಗೆ ಚಿತ್ರಕ್ಕೆ ಸೇರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

‘ನಿಮ್ಮ ಭಾವನೆಗಳಿಗಿಂತ ನನಗೆ ದೊಡ್ಡದು ಏನೂ ಇಲ್ಲ. ನನ್ನ ಸಂಭಾಷಣೆಗಳ ಪರವಾಗಿ ನಾನು ಲೆಕ್ಕವಿಲ್ಲದಷ್ಟು ವಾದಗಳನ್ನು ಮಂಡಿಸಬಲ್ಲೆ. ಆದರೆ ಇದು ನಿಮ್ಮ ನೋವನ್ನು ಕಡಿಮೆ ಮಾಡುವುದಿಲ್ಲ. ನಾನು ಮತ್ತು ಚಿತ್ರದ ನಿರ್ಮಾ ಪಕ ನಿರ್ದೇಶಕರು ಸಂಭಾಷಣೆಯನ್ನು ಬದಲಿಸಲು ನಿರ್ಧರಿಸಿದ್ದೇವೆ. ನಿಮ್ಮನ್ನು ನೋಯಿಸುವ ಸಂಭಾಷಣೆಗಳನ್ನು ಕತ್ತರಿ ಹಾಕಿ ಪರಿಷ್ಕೃತ ಸಂಭಾಷಣೆಗಳನ್ನು ಈ ವಾರ ಚಿತ್ರಕ್ಕೆ ಸೇರಿಸಲಾಗುವುದು’ ಎಂದು ಮನೋಜ್‌ ತಮ್ಮ ಟ್ವಿಟರ್‌ನಲ್ಲಿ ಹಂಚಿಕೊಂಡ ಹೇಳಿಕೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...