ಜಾಕ್ವೆಲಿನ್‌ಗೆ ಜೈಲಿನಿಂದ ಪ್ರೇಮಪತ್ರ ಬರೆದ ಸುಕೇಶ್‌

Date:

200 ಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಸುಕೇಶ್‌

ಹೋಳಿ ಹಬ್ಬದ ಸಂದರ್ಭದಲ್ಲೂ ನಟಿಗೆ ಪತ್ರ ಬರೆದಿದ್ದ ಆರೋಪಿ

ಬಹುಕೋಟಿ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಪ್ರಮುಖ ಆರೋಪಿ ಎನ್ನಿಸಿಕೊಂಡು ಜೈಲು ಸೇರಿರುವ ಸುಕೇಶ್‌ ಚಂದ್ರಶೇಖರ್‌ ತನ್ನ ಹುಟ್ಟು ಹಬ್ಬದ ದಿನವಾದ (ಮಾರ್ಚ್‌ 25) ಇಂದು ತನ್ನ ಮಾಜಿ ಪ್ರೇಯಸಿ, ಬಾಲಿವುಡ್‌ನ ಖ್ಯಾತ ನಟಿ ಜಾಕ್ವೇಲಿನ್‌ ಫರ್ನಾಂಡಿಸ್‌ಗೆ ಪ್ರೇಮ ಪತ್ರ ಬರೆದಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹುಟ್ಟು ಹಬ್ಬದ ಹಿನ್ನೆಲೆ ಜಾಕ್ವೆಲಿನ್‌ಗೆ ಪತ್ರ ಬರೆದಿರುವ ಸುಕೇಶ್‌, “ನನ್ನ ಹುಟ್ಟುಹಬ್ಬದ ಈ ದಿನದಂದು ನೀನು ನನ್ನ ಜೊತೆಗಿಲ್ಲ ಎಂಬುದಕ್ಕೆ ಬೇಸರವಾಗುತ್ತಿದೆ. ಏನು ಹೇಳಬೇಕೆಂದು ತೋಚುತ್ತಿಲ್ಲ. ನನ್ನ ಮೇಲೆ ನಿನಗಿರುವ ಪ್ರೀತಿ ಎಂದಿಗೂ ಕೊನೆಯಾಗುವುದಿಲ್ಲ ಎಂಬುದು ಗೊತ್ತಿದೆ. ನನ್ನ ಬಗ್ಗೆ ನಿನ್ನ ಮನಸ್ಸಿನಲ್ಲಿ ಯಾವ ಅಭಿಪ್ರಾಯವಿದೆ ಎಂಬುದನ್ನೂ ಬಲ್ಲೆ. ನನಗೆ ನನ್ನ ಪ್ರೀತಿಯಷ್ಟೇ ಬೇಕು. ಎಲ್ಲರೆದರು ನಮ್ಮ ಪ್ರೀತಿಯನ್ನು ನೀನು ಸಾಬೀತುಪಡಿಸುವ ಅಗತ್ಯವಿಲ್ಲ. ನಿನ್ನ ಪ್ರೀತಿ ನನಗೆ ಸಿಕ್ಕ ಅತ್ಯುತ್ತಮ ಕೊಡುಗೆ. ಏನೇ ಬಂದರೂ ನಾನು ನಿನ್ನ ಜೊತೆಗಿರುತ್ತೇನೆ. ನಿನ್ನ ಹೃದಯವನ್ನು ನನಗೆ ನೀಡಿದ್ದಕ್ಕಾಗಿ ಧನ್ಯವಾದ. ಹಾಗೆಯೇ ನನ್ನ ಹುಟ್ಟು ಹಬ್ಬಕ್ಕೆ ಶುಭಕೋರಿ ಪತ್ರ ಬರೆದ ಎಲ್ಲ ಸ್ನೇಹಿತರು ಮತ್ತು ಕುಟುಂಬದವರಿಗೆ ಧನ್ಯವಾದ” ಎಂದಿದ್ದಾನೆ.

ಈ ಹಿಂದೆ ಹೋಳಿ ಹಬ್ಬದ ಸಂದರ್ಭದಲ್ಲೂ ಜೈಲಿನಿಂದಲೇ ಜಾಕ್ವೆಲಿನ್‌ಗೆ ಪತ್ರ ಬರೆದಿದ್ದ ಸುಕೇಶ್‌, “ನಿನ್ನ ಬದುಕಿನಲ್ಲಿ ಮರೆಯಾದ ರಂಗನ್ನು ನಾನು ಮರಳಿ ತರುತ್ತೇನೆ. ನಿನಗಾಗಿ ಯಾವ ಹಂತಕ್ಕೆ ಬೇಕಿದ್ದರೂ ಹೋಗಲು ತಯಾರಿದ್ದೇನೆ” ಎಂದು ಹೋಳಿ ಹಬ್ಬದ ಶುಭಾಶಯ ತಿಳಿಸಿದ್ದ.

ಈ ಸುದ್ದಿ ಓದಿದ್ದೀರಾ? ರಾಹುಲ್‌ ಗಾಂಧಿ ಅನರ್ಹ | ವಿನಾಶಕಾಲೇ ವಿಪರೀತ ಬುದ್ಧಿ ಎಂದ ಕವಿರಾಜ್‌

ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಉದ್ಯಮಿಯೊಬ್ಬರ ಪತ್ನಿಗೆ ತಾನು ಕೇಂದ್ರ ಗೃಹ ಸಚಿವಾಲಯದ ಹಿರಿಯ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ ಸುಕೇಶ್‌, ಉದ್ಯಮಿಯನ್ನು ಜೈಲಿನಿಂದ ಖುಲಾಸೆಗೊಳಿಸುವುದಾಗಿ ನಂಬಿಸಿ, ಆತನ ಪತ್ನಿಯಿಂದ ಬರೋಬ್ಬರಿ 200 ಕೋಟಿ ರೂಪಾಯಿಗೂ ಅಧಿಕ ಮೊತ್ತವನ್ನು ಪಡೆದು ವಂಚಿಸಿದ್ದ ಎನ್ನಲಾಗಿದೆ. ಜೊತೆಗೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪವೂ ಈತನ ಮೇಲಿದೆ.

ಸುಕೇಶ್‌ ಜೊತೆಗೆ ನಂಟು ಹೊಂದಿದ್ದ ಜಾಕ್ವೆಲಿನ್‌, ಅಕ್ರಮದ ಹಣ ಎಂದು ತಿಳಿದ ಮೇಲೂ ಆತನಿಂದ ದುಬಾರಿ ಉಡಗೊರೆಗಳನ್ನು ಪಡೆದುಕೊಂಡಿದ್ದರು ಎಂದು ತನಿಖಾಧಿಕಾರಿಗಳು ತಮ್ಮ ವರದಿಯಲ್ಲಿ ಬಹಿರಂಗ ಪಡಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮತ್ತು ದೆಹಲಿ ಪೊಲೀಸರು ಹಲವು ಬಾರಿ ನಟಿಯ ವಿಚಾರಣೆ ನಡೆಸಿದ್ದಾರೆ. ಇತ್ತೀಚೆಗೆ ಪಟಿಯಾಲಾ ಹೌಸ್‌ ಕೋರ್ಟ್‌ನಲ್ಲಿ ವಿಚಾರಣೆಗೆ ಹಾಜರಾಗಿದ್ದ ಜಾಕ್ವೆಲಿನ್‌, “ಸುಕೇಶ್‌ನನ್ನು ನಂಬಿ ನಾನು ಹಾಳಾದೆ. ಆತ ನನ್ನ ವೃತ್ತಿ ಬದುಕನ್ನೇ ನಾಶ ಮಾಡಿದ” ಎಂದು ಅಳಲು ತೋಡಿಕೊಂಡಿದ್ದರು.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...