ಚುನಾವಣೆ ಹೊತ್ತಲ್ಲೂ ಸಖತ್‌ ಸದ್ದು ಮಾಡುತ್ತಿರುವ ʼಡೇರ್‌ಡೆವಿಲ್‌ ಮುಸ್ತಫಾʼ

Date:

ಪೂರ್ಣಚಂದ್ರ ತೇಜಸ್ವಿ ಅವರ ಕಿರುಕಥೆ ಆಧರಿಸಿದ ಚಿತ್ರ

ತೇಜಸ್ವಿ ಅಭಿಮಾನಿಗಳೇ ನಿರ್ಮಿಸಿದ ಅಪರೂಪದ ಚಿತ್ರ

ಕನ್ನಡದ ಖ್ಯಾತ ಲೇಖಕ ಪೂರ್ಣಚಂದ್ರ ತೇಜಸ್ವಿ ಅವರ ‘ಡೇರ್‌ಡೆವಿಲ್‌ ಮುಸ್ತಫಾ’ ಕಿರುಕಥೆಯನ್ನು ಆಧರಿಸಿ ಅದೇ ಶಿರ್ಷಿಕೆ ಅಡಿಯಲ್ಲಿ ಸಿದ್ಧಗೊಂಡಿರುವ ‘ಡೇರ್‌ ಡೆವಿಲ್‌ ಮುಸ್ತಫಾ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಇತ್ತೀಚೆಗೆ ಬಿಡುಗಡೆಯಾಗಿರುವ ಚಿತ್ರದ ಟ್ರೈಲರ್‌ ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ಅಭಿಮಾನಿಗಳೇ ಹಣ ಹೂಡಿ ನಿರ್ಮಿಸಿರುವ ಈ ಚಿತ್ರವನ್ನು ಮೂಲ ಕಥೆಗೆ ಧಕ್ಕೆಯಾಗದ ರೀತಿಯಲ್ಲಿ ತೆರೆಗೆ ಅಳವಡಿಸಿದ್ದಾರೆ ಯುವ ನಿರ್ದೇಶಕ ಶಶಾಂಕ್‌ ಸೋಗಾಲ್‌. ಈ ಹಿಂದೆ ʼಫಟಿಂಗʼ ಎಂಬ ಜನಪ್ರಿಯ ಕಿರುಚಿತ್ರ ನಿರ್ದೇಶಿಸಿದ್ದ ಶಶಾಂಕ್, ʼಡೇರ್‌ಡೆವಿಲ್‌ ಮುಸ್ತಫಾʼ ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ. ʼಡಾ. ಬ್ರೋʼ ಖ್ಯಾತಿಯ ಯುಟ್ಯೂಬರ್‌ ಗಗನ್‌ ಈ ಚಿತ್ರದ ನಿರೂಪಣೆಗೆ ಧ್ವನಿಯಾಗುವ ಮೂಲಕ ತೇಜಸ್ವಿ ಪ್ರಪಂಚವನ್ನು ಕನ್ನಡದ ಸಿನಿ ರಸಿಕರ ಪರಿಚಯ ಮಾಡಿಸುವ ವಿಶೇಷ ಪ್ರಯತ್ನ ಮಾಡಿದ್ದಾರೆ. ಚಿತ್ರತಂಡದ ಭಿನ್ನ ಪ್ರಚಾರತಂತ್ರ ಭಾರೀ ಮೆಚ್ಚುಗೆ ಗಳಿಸಿದೆ.

ಡೇರ್‌ಡೆವಿಲ್‌ ಮುಸ್ತಫಾ ಮತ್ತು ರಾಮಾನುಜ ಅಯ್ಯಂಗಾರಿ ಪಟಾಲಂನ ನಡುವಿನ ಇರಿಸುಮುರಿಸಿನ ಕಥೆಯಲ್ಲಿ ಹಿರಿಯ ನಟ ಮಂಡ್ಯ ರಮೇಶ್‌ ಅಬಚೂರು ಶಾಲೆಯ ಮುಖ್ಯ ಶಿಕ್ಷಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ನಾಗಭೂಷಣ್‌, ಪೂರ್ಣಚಂದ್ರ ಮೈಸೂರು, ಸುಂದರ್‌ ವೀಣಾ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಯುವ ಪ್ರತಿಭೆ ಶಿಶಿರ್‌ ಬೈಕಾಡಿ ಮುಸ್ತಫಾನ ಪಾತ್ರದಲ್ಲಿ ಗಮನ ಸೆಳೆಯುತ್ತಿದ್ದು, ಆದಿತ್ಯ ಅಶ್ರೀ, ಅಭಯ್‌, ಸುಪ್ರೀತ್‌ ಭಾರದ್ವಾಜ್‌, ಆಶಿತ್, ಶ್ರೀವತ್ಸ, ಪ್ರೇರಣಾ, ಎಂ.ಎಸ್‌. ಉಮೇಶ್‌ ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ನಿರೀಕ್ಷೆ ಹೆಚ್ಚಿಸಿದ ʼಆದಿಪುರುಷ್‌ʼ ಟ್ರೈಲರ್‌

ನವನೀತ್‌ ಶ್ಯಾಮ್‌ ಈ ಚಿತ್ರಕ್ಕೆ ಹಿನ್ನೆಲೆ ಸಂಗೀತ ನೀಡಿದ್ದು, ʼನಿನ್ನಂಥೋರ್ ಯಾರೂ ಇಲ್ವಲ್ಲೋʼ ಎಂಬ ಅನಿಮೇಷನ್‌ ಹಾಡು ಈಗಾಗಲೇ ಭಾರೀ ಜನಪ್ರಿಯತೆ ಗಳಿಸಿದೆ. ಅಣ್ಣಾವ್ರ ಅನಿಮೇಷನ್‌ ಹೊಂದಿರುವ ಈ ಹಾಡಿಗೆ ವಾಸುಕಿ ವೈಭವ್‌ ಮತ್ತು ಸಿದ್ಧಾರ್ಥ್‌ ಬೆಳ್ಮಣ್ಣು ಧ್ವನಿಯಾಗಿದ್ದಾರೆ.

ತೇಜಸ್ವಿ ಅವರ ಅಭಿಮಾನಿಗಳಿಂದಲೇ ತಯಾರಾಗಿರುವ ಚಿತ್ರಕ್ಕೆ ನಟ, ಸಾಹಿತ್ಯಾಸಕ್ತ ಡಾಲಿ ಧನಂಜಯ್ ಕೂಡ ಬೆಂಬಲವಾಗಿ ನಿಂತಿದ್ದಾರೆ. ತಮ್ಮ ಒಡೆತನದ ಡಾಲಿ ಪಿಕ್ಚರ್ಸ್‌ ಮೂಲಕ ಈ ಚಿತ್ರವನ್ನು ಪ್ರಸ್ತುತಪಡಿಸುವ ಜವಾಬ್ದಾರಿಯನ್ನು ಧನಂಜಯ್‌ ಹೊತ್ತುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...