ಸಾಗರದಾಚೆಗೂ `ಡೇರ್‌ಡೆವಿಲ್‌ ಮುಸ್ತಾಫಾʼ ಸದ್ದು

Date:

ಪೂರ್ಣಚಂದ್ರ ತೇಜಸ್ವಿ ಅವರ ಕಿರುಕಥೆ ಆಧಾರಿತ ಚಿತ್ರ

ನಿರೀಕ್ಷೆಗೂ ಮೀರಿ ಯಶಸ್ಸು ಕಂಡ ʼಡೇರ್‌ಡೆವಿಲ್‌ ಮುಸ್ತಾಫಾʼ

ಕನ್ನಡದ ಖ್ಯಾತ ಲೇಖಕ ಪೂರ್ಣಚಂದ್ರ ತೇಜಸ್ವಿ ಅವರ ಕಿರುಕಥೆಯನ್ನು ಆಧರಿಸಿ ತೆರೆಗೆ ಬಂದಿರುವ ʼಡೇರ್‌ಡೆವಿಲ್‌ ಮುಸ್ತಾಫಾʼ ಸಿನಿಮಾ ಎರಡನೇ ವಾರವೂ ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಉತ್ತಮ ಪ್ರತಕ್ರಿಯೆ ವ್ಯಕ್ತವಾದ ಬೆನ್ನಲ್ಲೇ ಸಿನಿಮಾವನ್ನು ಸಾಗರದಾಚೆಗೆ ಬಿಡುಗಡೆ ಮಾಡುವಲ್ಲಿ ಚಿತ್ರತಂಡ ಯಶಸ್ವಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಡೇರ್‌ಡೆವಿಲ್‌ ಮುಸ್ತಾಫಾʼ ಸಿನಿಮಾ ಬೆಂಗಳೂರು, ಮೈಸೂರು, ತುಮಕೂರು, ಧಾರವಾಡ, ಗುಲ್ಬರ್ಗ, ಉಡುಪಿ, ಕುಂದಾಪುರ ಸೇರಿದಂತೆ ರಾಜ್ಯದ ಹಲವೆಡೆ ಉತ್ತಮ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನು ವಿದೇಶದಲ್ಲಿ ನೆಲೆಸಿರುವ ಕನ್ನಡಿಗರು, ವಿಶೇಷವಾಗಿ ತೇಜಸ್ವಿ ಅವರ ಅಭಿಮಾನಿಗಳು ಈ ಚಿತ್ರವನ್ನು ಸಾಗರದಾಚೆಗೂ ಬಿಡುಗಡೆ ಮಾಡಬೇಕು ಎಂದು ಬೇಡಿಕೆ ಇಟ್ಟ ಹಿನ್ನೆಲೆ ಅಮೆರಿಕಾ, ಕೆನಡಾ, ಜರ್ಮನಿ, ಸ್ವೀಡನ್‌, ನೆದರ್‌ಲ್ಯಾಂಡ್ಸ್‌ ದೇಶಗಳ ಪ್ರಮುಖ ನಗರಗಳಲ್ಲಿ ʼಡೇರ್‌ಡೆವಿಲ್‌ ಮುಸ್ತಾಫಾʼ ಸಿನಿಮಾ ಮೇ 26ರಿಂದ ಪ್ರದರ್ಶನ ಕಾಣುತ್ತಿದೆ.

ಮುಸ್ತಾಫಾ ಮತ್ತು ರಾಮಾನುಜ ಅಯ್ಯಂಗಾರಿ ಪಟಾಲಂನ ನಡುವಿನ ಇರಿಸುಮುರಿಸಿನ ಕಥೆಯಲ್ಲಿ ಹಿರಿಯ ನಟ ಮಂಡ್ಯ ರಮೇಶ್‌ ಅಬಚೂರು ಕಾಲೇಜಿನ ಪ್ರಾಂಶುಪಾಲರ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ನಾಗಭೂಷಣ್‌, ಪೂರ್ಣಚಂದ್ರ ಮೈಸೂರು, ಸುಂದರ್‌ ವೀಣಾ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಯುವ ಪ್ರತಿಭೆ ಶಿಶಿರ್‌ ಬೈಕಾಡಿ ಮುಸ್ತಫಾನ ಪಾತ್ರದಲ್ಲಿ ಗಮನ ಸೆಳೆಯುತ್ತಿದ್ದು, ಆದಿತ್ಯ ಅಶ್ರೀ, ಅಭಯ್‌, ಸುಪ್ರೀತ್‌ ಭಾರದ್ವಾಜ್‌, ಆಶಿತ್, ಶ್ರೀವತ್ಸ, ಪ್ರೇರಣಾ, ಎಂ.ಎಸ್‌. ಉಮೇಶ್‌ ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ಸಿನಿಮಾ | ʼಪೂಚಂತೇʼಯ ಪ್ರಸ್ತುತತೆ ಸಾರುವ ʼಡೇರ್‌‌ಡೆವಿಲ್ ಮುಸ್ತಾಫಾʼ

ನವನೀತ್‌ ಶ್ಯಾಮ್‌ ಈ ಚಿತ್ರಕ್ಕೆ ಹಿನ್ನೆಲೆ ಸಂಗೀತ ನೀಡಿದ್ದು, ತೇಜಸ್ವಿ ಅವರ ಅಭಿಮಾನಿಗಳಿಂದಲೇ ತಯಾರಾಗಿರುವ ಚಿತ್ರಕ್ಕೆ ನಟ, ಸಾಹಿತ್ಯಾಸಕ್ತ ಡಾಲಿ ಧನಂಜಯ್ ಬೆಂಬಲವಾಗಿ ನಿಂತಿದ್ದಾರೆ. ತಮ್ಮ ಒಡೆತನದ ಡಾಲಿ ಪಿಕ್ಚರ್ಸ್‌ ಮೂಲಕ ಈ ಚಿತ್ರವನ್ನು ಪ್ರಸ್ತುತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...