ನ್ಯಾಯಾಂಗ ನಿಂದನೆ ಪ್ರಕರಣ : ಬೇಷರತ್‌ ಕ್ಷಮೆ ಯಾಚಿಸಿದ ವಿವೇಕ್‌ ಅಗ್ನಿಹೋತ್ರಿ

Date:

ನ್ಯಾಯಮೂರ್ತಿ ಎಸ್‌ ಮುರಳಿಧರ್‌ ಕುರಿತು ಟ್ವೀಟ್‌ ಮಾಡಿದ್ದ ವಿವೇಕ್‌

ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ದೆಹಲಿ ಹೈಕೋರ್ಟ್‌

ನ್ಯಾಯಾಂಗ ನಿಂದನೆಯ ಆರೋಪ ಎದುರಿಸುತ್ತಿದ್ದ ವಿವಾದಾತ್ಮಕ ಕಾಶ್ಮೀರ್‌ ಫೈಲ್ಸ್‌ ಚಿತ್ರದ ನಿರ್ದೇಶಕ ವಿವೇಕ್‌ ಅಗ್ನಿಹೋತ್ರಿ, ಸೋಮವಾರ ದೆಹಲಿ ಹೈಕೋರ್ಟ್‌ಗೆ ಹಾಜರಾಗಿ ಬೇಷರತ್‌ ಕ್ಷಮೆ ಯಾಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭೀಮಾ ಕೋರೆಗಾಂವ್‌ ಪ್ರಕರಣಕ್ಕೆ ಸಂಬಂಧಿಸಿ ಗೃಹಬಂಧನಕ್ಕೊಳಗಾಗಿದ್ದ ಸಾಮಾಜಿಕ ಹೋರಾಟಗಾರ ಗೌತಮ್‌ ನವಲಖ ಅವರನ್ನು ಬಿಡುಗಡೆ ಮಾಡುವಂತೆ 2018ರಲ್ಲಿ ದೆಹಲಿ ಹೈಕೋರ್ಟ್‌ ಆದೇಶ ನೀಡಿತ್ತು. ಈ ತೀರ್ಪು ಪ್ರಕಟಿಸಿದ್ದ ದೆಹಲಿ ಹೈಕೋರ್ಟ್‌ನ ಅಂದಿನ ನ್ಯಾಯಮೂರ್ತಿ ಎಸ್‌ ಮುರಳಿಧರ್‌ ಅವರು ಪಕ್ಷಪಾತಿಯಾಗಿ ನಡೆದುಕೊಂಡಿದ್ದಾರೆ ಎಂದು ವಿವೇಕ್‌ ಅಗ್ನಿಹೋತ್ರಿ ಮತ್ತು ಕೆಲವರು ಟ್ವೀಟ್‌ ಮಾಡಿದ್ದರು.

ಇದಾದ ಬೆನ್ನಲ್ಲೇ ದೆಹಲಿ ಹೈಕೋರ್ಟ್‌, ವಿವೇಕ್‌ ಸೇರಿದಂತೆ 6 ಜನಗಳ ಮೇಲೆ ಸ್ವಯಂ ಪ್ರೇರಿತ ಕ್ರಿಮಿನಲ್‌ ಪ್ರಕರಣವನ್ನು ದಾಖಲಿಸಿಕೊಂಡಿತ್ತು. ಸೋಮವಾರ ನಡೆದ ವಿಚಾರಣೆಗೆ ಖುದ್ದು ಹಾಜರಾಗಿದ್ದ ವಿವೇಕ್‌, ತಮ್ಮ ಟ್ವೀಟ್‌ ಕುರಿತು ವಿಷಾದ ವ್ಯಕ್ತ ಪಡಿಸಿ, ಬೇಷರತ್‌ ಕ್ಷಮೆ ಯಾಚಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸುದೀಪ್, ಪ್ರಶ್ನೆ ಎದುರಿಸಲು ಸಜ್ಜಾಗಿ ಎಂದ ಪ್ರಕಾಶ್ ರಾಜ್

ನಿರ್ದೇಶಕನ ಕ್ಷಮಾಪಣಾ ಪತ್ರವನ್ನು ಸ್ವೀಕರಿಸಿರುವ ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ಸಿದ್ಧಾರ್ಥ್‌ ಮೃದುಲ್‌ ಮತ್ತು ವಿಕಾಸ್‌ ಮಹಾಜನ್‌, ಮುಂದಿನ ದಿನಗಳಲ್ಲಿ ಜಾಗರೂಕತೆಯಿಂದ ವರ್ತಿಸುವಂತೆ ಎಚ್ಚರಿಕೆ ನೀಡಿದ್ದು, ಪ್ರಕರಣದಿಂದ ಖುಲಾಸೆಗಳಿಸಿದೆ. ಪ್ರಕರಣದ ಮತ್ತೊಬ್ಬ ಆರೋಪಿ ಆನಂದ್‌ ರಂಗನಾಥನ್‌ ಅವರಿಗೂ ಕ್ಷಮೆ ಯಾಚಿಸುವಂತೆ ತಿಳಿಸಿದೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...