ಪುರುಷ, ಮಹಿಳಾ ಕಲಾವಿದರಿಗೆ ನೀಡುವ ಸಂಭಾವನೆಯಲ್ಲಿನ ತಾರತಮ್ಯ ನಿಲ್ಲಬೇಕು: ನಟಿ ರಮ್ಯಾ

Date:

ಚಿತ್ರರಂಗದಲ್ಲಿ ಮಹಿಳಾ ಮತ್ತು ಪುರುಷ ಕಲಾವದರಿಗೆ ನೀಡಲಾಗುವ ಸಂಭಾವನೆ ವಿಚಾರದಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಈ ತಾರತಮ್ಯ ನಿಲ್ಲಬೇಕು ಎಂದು ಕನ್ನಡ ಸಿನಿಮಾ ನಟಿ ರಮ್ಯಾ ಸ್ಪಂದನ ಹೇಳಿದರು.

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಗುರುವಾರ ನಡೆದ ‘ಮಹಿಳೆ ಹಾಗೂ ಸಿನಿಮಾ’ ಎಂಬ ಗೋಷ್ಠಿಯಲ್ಲಿ ನಟಿ ರಮ್ಯಾ ಮಾತನಾಡಿದರು. ನಿರ್ದೇಶಕಿಯರಾದ ಪ್ರೀತಾ ಜಯರಾಮ್, ನಂದಿನಿ ರೆಡ್ಡಿ ಕೂಡಾ ಕೂಡಾ ತಮ್ಮ ವಿಚಾರಗಳನ್ನು ಮಂಡಿಸಿದರು.

ಇದನ್ನು ಓದಿದ್ದೀರಾ? ರಮ್ಯಾ ಮಾನಹಾನಿ | ಸುವರ್ಣ ನ್ಯೂಸ್ , ವಿಶ್ವೇಶ್ವರ್‌ ಭಟ್‌ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಂದು ಸಿನಿಮಾ ಯಶಸ್ಸಾದರೆ ಆ ಸಿನಿಮಾದ ನಾಯಕರು ತಮ್ಮ ಮುಂದಿನ ಸಿನಿಮಾದಲ್ಲಿ ಶೇಕಡ 50ರಷ್ಟು ಸಂಭಾವನೆಯನ್ನು ಹೆಚ್ಚಿಸಿಕೊಳ್ಳುತ್ತಾರೆ. ಆದರೆ ಮಹಿಳಾ ಕಲಾವಿದರಿಗೆ ಶೇಕಡ 5ರಷ್ಟು ಸಂಭಾವನೆ ಹೆಚ್ಚಳ ಮಾತ್ರ ನೀಡಲಾಗುತ್ತದೆ. ಕೆಲವೊಮ್ಮೆ ಅಷ್ಟು ಹೆಚ್ಚಳವನ್ನು ಕೂಡಾ ಮಾಡಲಾಗುವುದಿಲ್ಲ” ಎಂದು ರಮ್ಯಾ ಬೇಸರ ವ್ಯಕ್ತಪಡಿಸಿದರು.

“ನಾವು ಕೂಡಾ ಸಿನಿಮಾದಲ್ಲಿ ನಟರಷ್ಟೇ ಕೆಲಸವನ್ನು ಮಾಡುತ್ತೇವೆ. ಆದರೆ ನಮಗೆ ಸಂಭಾವನೆ ಹೆಚ್ಚಿಸಲಾಗುವುದಿಲ್ಲ. ಈ ತಾರತಮ್ಯ ನಿಲ್ಲಬೇಕು. ನಟರಿಗೆ ಹೆಚ್ಚು ಸಂಭಾವನೆ, ನಟಿಯರಿಗೆ ಕಡಿಮೆ ಸಂಭಾವನೆ ಯಾಕೆ” ಎಂದು ನಟಿ ಪ್ರಶ್ನಿಸಿದರು.

“ಕನ್ನಡ ಚಿತ್ರರಂಗದಲ್ಲಿ ಮಹಿಳೆಯರ ಸಮಸ್ಯೆಗಳ ಬಗ್ಗೆ ಹೇಳಬೇಕಾದ ಹಲವು ಕತೆಗಳಿವೆ. ಆದರೆ ಯಾರೂ ಕೂಡ ಈ ಸಮಸ್ಯೆಗಳ ಮಾತನಾಡುವ, ಹೇಳುವ ಧೈರ್ಯ ಮಾಡುತ್ತಿಲ್ಲ. ಮಹಿಳಾ ಪ್ರಧಾನ ಸಿನಿಮಾ ಎಂದರೆ ಮಹಿಳೆಯರು ಪೊಲೀಸರಾಗಿ ರೌಡಿಗಳಿಗೆ ಹೊಡೆಯುವುದಷ್ಟೇ ಇರುತ್ತದೆ. ಆದರೆ ಅದಕಷ್ಟೇ ಸೀಮಿತವಲ್ಲ. ಮಹಿಳಾ ಪ್ರಧಾನವಾದ ಹಲವು ಕಥೆಗಳಿವೆ” ಎಂದು ರಮ್ಯಾ ಅಭಿಪ್ರಾಯಿಸಿದರು.

ಇದನ್ನು ಓದಿದ್ದೀರಾ? ಸಿಇಟಿ ಪರೀಕ್ಷೆ ಎಡವಟ್ಟು | ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಲೆದಂಡ

“ಕನ್ನಡದಲ್ಲಿ ಮಹಿಳಾ ಪ್ರಧಾನ, ಮಹಿಳಾ ಕೇಂದ್ರಿತ ಸಿನಿಮಾಗಳು ಕಡಿಮೆಯಾಗುತ್ತಿವೆ. ಆದರೆ ಮಲಯಾಳ ಸಿನಿಮಾಗಳು ಮಹಿಳಾ ಪ್ರಧಾನ ಸಿನಿಮಾಗಳನ್ನು ಹೆಚ್ಚಿಸುತ್ತಿದೆ. ಜನರು ನಾಯಕನನ್ನು ನೋಡಲೆಂದೇ ಸಿನಿಮಾ ವೀಕ್ಷಿಸುತ್ತಾರೆ ಎಂಬ ಮನಸ್ಥಿತಿಯನ್ನು ನಾವು ಮೊದಲು ಬಿಡಬೇಕು” ಎಂದರು.

ಇನ್ನು ಈ ಸಂದರ್ಭದಲ್ಲೇ ತಾನು ಚಿತ್ರರಂಗಕ್ಕೆ ಮರಳುವ ಬಗ್ಗೆ ಮಾತನಾಡಿದರು. “ನನ್ನ ಪಾತ್ರ ಮುಖ್ಯ ಎನಿಸುವಂತಹ ಕಥೆಗಳು ಬಂದರೆ ಖಂಡಿತವಾಗಿಯೂ ನಾನು ಚಿತ್ರರಂಗಕ್ಕೆ ಮರುಳುತ್ತೇನೆ. ನಮ್ಮ ನಿರ್ಮಾಣ ಸಂಸ್ಥೆಯಿಂದ ಸದ್ಯ ನಾಲ್ಕು ಸಿನಿಮಾಗಳ ನಿರ್ಮಾಣ ಮಾಡಲಾಗುವುದು. ಈ ಪೈಕಿ ಒಂದು ಸಿನಿಮಾದಲ್ಲಿ ನಾನು ನಟಿಸುವ ಸಾಧ್ಯತೆಯಿದೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಸೆರಗ ಸರ್ಸೆʼ ಚೀಪ್‌ ಗಿಮಿಕ್‌ನ ಭಾಗ- ಕಂಗನಾ ಗುಡುಗು, ಅರ್ಮಾನ್‌ ಅಸಹನೆ

ಪ್ರೇಮ್‌ ನಿರ್ದೇಶನದ ಕೆಡಿ ದ ಡೆವಿಲ್‌ ಸಿನಿಮಾದ ವಿವಾದಿತ ಹಾಡು ʼಸೆರಗ...

ಕನ್ನಡಿಗರು ಕೇಂದ್ರದ ಮುಂದೆ ಭಿಕ್ಷೆಗೆ ನಿಂತಿಲ್ಲ: ಹೀಗಂದಿದ್ಯಾಕೆ ಸಿಎಂ?

ಮೈಸೂರು, ಬೆಂಗಳೂರು ಹಾಗೂ ಹುಬ್ಬಳಿಯಲ್ಲಿ ನಡೆಯಬೇಕಿದ್ದ ರೈಲ್ವೆ ಇಲಾಖೆ ಮುಂಬಡ್ತಿ ಪರೀಕ್ಷೆಗಳನ್ನು...

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...