ಖುಷ್ಬು ವಿರುದ್ಧ ‘ಹಳೆಯ ಪಾತ್ರೆ’ ಹೇಳಿಕೆ; ಡಿಎಂಕೆ ವಕ್ತಾರ ಉಚ್ಚಾಟನೆ

Date:

ನಟಿ ಹಾಗೂ ರಾಜಕಾರಣಿ ಖುಷ್ಬು ಸುಂದರ್‌ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡಿನ ಡಿಎಂಕೆ ವಕ್ತಾರ ಶಿವಾಜಿ ಕೃಷ್ಣಮೂರ್ತಿ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.

ಈ ಬಗ್ಗೆ ಹೇಳಿಕೆ ಪ್ರಕಟಿಸಿರುವ ಡಿಎಂಕೆ ಪ್ರಧಾನ ಕಾರ್ಯದರ್ಶಿ ದೊರೈ ಮುರುಗನ್‌, “ಪಕ್ಷದ ಶಿಸ್ತು ಉಲ್ಲಂಘಿಸಿ ಅಪಕೀರ್ತಿ ತಂದಿರುವ ಶಿವಾಜಿ ಕೃಷ್ಣಮೂರ್ತಿ ಅವರನ್ನು ಪ್ರಥಾಮಿಕ ಸದಸ್ಯತ್ವ ಸೇರಿದಂತೆ ಪಕ್ಷದ ಎಲ್ಲ ಹುದ್ದೆಗಳಿಂದ ವಜಾ ಮಾಡಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಇತ್ತೀಚಿಗಷ್ಟೆ ಕೃಷ್ಣಮೂರ್ತಿ ಅವರು ತಮ್ಮ ಸಾರ್ವಜನಿಕ ಭಾಷಣವೊಂದರಲ್ಲಿ ಖುಷ್ಬು ಅವರನ್ನು ‘ಹಳೆಯ ಪಾತ್ರೆ’ ಎಂದು ಹೀಯಾಳಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉತ್ತರ ಪ್ರದೇಶ | ಕಳ್ಳನೆಂದು ಮುಸ್ಲಿಂ ಯುವಕನನ್ನು ಮರಕ್ಕೆ ಕಟ್ಟಿ ʼಜೈ ಶ್ರೀರಾಮ್ʼ ಹೇಳುವಂತೆ ಹಲ್ಲೆ

ಕೃಷ್ಣಮೂರ್ತಿ ಅವರ ಹೇಳಿಕೆಯ ಬಗ್ಗೆ ಟ್ವೀಟ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದ ಖುಷ್ಬು ಅವರು, “ಈ ರೀತಿಯ ಹೇಳಿಕೆಗಳು ಡಿಎಂಕೆ ನಾಯಕರ ರಾಜಕೀಯ ಸಂಸ್ಕೃತಿಯನ್ನು ತೋರಿಸುತ್ತವೆ. ಈ ರೀತಿ ಮಾತನಾಡುವವರು ಆ ಪಕ್ಷದಲ್ಲಿ ಅನೇಕರಿದ್ದಾರೆ. ಮಹಿಳೆಯರನ್ನು ನಿಂದಿಸುವುದು, ಅವರ ಬಗ್ಗೆ ಅಶ್ಲೀಲವಾದ ಅಗ್ಗದ ಮಾತುಗಳನ್ನುಆಡುವುದರಿಂದ ಅವರಿಗೆ ಉತ್ತಮ ಸ್ಥಾನಮಾನಗಳು ಸಿಗಬಹುದು. ಮುಖ್ಯಮಂತ್ರಿ ಸ್ಟಾಲಿನ್‌ ಅವರೇ ನಿಮ್ಮ ಕುಟುಂಬದ ಮಹಿಳೆಯರ ಬಗ್ಗೆ ಇಂತಹ ಹೇಳಿಕೆಗಳನ್ನು ನೀವು ಸ್ವೀಕರಿಸುತ್ತೀರಾ?” ಎಂದು ಪ್ರಶ್ನಿಸಿದ್ದರು.

“ನಿಮ್ಮ ಕಾರ್ಯಕರ್ತರು ಕಲ್ಲು ತೂರಾಟ ಮಾಡುತ್ತಾರೆ ಮತ್ತು ವಿನಾಶವನ್ನು ಸೃಷ್ಟಿಸುತ್ತಾರೆ. ನಿಮಗೆ ಅರ್ಥವಾಗದ ಸಂಗತಿಯೆಂದರೆ, ಅವರು ನನ್ನನ್ನು ಮಾತ್ರವಲ್ಲ, ನಿಮ್ಮನ್ನು ಮತ್ತು ನಿಮ್ಮ ತಂದೆಯಂತಹ ಮಹಾನ್ ನಾಯಕನನ್ನು ಅವಮಾನಿಸುತ್ತಾರೆ. ಆದರೂ ಇಂತಹವರಿಗೆ ಹೆಚ್ಚು ಸ್ಥಾನಮಾನಗಳನ್ನು ನೀಡುತ್ತೀರಿ. ನಿಮ್ಮ ಪಕ್ಷ ಅಸಭ್ಯ ಗೂಂಡಾಗಿರಿಗೆ ಸುರಕ್ಷಿತ ತಾಣವಾಗುತ್ತಿದೆ. ಇದು ನಾಚಿಕೆಗೇಡಿನ ಸಂಗತಿ” ಎಂದು  ಆಕ್ರೋಶ ಹೊರಹಾಕಿದ್ದರು.

ಶಿವಾಜಿ ಕೃಷ್ಣಮೂರ್ತಿ ಕೆಲವು ದಿನಗಳ ಹಿಂದಷ್ಟೆ ರಾಜ್ಯಪಾಲರ ಬಗ್ಗೆ ವಿವಾದಾತ್ಮಕವಾಗಿ ಮಾತನಾಡಿದ್ದರು. ಆಗ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿತ್ತು. ಅವರು ಕ್ಷಮೆಯಾಚಿಸಿದ ನಂತರ ಅಮಾನತನ್ನು ಹಿಂಪಡೆಯಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...