ಡಾಲಿ ಮದುವೆ: ದರ್ಶನ್‌ಗೆ ಇಲ್ವಾ ಆಹ್ವಾನ? ಧನಂಜಯ್ ಹೇಳಿದ್ದೇನು?

Date:

ಬಡವರ ಮಗನಾಗಿ ಬೆಳೆದ ನಟ ಡಾಲಿ ಧನಂಜಯ್ ಅದ್ದೂರಿ ಮದುವೆಗೆ ಸಜ್ಜಾಗುತ್ತಿದ್ದಾರೆ. ಕಳೆದ ಎರಡು ತಿಂಗಳುಗಳಿಂದ ರಾಜಕೀಯ ಮತ್ತು ಸಿನಿಮಾ ರಂಗದ ನಾಯಕರು, ಪ್ರಮುಖರನ್ನು ಆಹ್ವಾನಿಸುವುದರಲ್ಲಿ ‘ಬ್ಯುಸಿ’ ಆಗಿದ್ದಾರೆ. ಆದರೆ, ಈವರೆಗೆ ನಟ ದರ್ಶನ್‌ ಅವರಿಗೆ ಧನಂಜಯ್ ಆಹ್ವಾನ ಪತ್ರಿಕೆ ನೀಡಿಲ್ಲ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ದರ್ಶನ್‌ ಅವರನ್ನು ಆಹ್ವಾನಿಸಲು ಧನಂಜಯ್ ಹಿಂದೇಟು ಹಾಕುತ್ತಿದ್ದಾರೆಯೇ ಎಂಬ ಚರ್ಚೆಗಳು ನಡೆಯುತ್ತಿವೆ. ಇದಕ್ಕೆ ಸ್ವತಃ ಧನಂಜಯ್ ಸ್ಪಷ್ಟನೆ ನೀಡಿದ್ದಾರೆ.

ಬುಧವಾರ ಪತ್ರಿಕಾಗೋಷ್ಠಿ ನಡೆಸಿರುವ ಧನಂಜಯ್ ತಮ್ಮನ್ನು ವಿವಾಹವಾಗುತ್ತಿರುವ ಧನ್ಯತಾ ಅವರನ್ನು ಪರಿಚಯಿಸಿಕೊಟ್ಟಿದ್ದಾರೆ. ಈ ವೇಳೆ, ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿರುವ ಧನಂಜಯ್, “ಎಲ್ಲರನ್ನು ಮದುವೆ ಕರೆಯುತ್ತಿದ್ದೇನೆ. ದರ್ಶನ್ ಅವರನ್ನೂ ಭೇಟಿ ಮಾಡಿ, ಕರೆಯಲು ಪ್ರಯತ್ನ ಮಾಡುತ್ತಿದ್ದೇಎ. ಆದರೆ, ಅವರನ್ನು ರೀಚ್ ಮಾಡಲು ಸಾಧ್ಯವಾಗುತ್ತಿಲ್ಲ” ಎಂದು ಹೇಳಿದ್ದಾರೆ.

ಅಂದಹಾಗೆ, ರೇಣುಕಾಸ್ವಾಮಿ ಕೊಲೆಯನ್ನು ಖಂಡಿಸಿದ್ದ ಚಿತ್ರರಂಗ ಪ್ರಮುಖರಲ್ಲಿ ಡಾಲಿ ಧನಂಜಯ್ ಕೂಡ ಒಬ್ಬರು. ದರ್ಶನ್ ಜೈಲು ಸೇರಿದ್ದ ಸಮಯದಲ್ಲಿ ಪ್ರತಿಕ್ರಿಯಿಸಿದ್ದ ಧನಂಜಯ್, “ಕೊಲೆ ಪ್ರಕರಣದ ಬಗ್ಗೆ ಏನು ಮಾತನಾಡುವುದು? ಅಲ್ಲೊಂದು ಜೀವ ಹೋಗಿದೆ. ಒಂದು ತಪ್ಪು ನಡೆದಿದೆ. ರೇಣುಕಾಸ್ವಾಮಿ ತಂದೆ ತಾಯಿ, ಪತ್ನಿಯ ಮುಖ ನೋಡಿದಾಗ ಖಂಡಿತಾ ಬೇಜಾರಾಗುತ್ತದೆ. ಕಾನೂನಿಗಿಂತ ಯಾರೂ ದೊಡ್ಡವರಿಲ್ಲ. ದರ್ಶನ್ ಸಹೋದರನಾಗಿ ಹೇಳುತ್ತಿದ್ದೇನೆ, ಅವರಿಂದ ತಪ್ಪಾಗಿದ್ದರೆ ಶಿಕ್ಷೆಯಾಗಲಿ” ಎಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೀಗಾಗಿ, ಧನಂಜಯ್ ಅವರ ಹಿಂದಿನ ಹೇಳಿಕೆಯನ್ನು ಈಗ ತಳುಕು ಹಾಕಿಕೊಂಡು ಧನಂಜಯ್ ಅವರು ಉದ್ದೇಶಪೂರ್ವಕವಾಗಿಯೇ ತಮ್ಮ ವಿವಾಹಕ್ಕೆ ದರ್ಶನ್‌ ಅವರನ್ನು ಆಹ್ವಾನಿಸಿಲ್ಲ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ ಆದರೆ, ದರ್ಶನ್ ಅವರನ್ನು ಆಹ್ವಾನಿಸುವ ಪ್ರಯತ್ನ ಮಾಡಿದ್ದೇನೆ ಎಂದು ಧನಂಜಯ್ ಹೇಳಿದ್ದಾರೆ.

ಫೆಬ್ರವರಿ 16ರಂದು ಡಾಲಿ ಧನಂಜಯ್ ಮತ್ತು ಧನ್ಯತಾ ಅವರ ವಿವಾಹ ಮೈಸೂರಿನಲ್ಲಿ ನಡೆಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...