ಬ್ಯಾನರ್ ಕಟ್ಟಬೇಡಿ: ಸಾವನ್ನಪ್ಪಿದ ಅಭಿಮಾನಿಗಳ ಕುಟುಂಬ ಸದಸ್ಯರನ್ನು ಸಂತೈಸಿದ ನಟ ಯಶ್

Date:

“ಯಾರೂ ದಯವಿಟ್ಟು ಇನ್ನು ಮುಂದೆ ಬ್ಯಾನರ್ ಕಟ್ಟಬೇಡಿ. ನನಗೆ ನನ್ನ ಹುಟ್ಟುಹಬ್ಬದ ದಿನ ಬಂತೆಂದರೆ ಭಯ ಶುರುವಾಗಿಬಿಟ್ಟಿದೆ” ಎಂದು ಕನ್ನಡದ ಸ್ಟಾರ್ ನಟ ಯಶ್ ಅವರು ತಿಳಿಸಿದ್ದಾರೆ.

ಯಶ್ ಅವರ ಹುಟ್ಟುಹಬ್ಬದ ಪ್ರಯುಕ್ತ ಕಟೌಟ್​​​​​ ಕಟ್ಟುವಾಗ ವಿದ್ಯುತ್ ಸ್ಪರ್ಶಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಗದಗ ಜಿಲ್ಲೆಯ ಸೂರಣಗಿಯ ಹನಮಂತು, ನವೀನ್ ಮತ್ತು ಮುರಳಿಯವರ ಕುಟುಂಬಗಳನ್ನು ಭೇಟಿಯಾಗಿ, ಸಾಂತ್ವನ ನೀಡಿದರು.

ಆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಯಶ್, “ಯಾವುದೇ ಕಾರಣಕ್ಕೂ ನಾನು ಈ ಥರದ ಅಭಿಮಾನಿ ವ್ಯಕ್ತಪಡಿಸಿ ಎಂದು ಬಯಸುವವಲ್ಲ. ಪ್ರತಿವರ್ಷ ನನ್ನ ಹುಟ್ಟಿದ ದಿನ ಬಂದಾಗ ಈಥರ ಘಟನೆ ನಡೆದಾಗ, ನನಗೆ ಬರ್ತ್‌ಡೇ ಅಂದರೇನೇ ಒಂಥರಾ ಭಯ ಬಂದುಬಿಟ್ಟಿದೆ. ನಿಜ ಹೇಳಬೇಕೆಂದರೆ ನನಗೇನೇ ಅಸಹ್ಯ ಆಗಿಬಿಟ್ಟಿದೆ. ಅಭಿಮಾನಿಗಳು ಎಲ್ಲಿದ್ದಾರೋ ಅಲ್ಲಿಂದಲೇ ನಮಗೆ ಹರಸಿದರೆ ಸಾಕು, ಅದುವೇ ನಿಜವಾದ ಬರ್ತ್‌ಡೇ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಯಶ್ ಅಭಿಮಾನಿಗಳ ದುರಂತ ಸಾವು | ಮೃತರ ಕುಟುಂಬಸ್ಥರಿಗೆ 2 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ

“ಈ ವರ್ಷ ಬರ್ತ್‌ಡೇ ಮಾಡದಿರುವುದಕ್ಕೆ ಕಾರಣಾನೇ ಮಾಧ್ಯಮಗಳು. ಯಾಕೆಂದರೆ ಕಳೆದ 10-15ದಿನಗಳ ಹಿಂದೆಯೇ ಶುರುವಿಟ್ಟುಕೊಂಡಿದ್ದಕ್ಕೆ ಯಾರಿಗೂ ನನ್ನ ಬರ್ತ್‌ಡೇಯಿಂದ ಯಾರಿಗೂ ತೊಂದರೆಯಾಗದಿರಲಿ ಎಂಬುವುದೇ ನನ್ನ ಉದ್ದೇಶ” ಎಂದು ಯಶ್ ಸ್ಪಷ್ಟಪಡಿಸಿದರು.

“ದುಡ್ಡು ಸಹಾಯ ಯಾರೂ ಬೇಕಾದರೂ ಮಾಡಬಹುದು. ಮನೆಗೆ ಮಗ ಬರುತ್ತಾನಾ?” ಎಂದು ಕೇಳಿದ ನಟ, “ಮನೆಯಲ್ಲಿ ಮಕ್ಕಳನ್ನು ಕಳಕೊಂಡವರು ಏನ್ ಹೇಳಕ್ಕೆ ಸಾಧ್ಯ. ಅಭಿಮಾನ ತೋರಿಸುವುದಾದರೆ ನಿಮ್ಮ ಬದುಕಲ್ಲಿ ಖುಷಿಯಾಗಿರಿ. ನಮ್ಮ ಬಗ್ಗೆ ಯೋಚನೆ ಮಾಡಬೇಡಿ. ನೀವು ಖುಷಿಯಾಗಿರಿ, ನಿಮಗೆ ಕೈ ಮುಗಿದು ಕೇಳಿಕೊಳ್ಳುತ್ತೇನೆ. ಇದೆಲ್ಲಾ ಬಿಟ್ಟುಬಿಡಿ ಎಂದು ಯಶ್‌ ಹೇಳಿದರು.

yash in gadag

“ಈಗ ನಾನು ಬರುವಾಗಲೂ ಬೈಕ್​ನಲ್ಲಿ ಚೇಸ್ ಮಾಡ್ತಿದ್ರು, ಇದು ನಿಜಕ್ಕೂ ಬೇಜಾರಾಗುತ್ತೆ. ಕಟೌಟ್ ಕಟ್ಟಬೇಡಿ ಅಂದ್ರೆ ಬೇಜಾರು ಮಾಡಿಕೊಳ್ತೀರಿ. ಈ ರೀತಿ ಆದಾಗ ನಮ್ಮ ಮನಸ್ಸಿಗೆ ನೋವಾಗುತ್ತದೆ” ಎಂದು ಕೆಜಿಎಫ್ ನಟ ಬೇಸರ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...