ವರದಕ್ಷಿಣೆ ಕಿರುಕುಳ ಆರೋಪ | ನಿರ್ದೇಶಕ ಎಸ್.ನಾರಾಯಣ್, ಪತ್ನಿ , ಪುತ್ರನ ವಿರುದ್ಧ ಎಫ್‌ಐಆರ್

Date:

ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಖ್ಯಾತ ಚಿತ್ರ ನಿರ್ದೇಶಕ ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಎಸ್.ನಾರಾಯಣ್ ಅವರ ಎರಡನೇ ಮಗನ ಪತ್ನಿ ಪವಿತ್ರಾ ದೂರು ದಾಖಲಿಸಿದ್ದಾರೆ. ದೂರಿನನ್ವಯ ಎಸ್.ನಾರಾಯಣ್, ಪತ್ನಿ ಭಾಗ್ಯಲಕ್ಷ್ಮಿ ಹಾಗೂ ಪತಿ ಪವನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮದುವೆಯಲ್ಲಿ ವರದಕ್ಷಿಣೆ ಕೊಟ್ಟಿದ್ದರೂ ಹೆಚ್ಚಿನ ಹಣಕ್ಕೆ ಒತ್ತಾಯ ಮಾಡುತ್ತಿದ್ದಾರೆ. ಹಲ್ಲೆ ನಡೆಸಿ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಲ್ಲ ಹೆಣ್ಮಕ್ಕಳು ಮಾಡೋದು ಇದನ್ನೇ!

ಒಂದು ವರ್ಷದ ಹಿಂದೆ ಸೊಸೆ ಮನೆ ಬಿಟ್ಟು ಹೋಗಿದ್ದಾರೆ. ಈಗ ವರದಕ್ಷಿಣೆ ಕಿರುಕುಳ ಅಂತ ದೂರು ಕೊಟ್ಟಿದ್ದಾರೆ. ರೆಗ್ಯೂಲರ್‌ ಆಗಿ ನಮ್ಮ ದೇಶದಲ್ಲಿ ಎಲ್ಲ ಹೆಣ್ಮಕ್ಕಳು ಮಾಡೋದು ಅದೊಂದೇ ತಾನೆ ಎಂದ‌ ನಿರ್ದೇಶಕ ಎಸ್‌. ನಾರಾಯಣ್‌ ಹಗುರವಾಗಿ ಮಾತನಾಡಿದ್ದಾರೆ.

ತಮ್ಮ ಮೇಲೆ ಬಂದಿರುವ ಆರೋಪವನ್ನು ತಳ್ಳಿ ಹಾಕಿರುವ ನಾರಾಯಣ್‌, “ಪವಿತ್ರಾ ಮನೆ ಬಿಟ್ಟು ಹೋಗಿ 14 ತಿಂಗಳಾಗಿವೆ. ಮದುವೆ ಆಗಿ ಒಂದು ತಿಂಗಳು ಮಾತುಕತೆ ಸಹ ಇರಲಿಲ್ಲ. ಮನೆ ಬಿಟ್ಟು ಹೋದ ಕೂಡಲೇ ಹೋಗಿ ಕಂಪ್ಲೆಂಟ್ ಕೊಡಬಹುದಿತ್ತಲ್ಲ. ಯಾಕೆ ಇಷ್ಟು ತಡ ಮಾಡಿದ್ದು, ವರದಕ್ಷಿಣೆ ಪಿಡುಗು ತೊಲಗಬೇಕು ಎಂದು ಸಿನಿಮಾ ಮಾಡಿದವನು ನಾನು, ಆದರೆ ಈಗ ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದೆ. ವರದಕ್ಷಿಣೆ ಕೇಸು ಎನ್ನುವುದನ್ನು ಕೆಲ ಮಹಿಳೆಯರು ಅಸ್ತ್ರವಾಗಿ ಬಳಸುತ್ತಿದ್ದಾರೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...