ಪ್ರಕಾಶ್ ರಾಜ್ ಬಿಜೆಪಿ ಸೇರ್ಪಡೆ ವದಂತಿ: ಬಹುಭಾಷಾ ನಟ ಹೇಳಿದ್ದೇನು?

Date:

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜಕೀಯ ಮುಖಂಡರು ಆ ಪಕ್ಷದಿಂದ ಈ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಲೇ ಇದೆ. ಈ ನಡುವೆ ಕಾಂಗ್ರೆಸ್‌ನಲ್ಲಿದ್ದುಕೊಂಡು ಎಲ್ಲ ಅಧಿಕಾರಗಳನ್ನು ಅನುಭವಿಸಿದವರೂ ಕೂಡ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ, ಕೆಲವೇ ಗಂಟೆಗಳಲ್ಲಿ ಬಿಜೆಪಿ ಸೇರುವ ಮೂಲಕ ಸುದ್ದಿಯಾಗುತ್ತಿದ್ದಾರೆ.

24 ಗಂಟೆಗಳ ಹಿಂದೆ ಪ್ರಧಾನಿ ಮೋದಿಯವರ ಆಡಳಿತವನ್ನು ಟೀಕಿಸುತ್ತಿದ್ದವರು, ರಾಹುಲ್ ಗಾಂಧಿಗೆ ಬೆಂಬಲ ಸೂಚಿಸುತ್ತಿದ್ದವರು ದಿನ ಬೆಳಗಾಗುವುದರೊಳಗೆ ಕಾಂಗ್ರೆಸ್‌ ಬಿಟ್ಟು, ಬಿಜೆಪಿ ಸೇರುತ್ತಿದ್ದಾರೆ. ಕಳೆದ ಎರಡು ದಿನಗಳಲ್ಲಿ ಅದಕ್ಕೆ ಪೂರಕ ಎಂಬಂತಹ ಘಟನೆಗಳು ಕೂಡ ನಡೆಯುತ್ತಿದೆ.

ಬಾಕ್ಸರ್ ವಿಜೇಂದರ್ ಸಿಂಗ್ ಹಾಗೂ ಕಾಂಗ್ರೆಸ್‌ನ ರಾಷ್ಟ್ರೀಯ ವಕ್ತಾರ ಗೌರವ್ ವಲ್ಲಭ್ ಅವರು ಬಿಜೆಪಿ ಸೇರಿರುವುದು ಈಗ ಬಹಳಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ. ಈ ನಡುವೆ ಪ್ರಧಾನಿ ಮೋದಿಯವರ ಆಡಳಿತ ವೈಫಲ್ಯಗಳ ಬಗ್ಗೆ ಬಹಳ ಕಟುವಾಗಿ ಟೀಕಿಸುತ್ತಿರುವ ಬಹುಭಾಷಾ ನಟ ಪ್ರಕಾಶ್ ರಾಜ್ ಕೂಡ ಬಿಜೆಪಿ ಸೇರುತ್ತಿದ್ದಾರೆ ಎಂಬ ವದಂತಿ ಹರಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶದ ಹಲವು ಮುಖಂಡರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರುತ್ತಿರುವ ಹಿನ್ನೆಲೆಯಲ್ಲಿ ಅದನ್ನು ವ್ಯಂಗ್ಯವಾಡುವ ಉದ್ದೇಶದಿಂದ ‘ಎಕ್ಸ್‌’ ಖಾತೆಯಲ್ಲಿ THE SKIN DOCTOR ಎಂಬ ಬಳಕೆದಾರರೋರ್ವರು, “ದೇಶದ ಖ್ಯಾತ ನಟ ಪ್ರಕಾಶ್ ರಾಜ್ ಅವರು ಇಂದು ಮಧ್ಯಾಹ್ನ 3 ಗಂಟೆಗೆ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಕಾಡ್ಗಿಚ್ಚಿನಂತೆ ವೈರಲಾಗಿದೆ.

ಇದನ್ನು ಓದಿದ್ದೀರಾ? ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ ಗೌರವ್ ವಲ್ಲಭ್ ಬಿಜೆಪಿ ಸೇರ್ಪಡೆ

ಈ ಪೋಸ್ಟ್‌ಗೆ ಹಲವು ಮಂದಿ ಕಮೆಂಟ್ ಮಾಡಿ, “ಇದು ಅಸಾಧ್ಯ. ಆದರೂ ಈಗಿನ ಸಂದರ್ಭದಲ್ಲಿ ಯಾವುದನ್ನೂ ಅಲ್ಲಗಳೆಯುವಂತಿಲ್ಲ. ಯಾಕೆಂದರೆ ಮೋದಿ ಹೇ ತೋ ಮುಮ್ಕಿನ್ ಹೈ” ಎಂದೆಲ್ಲ ತರಹೇವಾರಿ ಕಮೆಂಟ್ ಹಾಕಿದ್ದಾರೆ.

ಈ ವದಂತಿ ಹರಡುತ್ತಿರುವ ಮಧ್ಯೆಯೇ ‘ಎಕ್ಸ್‌’ ಖಾತೆಯಲ್ಲಿ ಪೋಸ್ಟ್ ಹಾಕಿರುವ ಬಹುಭಾಷಾ ನಟ ಪ್ರಕಾಶ್ ರಾಜ್, “ಬಿಜೆಪಿಯವರು ನನ್ನನ್ನು ಖರೀದಿಸುವಷ್ಟು ಸೈದ್ಧಾಂತಿಕವಾಗಿ ಶ್ರೀಮಂತರಲ್ಲ ಎಂದು ಅವರು ಅರಿತುಕೊಂಡಿರಬೇಕು ಎಂದು ನಾನು ಭಾವಿಸುತ್ತೇನೆ. ನೀವು ಏನು ಯೋಚಿಸುತ್ತೀರಿ ಸ್ನೇಹಿತರೇ” ಎಂದು ಹೇಳಿ, ನಗುವಿನ ಇಮೋಜಿಯನ್ನು ಬಳಸಿದ್ದಾರೆ. ಆ ಮೂಲಕ ಬಿಜೆಪಿಯವರಿಗೆ ನನ್ನನ್ನು ಖರೀದಿಸಲು ಸಾಧ್ಯವೇ ಇಲ್ಲ ಎಂದು ಸ್ಪಷ್ಟ ನುಡಿಗಳಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...