ಕನ್ನಡದ ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಹೃದಯಾಘಾತದಿಂದ ನಿಧನ

Date:

ಕನ್ನಡ ಸೇರಿದಂತೆ ಹಲವಾರು ಭಾಷೆಗಳಲ್ಲಿ ನೂರಾರು ಸಿನಿಮಾಗಳಲ್ಲಿ ಸಾಹಸ ನಿರ್ದೇಶಕನಾಗಿ ಕೆಲಸ ಮಾಡಿದ್ದ ಜಾಲಿ ಬಾಸ್ಟಿನ್ (57) ಹೃದಯಾಘಾತದಿಂದ ಡಿಸೆಂಬರ್ 26 (ಮಂಗಳವಾರ) ನಿಧನರಾಗಿದ್ದಾರೆ.

ಬೈಕ್ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದ ಜಾಲಿ ಬಾಸ್ಟಿನ್ ಅವರನ್ನು ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಸಿನಿಮಾ ರಂಗಕ್ಕೆ ಪ್ರವೇಶ ಮಾಡಿಸಿದರು ಎನ್ನಲಾಗಿದೆ. ‘ಪ್ರೇಮಲೋಕ’, ‘ಪುಟ್ನಂಜ’, ‘ಅಣ್ಣಯ್ಯ’, ‘ಶಾಂತಿ ಕ್ರಾಂತಿʼ ಸೇರಿದಂತೆ ಕ್ರೇಜಿಸ್ಟಾರ್ರವಿಚಂದ್ರನ್ಅವರ ಹಲವು ಸಿನಿಮಾಗಳಲ್ಲಿ ಇವರು ಕೆಲಸ ಮಾಡಿದ್ದರು.

ಸಾಹಸ ನಿರ್ದೇಶನ ಹಾಗೂ ಸಾಹಸ ಕಲಾವಿದನಾಗಿ ಕನ್ನಡ ಮಾತ್ರವಲ್ಲದೆ, ತಮಿಳು, ಮಲಯಾಳಂ, ತೆಲುಗು ಹಾಗೂ ಹಿಂದಿ ಸಿನಿಮಾರಂಗದಲ್ಲಿ ಗುರುತಿಸಿಕೊಂಡ ಅವರು ‘ಮಾಸ್ಟರ್ಪೀಸ್’, ʼʼಏಕಾಂಗಿʼ, ʼಸೂಪರ್ರಂಗʼ, ʼಗಾಳಿಪಟʼ, ʼಪಾಪ್ಕಾರ್ನ್ಮಂಕಿ ಟೈಗರ್‌ʼ, ʼಬೆಂಗಳೂರು ಡೇಸ್‌ʼ, ʼಆಪರೇಷನ್ಜೀವʼ, ‘ಅಂಗಮಲಿ ಡೈರೀಸ್’(ಮಲಯಾಳಂ), ʼಅಣ್ಣಯ್ಯʼ, ʼನಕ್ಷತ್ರಂ’(ತೆಲುಗು), ʼದಿ ಬಾಡಿ’(ಹಿಂದಿ), ‘ಇರಿದ’(ತಮಿಳು) ಸೇರಿದಂತೆ 900 ಕ್ಕೂ ಹೆಚ್ಚಿನ ಸಿನಿಮಾಗಳಿಗೆ ಸಾಹಸ ನಿರ್ದೇಶನ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಾಲಿ ಬಾಸ್ಟಿನ್ ಅವರು 1966ರಲ್ಲಿ ಕೇರಳದಲ್ಲಿ ಜನಿಸಿದ್ದರು. ಅವರು ಬೆಳೆದದ್ದು ಬೆಂಗಳೂರಿನಲ್ಲಿ. ಹೀಗಾಗಿ, ಇಲ್ಲಿಯೇ ಶಿಕ್ಷಣವನ್ನು ಪಡೆದರು. ಆರಂಭದಲ್ಲಿ ಬೈಕ್ಮೆಕ್ಯಾನಿಕ್ಆಗಿ ಕೆಲಸ ಮಾಡುತ್ತಿದ್ದಜಾಲಿ ಬಾಸ್ಟಿನ್ಸಿನಿಮಾದಲ್ಲಿ ಬೈಕ್ಸಾಹಸದ ದೃಶ್ಯಗಳನ್ನು ಮಾಡುತ್ತಿದ್ದರು. ರವಿಚಂದ್ರನ್ಅವರ ʼಪ್ರೇಮ ಲೋಕʼ ಸಿನಿಮಾದಲ್ಲಿ ಡ್ಯೂಪ್ಹಾಕಿದ್ದರು. ಸಮಯದಲ್ಲಿ ಅವರಿಗೆ 17 ವರ್ಷ ಆಗಿತ್ತು.

ಈ ಸುದ್ದಿ ಓದಿದ್ದೀರಾ? ಡಿ.26 ರಂದು ಕರ್ನಾಟಕದಲ್ಲಿ 74 ಹೊಸ ಕೋವಿಡ್​ ಕೇಸ್ ಪತ್ತೆ: ಇಬ್ಬರು ಬಲಿ

‘ನಿನಗಾಗಿ ಕಾದಿರುವೆ’ ಚಿತ್ರದ ಮೂಲಕ ನಿರ್ದೇಶಕನ ಕ್ಯಾಪ್ ಧರಿಸಿದ್ದರು. ಒಂದು ಕಾಲಕ್ಕೆ ಅತಿಹೆಚ್ಚು ಸಂಭಾವನೆ ಪಡೆಯೋ ಸಾಹಸ ನಿರ್ದೇಶಕ ಎಂಬ ಹೆಗ್ಗಳಿಕೆ ಅವರಿಗೆ ಇತ್ತು. ಇತ್ತೀಚೆಗಷ್ಟೇ ಅವರು ದುನಿಯಾ ವಿಜಯ್ ನಿರ್ದೇಶನದ ‘ಭೀಮ’ ಸಿನಿಮಾಗಾಗಿ ಕೆಲಸ ಮಾಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...