ನಟ ಯಶ್‌ನನ್ನು ಹಿಂಬಾಲಿಸಿಕೊಂಡು ಬಂದ ಅಭಿಮಾನಿ: ಪೊಲೀಸ್ ಜೀಪ್ ಡಿಕ್ಕಿ ಹೊಡೆದು ಸಾವು

Date:

ಚಿತ್ರನಟ ಯಶ್ 38ನೇ ಹುಟ್ಟಹಬ್ಬದ ಹಿನ್ನೆಲೆ ಬರ್ತ್‌ಡೇ ಶುಭಾಶಯ ಕೋರಿ ಬ್ಯಾನರ್ ಹಾಕುವಾಗ ಗದಗದ ಸೊರಣಗಿ ಗ್ರಾಮದಲ್ಲಿ ಮೂವರು ಅಭಿಮಾನಿಗಳು ವಿದ್ಯುತ್‌ ಪ್ರವಹಿಸಿ ಮೃತಪಟ್ಟಿದ್ದರೆ, ಮೂವರು ಅಭಿಮಾನಿಗಳು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದರು.

ಈ ನಡುವೆ ಯಶ್ ಆಸ್ಪತ್ರೆಗೆ ಭೇಟಿ ನೀಡಿನ ಗಾಯಾಳುಗಳನ್ನು ಮಾತನಾಡಿಸಿ ವಾಪಸ್‌ ತೆರಳುತ್ತಿದ್ದಾಗ ಮತ್ತೊಂದು ಅವಘಡ ಸಂಭವಿಸಿದೆ.

ಯಶ್​ಗೆ ಭದ್ರತೆ ನೀಡುತ್ತಿದ್ದ ಪೊಲೀಸರ ವಾಹನಕ್ಕೆ ದ್ವಿಚಕ್ರ ವಾಹನವೊಂದು ಡಿಕ್ಕಿಯಾಗಿ ಯುವಕ, ಯಶ್ ಅಭಿಮಾನಿ ನಿಖಿಲ್ ಎಂಬಾತನ ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ನಿಖಿಲ್ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೃತ ನಿಖಿಲ್​​​ ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದ ನಿವಾಸಿಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

yash fan

ತನ್ನ ನೆಚ್ಚಿನ ನಟ ಯಶ್ ಅವರನ್ನು ನೋಡಬೇಕು ಎಂದು ಹಿಂಬಾಲಿಸುತ್ತಿದ್ದ ನಿಖಿಲ್ ಸ್ಕೂಟಿ ಗದಗ ಮುಳುಗುಂದ ರಸ್ತೆಯಲ್ಲಿ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ನಿಖಿಲ್​ನನ್ನು ಪೊಲೀಸ್ ವಾಹನದಲ್ಲೇ ಕರೆದೊಯ್ದು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನಿಖಿಲ್ ಮೃತಪಟ್ಟಿದ್ದಾರೆ. ಹುಟ್ಟಹಬ್ಬದ ದಿನವೇ ಅಭಿಮಾನಿಯ ಮತ್ತೊಂದು ಸಾವು ನಟ ಯಶ್​ಗೆ ಆಘಾತ ತಂದಿದೆ.

ಇದನ್ನು ಓದಿದ್ದೀರಾ? ಬ್ಯಾನರ್ ಕಟ್ಟಬೇಡಿ: ಸಾವನ್ನಪ್ಪಿದ ಅಭಿಮಾನಿಗಳ ಕುಟುಂಬ ಸದಸ್ಯರನ್ನು ಸಂತೈಸಿದ ನಟ ಯಶ್

ಘಟನೆ ಸಂಬಂಧ ಗದಗ ಎಸ್​​ಪಿ ಬಿ.ಎಸ್​.ನೇಮಗೌಡ ಮಾಧ್ಯಮಗಳೊಂದಿಗೆ ಮಾತನಾಡಿದ್ದು,”ಬೈಕ್​ಗೆ ಡಿಕ್ಕಿ ಹೊಡೆದ ಜೀಪ್ ಯಶ್ ಬೆಂಗಾವಲು ವಾಹನ ಅಲ್ಲ. ಕೆಲವು ಮಾಧ್ಯಮಗಳಲ್ಲಿ ಯಶ್ ಬೆಂಗಾವಲು ವಾಹನ ಎಂದು ಸುದ್ದಿ ಬಿತ್ತರಿಸಲಾಗಿದೆ. ಆದರೆ ಅದು ಪೊಲೀಸ್ ಹೆಡ್ ಕ್ವಾರ್ಟರ್​ಗೆ ಹೋಗುತ್ತಿದ್ದ ಜೀಪ್. ನಟ ಯಶ್ ಅವರನ್ನು ಬೈಪಾಸ್ ಹೈವೇಯಿಂದಲೇ ಹುಬ್ಬಳ್ಳಿಗೆ ಸೂಕ್ತ ಭದ್ರತೆಯೊಂದಿಗೆ ಕಳುಹಿಸಲಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

yash fan 1

“ನಟ ಯಶ್ ಅವರ ಬೆಂಗಾವಲು ವಾಹನಕ್ಕೂ ಈ ಅಪಘಾತಕ್ಕೂ ಸಂಬಂಧವಿಲ್ಲ. ನಟ ಯಶ್ ಬೆಂಗಾವಲು ವಾಹನ ಡಿಕ್ಕಿಯಾಗಿಲ್ಲ. ಮೃತಪಟ್ಟ ಯುವಕನನ್ನು 20 ವರ್ಷದ ನಿಖಿಲ್ ಎಂದು ಗುರುತಿಸಲಾಗಿದೆ. ಗಾಯಗೊಂಡಿದ್ದ ನಿಖಿಲ್​ನನ್ನು ಪೊಲೀಸ್ ವಾಹನದಲ್ಲೇ ಕರೆದೊಯ್ದು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನಿಖಿಲ್ ಮೃತಪಟ್ಟಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

“ಯಾರೂ ದಯವಿಟ್ಟು ಇನ್ನು ಮುಂದೆ ಬ್ಯಾನರ್ ಕಟ್ಟಬೇಡಿ. ನನಗೆ ನನ್ನ ಹುಟ್ಟುಹಬ್ಬದ ದಿನ ಬಂತೆಂದರೆ ಭಯ ಶುರುವಾಗಿಬಿಟ್ಟಿದೆ. ಈಗ ನಾನು ಬರುವಾಗಲೂ ಬೈಕ್​ನಲ್ಲಿ ಚೇಸ್ ಮಾಡ್ತಿದ್ರು, ಇದು ನಿಜಕ್ಕೂ ಬೇಜಾರಾಗುತ್ತೆ. ಕಟೌಟ್ ಕಟ್ಟಬೇಡಿ ಅಂದ್ರೆ ಬೇಜಾರು ಮಾಡಿಕೊಳ್ತೀರಿ. ಈ ರೀತಿ ಆದಾಗ ನಮ್ಮ ಮನಸ್ಸಿಗೆ ನೋವಾಗುತ್ತದೆ” ಎಂದು ನಿನ್ನೆ ಗದಗದಲ್ಲಿ ಅಭಿಮಾನಿಗಳ ಕುಟುಂಬವನ್ನು ಭೇಟಿ ಮಾಡಿದ್ದ ಬಳಿಕ ಕನ್ನಡದ ಸ್ಟಾರ್ ನಟ ಯಶ್ ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...