ಕೇರಳದಲ್ಲಿ ಷಡ್ಯಂತ್ರದ ಸಿನಿಮಾ ಆಟ ನಡೆಯಲ್ಲ ; ಬೀನಾ ಪೌಲ್‌

Date:

ʼದಿ ಕೇರಳ ಸ್ಟೋರಿʼ ದುರುದ್ದೇಶದ ಸಿನಿಮಾ ಎಂದ ಖ್ಯಾತ ಸಂಕಲನಕಾರ್ತಿ

ಕೇರಳದ ಜನ ಅಸಲಿ ಕಥೆಯನ್ನು ಗೆಲ್ಲಿಸಿದ್ದಾರೆ ಎಂದ ಬೀನಾ

ತಿರುಚಿದ ಕಥಾಹಂದರದ ಕಾರಣಕ್ಕೇ ಸುದ್ದಿಯಲ್ಲಿರುವ ʼದಿ ಕೇರಳ ಸ್ಟೋರಿʼ ಸಿನಿಮಾದ ಬಗ್ಗೆ ರಾಷ್ಟ್ರ ಪ್ರಶಸ್ತಿ ವೀಜೆತೆ, ಮಲಯಾಳಂನ ಖ್ಯಾತ ಸಿನಿಮಾ ಸಂಕಲನಕಾರ್ತಿ ಬೀನಾ ಪೌಲ್‌ ಮಾತನಾಡಿದ್ದು, ಇದು ಮೌಲ್ಯಗಳೇ ಇಲ್ಲದ ದುರುದ್ದೇಶಪೂರಿತ ಚಿತ್ರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ಬೀನಾ ಪೌಲ್‌, “ಇಂತಹ ದುರುದ್ದೇಶಪೂರಿತ ಚಿತ್ರಕ್ಕೆ ಅನಗತ್ಯವಾಗಿ ಪ್ರಚಾರ ನೀಡಲಾಗುತ್ತಿದೆ. ಯಾರು ಕೂಡ ಈ ಚಿತ್ರದ ಬಗ್ಗೆ ಮಾತನಾಡದೆ ಕಡೆಗಣಿಸಿದ್ದರೆ ತನ್ನಷ್ಟಕ್ಕೆ ತಾನೇ ಸೋತು ಮೂಲೆ ಸೇರುತ್ತಿತ್ತು. ಇವತ್ತಿನ ಪರಿಸ್ಥಿತಿಯಲ್ಲಿ ಯಾರು ಬೇಕಾದರೂ ದುರುದ್ದೇಶದ ಸಿನಿಮಾಗಳನ್ನು ಮಾಡಬಹುದು. ಯಾಕೆಂದರೆ ಅಂಥವರನ್ನೇ ರಕ್ಷಿಸಲಾಗುತ್ತಿದೆ. ತಿರುಚಿದ ಕಥಾಹಂದರದ ಕಾರಣಕ್ಕೆ ನ್ಯಾಯಾಲಯದ ಆದೇಶ ಪಾಲಿಸಿ ನಿರ್ದೇಶಕರು ಚಿತ್ರದ ಟ್ರೈಲರ್‌ ಅನ್ನು ಬದಲಿಸಬೇಕಾಯಿತು. ಆದರೆ, ಆ ಬಗ್ಗೆ ಯಾರು ಕೂಡ ಮಾತನಾಡುವುದಿಲ್ಲ” ಎಂದಿದ್ದಾರೆ.

“ನಿರ್ದಿಷ್ಟ ಜನರ ಆಶಯಗಳನ್ನು ಪೋಷಿಸುವ ಸಲುವಾಗಿ ಈ ಸಿನಿಮಾ ಮಾಡಿದ ಹಾಗಿದೆ. ಆದರೆ, ಈ ಷಡ್ಯಂತ್ರದ ಸಿನಿಮಾ ಆಟ ನಮ್ಮ ಕೇರಳದ ಜನರ ಎದುರು ನಡೆಯಲಿಲ್ಲ. ಕೇರಳಿಗರು ʼದಿ ಕೇರಳ ಸ್ಟೋರಿʼಯನ್ನು ನಿರಾಕರಿಸಿದರು. ಈ ಸಿನಿಮಾಗೆ ಎದುರಾಗಿ ಬಿಡುಗಡೆಯಾದ ಕೇರಳದ ಅಸಲಿ ಕಥೆಯುಳ್ಳ ʼ2018ʼ ಚಿತ್ರವನ್ನು ಜನ ಗೆಲ್ಲಿಸಿದರು” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹೆಚ್ಚುತ್ತಿರುವ ದ್ವೇಷ ಮತ್ತು ಹಿಂದಿ ಚಿತ್ರರಂಗದ ʼಜಾಣ ಮೌನʼ

ಬೀನಾ ಪೌಲ್‌ ಮಾತ್ರವಲ್ಲ, ಕಮಲ್‌ ಹಾಸನ್‌, ನವಾಜುದ್ದೀನ್‌ ಸಿದ್ದಿಕಿ, ಅನುರಾಗ್‌ ಕಶ್ಯಪ್‌, ನಾಸಿರುದ್ದೀನ್‌ ಶಾ ಸೇರಿದಂತೆ ಭಾರತೀಯ ಚಿತ್ರರಂಗದ ಹಲವು ತಾರೆಯರು ಮತ್ತು ತಂತ್ರಜ್ಞರು ʼದಿ ಕೇರಳ ಸ್ಟೋರಿʼ ಚಿತ್ರವನ್ನು ವಿರೋಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...