ಐಶ್ವರ್ಯಾ ರಜನಿಕಾಂತ್‌ ಮನೆಯಲ್ಲಿ ಚಿನ್ನಾಭರಣ ಕಳವು : ಕೆಲಸದವರ ಮೇಲೆ ಶಂಕೆ

Date:

ತಮಿಳಿನ ಹಿರಿಯ ನಟ ರಜನಿಕಾಂತ್‌ ಅವರ ಹಿರಿಯ ಪುತ್ರಿ, ಚಿತ್ರ ನಿರ್ಮಾಪಕಿ ಐಶ್ವರ್ಯಾ ಅವರ ಮನೆಯಲ್ಲಿ 3 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳು ಕಳುವಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಐಶ್ವರ್ಯಾ ಅವರು ಚೆನ್ನೈನ ತೈನಂಪೇಟ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಐಶ್ವರ್ಯಾ, 2019ರಲ್ಲಿ ತಮ್ಮ ಸಹೋದರಿ ಸೌಂದರ್ಯ ಅವರ ಮದುವೆ ಸಂದರ್ಭದಲ್ಲಿ ಒಡವೆಗಳನ್ನು ಬಳಸಿ ಪೋಯಿಸ್‌ ಗಾರ್ಡನ್‌ನಲ್ಲಿರುವ ತಂದೆಯ ಮನೆಯಲ್ಲಿದ್ದ ಲಾಕರ್‌ನಲ್ಲಿಟ್ಟಿದ್ದರು ಎನ್ನಲಾಗಿದೆ. 2019ರಿಂದ ಕಳೆದ ಫೆಬ್ರವರಿಯ ನಡುವೆ ಆಭರಣಗಳಿದ್ದ ಲಾಕರ್‌ ಮೂರು ಕಡೆ ಸ್ಥಳಾಂತರಗೊಂಡಿದೆ. 2021ರ ಆಗಸ್ಟ್‌ನಲ್ಲಿ ಪೋಯಿಸ್‌ ಗಾರ್ಡನ್‌ ಮನೆಯಿಂದ ತಮ್ಮ ಪತಿ ಧನುಷ್‌ ವಾಸವಿದ್ದ ಸಿಐಟಿ ನಗರದ ಮನೆಗೆ ಐಶ್ವರ್ಯಾ, ಲಾಕರ್‌ ಕೊಂಡೊಯ್ದಿದ್ದಾರೆ. ಅದೇ ವರ್ಷ ಸೆಪ್ಟೆಂಬರ್‌ನಲ್ಲಿ ಪತಿಯ ಮನೆಯಿಂದ ತಾವು ವಾಸವಿರುವ ಸೆಂಟ್‌ ಮೇರೀಸ್‌ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್‌ಗೆ ಲಾಕರ್‌ ಅನ್ನು ಸ್ಥಳಾಂತರಿಸಿದ್ದಾರೆ. ಕೊನೆಯದಾಗಿ 2022ರ ಏಪ್ರಿಲ್‌ನಲ್ಲಿ ಮತ್ತೆ ಅದೇ ಲಾಕರ್‌ ಅನ್ನು ಪೋಯಿಸ್‌ ಗಾರ್ಡನ್‌ನಲ್ಲಿರುವ ಮನೆಗೆ ವಾಪಸ್‌ ಕೊಂಡೊಯ್ಯಲಾಗಿದೆ.

ಈ ನಾಲ್ಕು ವರ್ಷದ ಅವಧಿಯಲ್ಲಿ ಐಶ್ವರ್ಯಾ ಲಾಕರ್‌ನಲ್ಲಿನ ಒಡವೆಗಳನ್ನು ಬಳಸಿದ್ದಾರಾದರೂ ಕೆಲವು ಒಡವೆಗಳು ಕಾಣೆಯಾಗಿರುವ ಬಗ್ಗೆ ಅವರ ಅರಿವಿಗೆ ಬಂದಿಲ್ಲ. ಕಳೆದ ಫೆಬ್ರವರಿ 10ರಂದು ಲಾಕರ್‌ ತೆರೆದು ಪರಿಶೀಲಿಸಿದಾಗ 3 ಲಕ್ಷ 60 ಸಾವಿರ ಮಾಲ್ಯದ ಚಿನ್ನದ ಬಳೆಗಳು, ವಜ್ರದ ಹಾರ, ಹವಳದ ಸರಗಳು ಕಾಣೆಯಾಗಿರುವುದು ಕಂಡು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಗೆ ಸಂಬಂಧಿಸಿ ಐಶ್ವರ್ಯಾ ಅವರು ತೈನಂಪೇಟ್‌ ಪೊಲೀಸ್‌ ಠಾಣೆಯಲ್ಲಿ ಕಳ್ಳತನ ಆರೋಪದಡಿ ದೂರು ದಾಖಲಿಸಿದ್ದು, ತಮ್ಮ ಮನೆಯಲ್ಲಿ ಸಹಾಯಕಿಯರಾಗಿ ಕೆಲಸ ಮಾಡುತ್ತಿರುವ ಈಶ್ವರಿ, ಲಕ್ಷ್ಮೀ ಮತ್ತು ಕಾರು ಚಾಲಕ ವೆಂಕಟ್‌ ಎಂಬುವವರ ಮೇಲೆ ಅನುಮಾನ ಇರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...