ಕನ್ನಡದ ‘ಕಪ್ಪೆರಾಗ-ಕುಂಬಾರನ ಹಾಡು’ ಕಿರುಚಿತ್ರಕ್ಕೆ ಗ್ರೀನ್ ಆಸ್ಕರ್ ಪ್ರಶಸ್ತಿ

Date:

ಪಶ್ಚಿಮ ಘಟ್ಟದಲ್ಲಿ ಕಂಡುಬರುವ ‘ಕುಂಬಾರ ಕಪ್ಪೆ’ ಕುರಿತು ರಚಿಸಲಾಗಿರುವ ‘ಕಪ್ಪೆರಾಗ-ಕುಂಬಾರನ ಹಾಡು’ ಎಂಬ ಕನ್ನಡ ಕಿರುಚಿತ್ರಕ್ಕೆ ‘ಜ್ಯಾಕ್ಸನ್ ವೈಲ್ಡ್ ಮೀಡಿಯಾ’ ಪ್ರಶಸ್ತಿ ಲಭಿಸಿದೆ.

ಕುಂಬಾರ ಕಪ್ಪೆಯನ್ನು ನಿಶಾಚಾರಿ ಕಪ್ಪೆ ಎಂದೂ ಕರೆಯಲಾಗುತ್ತದೆ. ಈ ಕಪ್ಪೆಯ ಕುರಿತು ನಿರ್ದೇಶಕ ಪ್ರಶಾಂತ್ ಎಸ್. ನಾಯಕ್ ಅವರು ಕಿರುಚಿತ್ರ ನಿರ್ಮಾಣ ಮಾಡಿದ್ದಾರೆ. ಈ ಚಿತ್ರಕ್ಕೆ ಗ್ರೀನ್ ಆಸ್ಕರ್ ಎಂದೇ ಖ್ಯಾತಿ ಪಡೆದಿರುವ ‘ಜ್ಯಾಕ್ಸನ್ ವೈಲ್ಡ್ ಮೀಡಿಯಾ’ದ ಅತ್ಯುತ್ತಮ ಪ್ರಾಣಿ ವರ್ತನೆ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ.

“ಕಿರುಚಿತ್ರವನ್ನು ಜಗತ್ತಿನಲ್ಲಿರುವ 8 ಕೋಟಿ ಕನ್ನಡ ಮಾತನಾಡುವ ಜನರಿಗೆ ಹಾಗೂ ಭಾರತದ 150 ಕೋಟಿ ಜನರಿಗೆ ಅರ್ಪಣೆ ಮಾಡಿದ್ದೇನೆ” ಎಂದು ನಿರ್ದೇಶಕ ಪ್ರಶಾಂತ್ ಎಸ್. ನಾಯಕ್ ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂಗೀತ, ಸಾಹಿತ್ಯ ಸೇರಿದಂತೆ ಅನಾದಿ ಕಾಲದಿಂದಲೂ ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ಕನ್ನಡ ನಾಡು ಸಾವಿರಾರು ವರ್ಷಗಳಿಂದ ನಿಸರ್ಗದತ್ತವಾಗಿಯೂ ಸಂಪದ್ಭರಿತವಾಗಿದೆ. ಇಂಥ ನಾಡಿನ ಕನ್ನಡ ಚಿತ್ರಕ್ಕೆ ಇದೇ ಮೊದಲ ಬಾರಿಗೆ ಜ್ಯಾಕ್ಸನ್ ವೈಲ್ಡ್ ಮೀಡಿಯಾ ಪ್ರಶಸ್ತಿ ಲಭಿಸಿದೆ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಕಿರುಚಿತ್ರಕ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ಪ್ರತಿಷ್ಠಿತ ಜಾಕ್ಸನ್ ವೈಲ್ಡ್ ಅವಾರ್ಡ್‌ಗೆ ಭಾಜನವಾಗಿರುವ ಕನ್ನಡದ ಮೊದಲ ‘ವೈಲ್ಡ್ ಲೈಫ್ ಮ್ಯೂಸಿಕಲ್ ಡಾಕ್ಯು ಫಿಲಂ’ ಕಪ್ಪೆರಾಗ ಚಿತ್ರತಂಡಕ್ಕೆ ಅಭಿನಂದನೆಗಳು. ಕರುನಾಡಿನ ಪ್ರತಿಭೆಗಳ ಪರಿಶ್ರಮದ ಚಿತ್ರಕ್ಕೆ ಗ್ರೀನ್ ಆಸ್ಕರ್ ಎಂದೇ ಹೆಸರುವಾಸಿಯಾಗಿರುವ ಜಾಕ್ಸನ್ ವೈಲ್ಡ್ ಅವಾರ್ಡ್ ‌ನಂತ ಅಂತಾರಾಷ್ಟ್ರೀಯ ಮಟ್ಟದ ಪ್ರಶಸ್ತಿ ದೊರೆತದ್ದು ಪ್ರತಿಯೊಬ್ಬ ಕನ್ನಡಿಗನಿಗೂ ಹೆಮ್ಮೆಯ ಸಂಗತಿ. ಚಿತ್ರದ ನಿರ್ದೇಶಕ ಪ್ರಶಾಂತ್ ಎಸ್. ನಾಯ್ಕ ಮತ್ತವರ ತಂಡದ ಸಾಧನೆ ನಾಡಿನ ಯುವ ನಿರ್ದೇಶಕರಿಗೆ ಪ್ರೇರಣೆಯಾಗಲಿ, ಇಂಥ ಇನ್ನಷ್ಟು ಚಿತ್ರಗಳು ನಮ್ಮಲ್ಲಿ ಮೂಡಿಬಂದು, ಕನ್ನಡದ ಕಲರವ ಜಗದಗಲ ಮೊಳಗಲಿ ಎಂದು ಹಾರೈಸುತ್ತೇನೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...