ಭಾರತೀಯ ಸಿನಿಮಾ ಎಂದರೆ ಬಾಲಿವುಡ್‌ ಅಲ್ಲ ; ಮಣಿರತ್ನಂ

Date:

ಹಿಂದಿ ಚಿತ್ರರಂಗದವರು ಬಾಲಿವುಡ್‌ ಎನ್ನುವುದನ್ನು ನಿಲ್ಲಿಸಬೇಕು

ನಾನು ಯಾವ ʼವುಡ್‌ʼನ ಅಭಿಮಾನಿಯೂ ಅಲ್ಲ ಎಂದ ಮಣಿರತ್ನಂ

ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ದಕ್ಷಿಣ ಭಾರತದ ಜನಪ್ರಿಯ ಚಿತ್ರಗಳನ್ನು ಬಾಲಿವುಡ್‌ ಸಿನಿಮಾ ಎಂದು ಗುರುತಿಸುತ್ತಿರುವ ಬಗ್ಗೆ ತಮಿಳಿನ ಖ್ಯಾತ ನಿರ್ದೇಶಕ ಮಣಿರತ್ನಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಭಾರತೀಯ ಸಿನಿಮಾ ಎಂದರೆ ಕೇವಲ ಬಾಲಿವುಡ್‌ ಮಾತ್ರವಲ್ಲ, ಹಿಂದಿ ಚಿತ್ರರಂಗದವರು ತಮ್ಮನ್ನು ತಾವು ಬಾಲಿವುಡ್‌ನವರು ಎಂದು ಗುರುತಿಸಿಕೊಳ್ಳುವುದನ್ನು ನಿಲ್ಲಿಸಬೇಕು” ಎಂದು ಎಚ್ಚರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಪೊನ್ನಿಯನ್‌ ಸೆಲ್ವನ್‌-2ʼ ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರುವ ಮಣಿರತ್ನಂ, ಏಪ್ರಿಲ್‌ 19ರಂದು ಚೆನ್ನೈನಲ್ಲಿ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಭಾಗಯಾಗಿದ್ದರು. ಅವರ ಜೊತೆಗೆ ದಕ್ಷಿಣ ಸಿನಿ ರಂಗದ ಖ್ಯಾತ ನಿರ್ದೇಶಕರಾದ ವೆಟ್ರಿಮಾರನ್‌, ಬಾಸಿಲ್‌ ಜೋಸೆಫ್‌, ರಿಷಬ್‌ ಶೆಟ್ಟಿ ಕೂಡ ಸಂವಾದಲ್ಲಿ ಭಾಗಿಯಾಗಿದ್ದರು.

ಕಾರ್ಯಕ್ರಮದಲ್ಲಿ ಜಗತ್ತಿನ ಮೇಲೆ ದಕ್ಷಿಣದ ಸಿನಿಮಾಗಳು ಬೀರಿದ ಪ್ರಭಾವದ ಕುರಿತು ಮಣಿರತ್ನಂ ಮಾತನಾಡಿದ್ದಾರೆ. ಇದೇ ವೇಳೆ, “ಹಿಂದಿ ಚಿತ್ರರಂಗದವರು ತಮ್ಮನ್ನು ತಾವು ಬಾಲಿವುಡ್‌ನವರು ಎಂದು ಹೇಳಿಕೊಳ್ಳುವುದನ್ನು ನಿಲ್ಲಿಸದಾಗಲೇ ವಿದೇಶಿಗರಿಗೆ ಬಾಲಿವುಡ್‌ ಎಂದರೆ ಭಾರತೀಯ ಸಿನಿಮಾ ಅಲ್ಲ ಎಂಬ ಸ್ಪಷ್ಟತೆ ಸಿಗುತ್ತದೆ. ನಾನು ಬಾಲಿವುಡ್‌, ಕಾಲಿವುಡ್‌, ಯಾವುದೇ ವುಡ್‌ಗಳ ಅಭಿಮಾನಿಯೂ ಅಲ್ಲ. ನಾವು ಎಲ್ಲ ಚಿತ್ರರಂಗಗಳನ್ನು ಒಟ್ಟಾಗಿ ಭಾರತೀಯ ಸಿನಿಮಾ ಎಂಬಂತೆ ಕಾಣುವ ಅಗತ್ಯವಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಖಾಸಗಿ ತನಕ್ಕೆ ಧಕ್ಕೆ : ದೆಹಲಿ ಹೈಕೋರ್ಟ್‌ ಮೊರೆ ಹೋದ ಆರಾಧ್ಯ ಬಚ್ಚನ್‌

ತೆಲುಗಿನ ʼಆರ್‌ಆರ್‌ಆರ್‌ʼ ಸಿನಿಮಾ ಇತ್ತೀಚೆಗೆ ಆಸ್ಕರ್‌ ಪ್ರಶಸ್ತಿ ಗೆದ್ದಾಗ ವೇದಿಕೆಯ ಮೇಲಿದ್ದ ನಿರೂಪಕ ಜಿಮ್ಮಿ ಕಿಮ್ಮೆಲ್‌ ʼಆರ್‌ಆರ್‌ಆರ್‌ʼ ಬಾಲಿವುಡ್‌ ಸಿನಿಮಾ ಎಂದು ಘೋಷಿಸಿದ್ದರು. ಜಿಮ್ಮಿ ಅವರ ಈ ಹೇಳಿಕೆ ಭಾರತೀಯರಿಂದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಇತ್ತೀಚೆಗೆ ನಟಿ ಪ್ರಿಯಾಂಕಾ ಚೋಪ್ರಾ ಅವರನ್ನು ಸಂದರ್ಶಿಸಿದ್ದ ಅಮೆರಿಕನ್‌ ಮಾಧ್ಯಮದ ನಿರೂಪಕನೂ ʼಆರ್‌ಆರ್‌ಆರ್‌ʼ ಬಾಲಿವುಡ್‌ ಸಿನಿಮಾ ಎಂದಿದ್ದರು. ಆತನ ಮಾತನ್ನು ತಿದ್ದಲು ಯತ್ನಿಸಿದ್ದ ಭಾರತ ಮೂಲದ ಪ್ರಿಯಾಂಕಾ ಚೋಪ್ರಾ, ʼಆರ್‌ಆರ್‌ಆರ್‌ʼ ಬಾಲಿವುಡ್‌ ಚಿತ್ರವಲ್ಲ ಅದು ತಮಿಳಿನ ಸಿನಿಮಾ ಎಂದು ಟ್ರೋಲ್‌ಗೆ ಒಳಗಾಗಿದ್ದರು. ಕನ್ನಡ ಮೂಲದ ʼಕೆಜಿಎಫ್‌ʼ ಚಿತ್ರವನ್ನು ಕೂಡ ಇದೇ ರೀತಿಯಲ್ಲಿ ಬಾಲಿವುಡ್‌ ಚಿತ್ರ ಎಂದು ಬಿಂಬಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...