ನಟ ಚೇತನ್‌ ವೀಸಾ ರದ್ದುಗೊಳಿಸಿದ ಕೇಂದ್ರ ಸರ್ಕಾರ

Date:

15 ದಿನದೊಳಗೆ ʼಓಸಿಐ ಕಾರ್ಡ್‌ʼ ಹಿಂದಿರುಗಿಸಲು ಸೂಚನೆ

ಕಾನೂನು ಹೋರಾಟಕ್ಕೆ ಸಜ್ಜಾದ ನಟ ಚೇತನ್‌ ಕುಮಾರ್‌

‘ಆ ದಿನಗಳು’ ಖ್ಯಾತಿಯ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಕುಮಾರ್‌ ಅವರ ವೀಸಾವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಚೇತನ್‌, ಕೇಂದ್ರದ ಈ ನಡೆಯ ವಿರುದ್ಧ ಕಾನೂನು ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಚೇತನ್‌, “2022ರ ಜೂನ್‌ನಲ್ಲಿ ನೀವು ಕ್ರಿಮಿನಲ್‌ ಪ್ರಕರಣಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುತ್ತಿದ್ದೀರಿ, ನಿಮ್ಮ ವಿಸಾವನ್ನು ಯಾಕೆ ರದ್ದು ಮಾಡಬಾರದು ಎಂದು ಶೋಕಾಸ್‌ ನೋಟಿಸ್‌ ನೀಡಿದ್ದರು. ಆಗ ಗೃಹ ಇಲಾಖೆಗೆ ತೆರಳಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಸ್ಪಷ್ಟನೆ ನೀಡಿದ್ದೆ. ಕಳೆದ ಶುಕ್ರವಾರ ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದೀರಿ ಎಂದು ಆರೋಪಿಸಿ ನನ್ನ ವೀಸಾವನ್ನು ರದ್ದುಗೊಳಿಸಿ ಕೇಂದ್ರ ಗೃಹ ಇಲಾಖೆ ನೋಟಿಸ್‌ ನೀಡಿದೆ. 15 ದಿನಗಳ ಒಳಗಾಗಿ ನನ್ನ ʼಓಸಿಐ ಕಾರ್ಡ್‌ʼ (ಭಾರತೀಯ ಮೂಲದ ವಿದೇಶಿ ಪ್ರಜೆಗೆ ಭಾರತದಲ್ಲಿ ಅನಿರ್ದಿಷ್ಟ ಅವಧಿಯವರೆಗೆ ವಾಸಿಸಲು ಮತ್ತು ಕೆಲಸ ಮಾಡಲು ಇರುವ ವಲಸೆ ವ್ಯವಸ್ಥೆ) ಅನ್ನು ಹಿಂತಿರುಗಿಸುವಂತೆ ಆದೇಶಿಸಿದೆ. ಕೇಂದ್ರ ಗೃಹ ಇಲಾಖೆಯ ಈ ಆದೇಶಕ್ಕೆ ನ್ಯಾಯಾಲಯದಿಂದ ತಡೆಯಾಜ್ಞೆ ತರುತ್ತೇನೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೃತಿ ಚೌರ್ಯ ಪ್ರಕರಣ | ʼವರಾಹ ರೂಪಂʼ ಹಾಡಿನ ಪ್ರಸಾರಕ್ಕೆ ಮತ್ತೆ ತಡೆ

ಕೇಂದ್ರದ ನಡೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಚೇತನ್‌, “ನಮ್ಮ ಸಿದ್ಧಾಂತ ಮತ್ತು ಹೋರಾಟ ಸರ್ಕಾರಕ್ಕೆ ಇಷ್ಟವಾಗಿಲ್ಲ. ʼಬ್ರಾಹ್ಮಣ್ಯ ಲಾಬಿʼ ಎಂದು ಟ್ವೀಟ್‌ ಮಾಡಿದ್ದಕ್ಕೆ ನನ್ನ ಮೇಲೆ ಕೇಸ್‌ ಹಾಕಿದರು. ಒಂದೂವರೆ ವರ್ಷದ ಹಿಂದೆಯೇ ನನ್ನ ಭದ್ರತೆ ನೀಡಿದ್ದ ಗನ್‌ ಮ್ಯಾನ್‌ನನ್ನು ಸರ್ಕಾರ ಹಿಂಪಡೆದುಕೊಂಡಿದೆ. ಸತ್ಯದ ಪರ ಟ್ವೀಟ್‌ ಮಾಡಿದ್ದಕ್ಕೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಹೊರಿಸಿ ಮೂರು ದಿನ ಜೈಲಿಗೆ ಕಳುಹಿಸಿದ್ದರು. ನಾನು ಎಲ್ಲಿ ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದೇನೆ? ನಾನು ಈ ದೇಶದಲ್ಲಿ ಇರಬಾರದು ಎಂದು ಉದ್ದೇಶ ಪೂರ್ವಕವಾಗಿಯೇ ವೀಸಾ ರದ್ದು ಮಾಡಿದ್ದಾರೆ. ನನ್ನ ವಿರುದ್ಧ ಪಿತೂರಿ ನಡೆಸಲಾಗುತ್ತಿದೆ. ನಾನು ಈ ದೇಶದವನು. ನನ್ನ ಬಳಿಯೂ ʼಆಧಾರ್‌ ಕಾರ್ಡ್‌ʼ, ʼಪ್ಯಾನ್‌ ಕಾರ್ಡ್‌ʼಗಳಿವೆ. 2018ರಲ್ಲಿ ʼಓಸಿಐ ಕಾರ್ಡ್‌ʼ ಸಿಕ್ಕಿದೆ. ನಾನು ಕೂಡ ಈ ದೇಶಕ್ಕೆ ಆದಾಯ ತೆರಿಗೆ ಕಟ್ಟುತ್ತೇನೆ. ನನಗೆ ಅಮೆರಿಕಕ್ಕೆ ಹೋಗಲು ಮನಸ್ಸಿಲ್ಲ. ಈ ಬಗ್ಗೆ ವಕೀಲರ ಬಳಿ ಮಾತನಾಡಿದ್ದೇನೆ. ಕಾನೂನು ಹೋರಾಟ ನಡೆಸುತ್ತೇನೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...