ನಾನು ಕನ್ನಡಿಗ: ಗಾಯಕ ಇಳಯರಾಜ

Date:

ಖ್ಯಾತ ಸಂಗೀತ ಸಂಯೋಜಕ, ಗಾಯಕ ಇಳಯರಾಜ ಅವರು ಮಂಗಳವಾರ (ಜೂನ್ 3) ತಮ್ಮ 82ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಅವರು ‘ನಾನು ಕನ್ನಡಿಗ, ನನ್ನಮ್ಮ ಇಲ್ಲಿಯೇ ಇರೋದು, ನಾನು ಕರ್ನಾಟಕದವನು’ ಎಂದು ಹೆಮ್ಮೆಯಿಂದ ಹೇಳಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇತ್ತೀಚೆಗೆ, ಕನ್ನಡವು ತಮಿಳು ಭಾಷೆಯಿಂದ ಹುಟ್ಟಿದ್ದು ಎಂದು ಕಮಲ್ ಹಾಸನ್ ಹೇಳಿಕೆ ನೀಡಿದ್ದರು. ಅವರ ಹೇಳಿಕೆ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಚರ್ಚೆಗಳು ನಡೆಯುತ್ತಿವೆ. ಕಮಲ್ ಹಾಸನ್ ಕ್ಷಮೆಯಾಚಿಸಬೇಕೆಂದು ಒತ್ತಾಯಗಳು ಹೇಳಿಬರುತ್ತಿವೆ. ಆದರೆ, ಕಮಲ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇದೇ ಹೊತ್ತಿನಲ್ಲಿ, ಇಳಯರಾಜ ಅವರು ಕನ್ನಡದ ಬಗ್ಗೆ ಮಾತನಾಡಿದ್ದ ವಿಡಿಯೋ ಅವರ ಜನ್ಮದಿನದಂದು ಮುನ್ನೆಲೆಗೆ ಬಂದಿದೆ.

ವೈರಲ್ ಆಗಿರುವ ವಿಡಿಯೋ ಖಾಸಗಿ ವಾಹಿನಿಯೊಂದಕ್ಕೆ ಇಳಯರಾಜ ಅವರು ಸಂದರ್ಶನ ನೀಡಿದ್ದ ಸಮಯದ್ದಾಗಿದೆ. ವಿಡಿಯೋದಲ್ಲಿ, ನಿರೂಪಕರು ಇಳಯರಾಜ ಅವರನ್ನು ಅತಿಥಿ ಎಂದಾಗ ಪ್ರತಿಕ್ರಿಯಿಸುವ ಗಾಯಕ, “ನಾನು ಅತಿಥಿ ಅಲ್ಲ. ನಾನು ಕನ್ನಡದವನು. ನನ್ನ ಅಮ್ಮ ಕೊಲ್ಲೂರು ಮೂಕಾಂಬಿಕೆ ಕರ್ನಾಟಕದಲ್ಲೇ ಇರೋದು. ನನ್ನ ಊರು ಇದು. ನಾನು ಇಲ್ಲಿಯ ಮಗ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂಗೀತ ಕ್ಷೇತ್ರದಲ್ಲಿ ನಾನು ಸಹಾಯಕ ಸಂಗೀತ ನಿರ್ದೇಶಕನಾಗಿ ಕೆಲಸ ಮಾಡಿದ್ದೇನೆ. ಜಿ.ಕೆ ವೆಂಕಟೇಶ್ ಜೊತೆ ಕೆಲಸ ಮಾಡಿದ್ದೇನೆ. ನನ್ನ ಕನ್ನಡ ಹಾಡುಗಳನ್ನು ಕನ್ನಡಿಗರು ಮೆಚ್ಚಿಕೊಂಡಿದ್ದಾರೆ” ಎಂದು ಹೇಳಿಕೊಂಡಿದ್ದಾರೆ.

ಈ ವರದಿ ಓದಿದ್ದೀರಾ?: ಈ ದಿನ ಫಲಶ್ರುತಿ | ಗುಲಬರ್ಗಾ ವಿವಿ ಕರ್ಮಕಾಂಡ; ಸಿಒಡಿ ತನಿಖೆಗೆ ಸಿಂಡಿಕೇಟ್ ನಿರ್ಧಾರ

ಇತ್ತೀಚೆಗೆ, ಮೇ 24ರಂದು ಚೆನ್ನೈನಲ್ಲಿ ನಡೆದ ‘ಥಗ್ ಲೈಫ್’ ಸಿನಿಮಾದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕಮಲ್ ಹಾಸನ್, “ಕನ್ನಡ ಭಾಷೆಯು ತಮಿಳಿನಿಂದ ಹುಟ್ಟಿದೆ” ಎಂದು ಹೇಳಿದ್ದರು. ಅವರ ಹೇಳಿಕೆ ವಿರುದ್ಧ ಕರ್ನಾಟಕದಲ್ಲಿ ರಾಜಕಾರಣಿಗಳು, ಸಾಹಿತಿಗಳು ಹಾಗೂ ನಟ-ನಟಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಟಿ ರಚಿತಾ ರಾಮ್ ಅವರು, “ತಪ್ಪಾದರೆ ಕ್ಷಮೆ ಕೇಳುವುದರಲ್ಲಿ ತಪ್ಪೇನಿದೆ?” ಎಂದು ಕಮಲ್ ಹಾಸನ್ ಅವರನ್ನು ಕೇಳಿದ್ದಾರೆ. ನಟ ಶಿವರಾಜ್‌ಕುಮಾರ್ ಅವರು, “ಕನ್ನಡಕ್ಕಾಗಿ ಹೋರಾಡುತ್ತೇವೆ, ಬೇಕಿದ್ದರೆ ಸಾಯುತ್ತೇವೆ” ಎಂದಿದ್ದಾರೆ.

ಇದಕ್ಕೂ ಹಿಂದೆ, ಭಾರತ-ಪಾಕ್ ದಾಳಿ ಸಂದರ್ಭದಲ್ಲಿ ಗಾಯಕ ಸೋನು ನಿಗಂ ಅವರು ಕನ್ನಡ ಭಾಷೆ ಬಗ್ಗೆ ನಿರ್ಲಕ್ಷ್ಯದ ಮಾತನಾಡಿದ್ದರು. ಅವರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕ್ಷಮೆ ಯಾಚಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...