ಅಪಘಾತ ಮಾಡಿ ಓಡಲಿಲ್ಲ, ತಂದೆ ಕಳೆದುಕೊಂಡ ನೋವು ನನಗೂ ಗೊತ್ತಿದೆ: ನಟ ನಾಗಭೂಷಣ್

Date:

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ವ್ಯಾಪ್ತಿಯಲ್ಲಿ ನಡೆದ ನಟ ನಾಗಭೂಷಣ್ ಕಾರು ಅಪಘಾತವನ್ನು ‘ಹಿಟ್ ಅಂಡ್ ರನ್’ ಪ್ರಕರಣ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ‘ಅಪಘಾತ ಮಾಡಿ ನಾನು ಅಲ್ಲಿಂದ ಓಡಿಲ್ಲ. ಆ ಕ್ಷಣದಲ್ಲಿ ಒಬ್ಬ ಮನುಷ್ಯನಾಗಿ ಏನು ಮಾಡಲಿಕ್ಕೆ ಏನು ಸಾಧ್ಯವೋ ಅವೆಲ್ಲವನ್ನೂ ಮಾಡಿದ್ದೇನೆ. ಯಾಕೆಂದರೆ ನನಗೂ ಕೂಡ ತಂದೆ ಕಳೆದುಕೊಂಡ ನೋವು ಗೊತ್ತಿದೆ’ ಎಂದು ತಿಳಿಸಿದ್ದಾರೆ.

ಅಪಘಾತದ ಬಳಿಕ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಟ ನಾಗಭೂಷಣ್, ಅಪಘಾತವಾದ ನಂತರ ನಾನು ಎಲ್ಲಿಗೂ ಓಡಿ ಹೋಗಿಲ್ಲ. ನನ್ನ ಕಾರು ಅಲ್ಲಿಯೇ ಇತ್ತು. ನಾನು ಗಾಯಾಳುವನ್ನು ಆಸ್ಪತ್ರೆಗೆ ಸೇರಿಸುವ ಪ್ರಯತ್ನ ಮಾಡಿದೆ. ಪೊಲೀಸರ ತನಿಖೆಗೂ ನಾನು ಹೋಗಿರುವೆ. ದಯವಿಟ್ಟು ಹಿಟ್ ಅಂಡ್ ರನ್ ಕೇಸು ಎಂದು ಸುದ್ದಿ ಬಿತ್ತರಿಸಬೇಡಿ. ಮಾನಸಿಕವಾಗಿ ಕುಗ್ಗಿದ್ದೇನೆ ಎಂದು ಹೇಳುತ್ತಾ ಭಾವುಕರಾದರು.

car accident

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ನನ್ನ ಕಾರು ಕೂಡ ಸ್ಪೀಡ್ ಆಗಿ ಇರಲಿಲ್ಲ. ವೇಗವಾಗಿ ಓಡಿಸುವುದಕ್ಕೂ ಆ ರಸ್ತೆಯಲ್ಲಿ ಆಗುವುದಿಲ್ಲ. ದಿಢೀರಾಗಿ ಆ ದಂಪತಿ ಫುಟ್‌ಪಾತ್‌ನಿಂದ ರಸ್ತೆಗೆ ಇಳಿದರು. ಹಾಗಾಗಿ ನನಗೆ ಏನೂ ಮಾಡಲಿಕ್ಕೆ ಆಗಲಿಲ್ಲ. ಕಾರು ಅಪಘಾತವಾಯಿತು. ಆ ಕುಟುಂಬಕ್ಕೆ ಆದ ನೋವು ನನಗೆ ಅರಿವಿದೆ. ಅವರ ಕುಟುಂಬವನ್ನು ಸಂಪರ್ಕಿಸಿದ್ದೇವೆ. ಮುಂದಿನ ದಿನಗಳಲ್ಲಿ ಅವರನ್ನು ಮಾತನಾಡಿಸುವ ಪ್ರಯತ್ನ ಮಾಡುವೆ’ ಎಂದು ನಾಗಭೂಷಣ್ ತಿಳಿಸಿದ್ದಾರೆ.

‘ನಾನು ಚಿಕ್ಕವನಿರುವಾಗ ಗೌರಿ ಹಬ್ಬದ ದಿನದಂದು ನನ್ನ ತಂದೆಯು ಇಂಥದ್ದೇ ಕಾರು ಅಪಘಾತದಲ್ಲಿ ನಿಧನರಾದರು. ಅದನ್ನು ಮಾಡಿದ್ದು ಯಾರು ಎನ್ನುವುದು ಈವರೆಗೂ ನಮಗೆ ಗೊತ್ತಿಲ್ಲ. ಅಪಘಾತ ಮಾಡಿದ ನಂತರ ಯಾರೂ ಓಡಿ ಹೋಗಬೇಡಿ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ. ನನ್ನ ತಂದೆಯ ಘಟನೆಯಿಂದ ನಾನು ಕಲಿತದ್ದು ಇದನ್ನೇ’ ಎಂದು ತಿಳಿಸಿದರು.

accident victiom prema

‘ಘಟನೆಯ ಬಗ್ಗೆ ಹೆಚ್ಚಿನ ವಿವರ ಹೇಳಿದರೆ ತಪ್ಪಾಗುತ್ತದೆ. ಯಾಕೆಂದರೆ ಅದು ತನಿಖಾ ಹಂತದಲ್ಲಿ ಇದೆ. ಪೊಲೀಸ್‌ನವರು ಯಾವಾಗ ಕರೆದರೂ ನಾನು ಹೋಗುವೆ. ತನಿಖಾಧಿಕಾರಿಗಳಿಗೆ ಸಹಕರಿಸುವೆ. ಈಗಾಗಲೇ ವಿಚಾರಣೆಗೆ ಹೋಗಿಯೂ ಬಂದಿರುವುದಾಗಿ ನಾಗಭೂಷಣ್ ತಿಳಿಸಿದರು. ಇನ್ನೂ ಆ ಘಟನೆಯ ನೋವಿನಿಂದ ಆಚೆ ಬರುವುದಕ್ಕೆ ಸಾಧ್ಯವಾಗಿಲ್ಲ. ಮಾನಸಿಕವಾಗಿ ಕುಗ್ಗಿದ್ದೇನೆ’ ಎಂದು ನಟ ನಾಗಭೂಷಣ್ ತಿಳಿಸಿದ್ದಾರೆ.

ಕಳೆದ ಸೆ.30ರಂದು ನಾಗಭೂಷಣ್ ಅವರು ಚಲಾಯಿಸುತ್ತಿದ್ದ ಕಾರು ಬೆಂಗಳೂರಿನ ಉತ್ತರಹಳ್ಳಿಯ ವಸಂತ ನಗರ ಮುಖ್ಯ ರಸ್ತೆಯಲ್ಲಿ ಅಪಘಾತವಾಗಿತ್ತು. ಘಟನೆಯಲ್ಲಿ ಎಸ್ ಪ್ರೇಮಾ(48) ಎಂಬವರು ಮೃತಪಟ್ಟಿದ್ದರೆ, ಅವರ ಪತಿ ಬಿ ಕೃಷ್ಣ ಗಂಭೀರವಾಗಿ ಗಾಯಗೊಂಡಿದ್ದರು. ಅವರಿನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...