ಒಪ್ಪಿಗೆಯಿಲ್ಲದೆ ಹಾಡು ಬಳಕೆ: ‘ಮಂಜುಮ್ಮೆಲ್ ಬಾಯ್ಸ್’ ನಿರ್ಮಾಪಕರಿಗೆ ಇಳಯರಾಜ ನೋಟಿಸ್

Date:

ಇತ್ತೀಚಿಗೆ ಮಲಯಾಳಂನಲ್ಲಿ ಸೂಪರ್‌ ಡೂಪರ್‌ ಹಿಟ್‌ ಆಗಿದ್ದ ‘ಮಂಜುಮ್ಮೆಲ್ ಬಾಯ್ಸ್’ ಸಿನಿಮಾ ನಿರ್ಮಾಪಕರಿಗೆ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ತಮ್ಮ ಅನುಮತಿಯಿಲ್ಲದೆ “ಕಣ್ಮಣಿ ಅನ್‌ಬೊದು ಕಾದಲನ್‌” ಹಾಡು ಬಳಕೆ ಮಾಡಿಕೊಂಡಿದಕ್ಕೆ ಲೀಗಲ್‌ ನೋಟಿಸ್ ನೀಡಿದ್ದಾರೆ.

‘ಮಂಜುಮ್ಮೆಲ್ ಬಾಯ್ಸ್’ ಸಿನಿಮಾದಲ್ಲಿ ಬಳಸಿಕೊಂಡಿರುವ “ಕಣ್ಮಣಿ ಅನ್‌ಬೊದು ಕಾದಲನ್‌” ಹಾಡು ಇಳಯರಾಜ ಸಂಗೀತ ನಿರ್ದೇಶನದ ‘ಗುಣ’ ಸಿನಿಮಾದ್ದಾಗಿದೆ.

ನೋಟಿಸ್‌ಅನ್ನು ನಿರ್ಮಾಪಕರಾದ ಸೌಬಿನ್ ಶಾಹೀರ್, ಬಾಬು ಶಾಹೀರ್ ಹಾಗೂ ಶ್ವಾನ್ ಆಂಟೊನಿ ಅವರಿಗೂ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೀವು ನಿಮ್ಮ ಸಿನಿಮಾದಲ್ಲಿ ಬಳಸಿಕೊಂಡಿರುವ ಹಾಡು/ಸಂಗೀತವನ್ನು ನಮ್ಮ ಕಕ್ಷೀದಾರರ ಸೂಕ್ತ ಅನುಮತಿ/ ಒಪ್ಪಿಗೆ/ಪರವಾನಗಿ ಇಲ್ಲದೆ ಪಡೆದುಕೊಂಡಿದ್ದೀರಿ. ಬಳಸಲಾದ ಹಾಡನ್ನು ರದ್ದುಗೊಳಿಸುವುದರ ಜೊತೆ 15 ದಿನಗಳ ಒಳಗಾಗಿ ಪರಿಹಾರವನ್ನು ನೀಡಬೇಕು” ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯುಪಿ-ಬಿಹಾರದಲ್ಲಿ ಧೂಳೆಬ್ಬಿಸಿದೆ ʼಖಟಾಖಟ್ ಖಟಾಖಟ್ʼ ಮಹಾಲಕ್ಷ್ಮೀ ಯೋಜನೆ

ಈ ನೋಟಿಸ್‌ಗೆ ಉತ್ತರ ನೀಡಲು ವಿಫಲವಾದಲ್ಲಿ ನಷ್ಟ ಉಂಟು ಮಾಡಿರುವ ಪರಿಣಾಮವಾಗಿ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಕಾಪಿರೈಟ್‌ ನಿಯಮ 1957ರ ಅಡಿಯಲ್ಲಿ ಉದ್ದೇಶಪೂರ್ವಕವಾಗಿ ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ ನಿರ್ಮಾಪಕರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ಹೂಡಲಾಗುವುದು ಎಂದು ಕೂಡ ಹೇಳಲಾಗಿದೆ.

ಚಿದಂಬರಂ ನಿರ್ದೇಶನದ ‘ಮಂಜುಮ್ಮೆಲ್ ಬಾಯ್ಸ್’ ಚಿತ್ರ ಫೆ.22 ರಂದು ಬಿಡುಗಡೆಯಾಗಿದ್ದು, ಸಾಧಾರಣ ಬಜೆಟಿನ ಈ ಚಿತ್ರ 200 ಕೋಟಿಗೂ ಅಧಿಕ ಗಳಿಕೆ ಮಾಡಿತ್ತು. ನಿರ್ಮಾಪಕರಾದ ಸೌಬಿನ್ ಶಾಹೀರ್ ಕೂಡ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...