ʼದಹಾಡ್‌ʼ ವೆಬ್‌ ಸರಣಿಗೆ ಹಂತಕ ಸೈನೇಡ್ ಮೋಹನ್‌ ಕಥೆ ಸ್ಫೂರ್ತಿಯೇ?

Date:

  • ಸೈನೇಡ್ ಮೋಹನ್‌ ಕುಕೃತ್ಯಗಳನ್ನು ಹೋಲುವ ʼದಹಾಡ್‌ʼ ಕಥನ
  • ಹೋಲಿಕೆಯ ಕಾರಣಕ್ಕೇ ಹೆಚ್ಚು ಸದ್ದು ಮಾಡುತ್ತಿರುವ ʼದಹಾಡ್‌ʼ ಸರಣಿ

ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಹಂತಕ ʼಸೈನೇಡ್ ಮೋಹನ್‌ʼ ಹೆಸರು ಭಾರೀ ಚರ್ಚೆಯಲ್ಲಿದೆ. ದಶಕದ ಹಿಂದೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಈ ನರಹಂತಕನ ಕುಕೃತ್ಯಗಳನ್ನು ಆಧರಿಸಿ ಇತ್ತೀಚೆಗೆ ಹಿಂದಿಯಲ್ಲಿ ʼದಹಾಡ್‌ʼ ಹೆಸರಿನ ವೆಬ್‌ ಸರಣಿ ಬಿಡುಗಡೆಯಾಗಿದೆ. ಆದರೆ, ಕರ್ನಾಟಕ ಮೂಲದ ʼಸೈನೇಡ್ ಮೋಹನ್‌ʼ ಕಥೆಯನ್ನು ಈ ಸರಣಿಯಲ್ಲಿ ರಾಜಸ್ತಾನದ್ದು ಎಂಬಂತೆ ಬಿಂಬಿಸಲಾಗಿದೆ.

ದಹಾಡ್‌ ವೆಬ್‌ ಸರಣಿ

ʼಕಾಲೇಜು ಪ್ರೊಫೆಸರ್‌ ಆನಂದ್‌ ಎಂಬಾತ ಅಮಾಯಕ ಮಹಿಳೆಯರನ್ನು ಮದುವೆಯಾಗುವುದಾಗಿ ನಂಬಿಸಿ, ಅವರೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿ, ಕೊನೆಗೆ ಆ ಮಹಿಳೆಯರು ಗರ್ಭ ಧರಿಸಿದಾಗ ಸೈನೇಡ್ ಲೇಪಿತ ಗರ್ಭನಿರೋಧಕ ಮಾತ್ರೆಗಳನ್ನು ನೀಡಿ ಅವರನ್ನು ಕೊಲ್ಲುತ್ತಾನೆ. ಮೇಲ್ನೋಟಕ್ಕೆ ಆತ್ಮಹತ್ಯೆ ಎನ್ನಿಸಿದರೂ ಅನುಮಾನ ಹುಟ್ಟಿಸುವ ಈ ಸರಣಿ ಸಾವಿನ ಪ್ರಕರಣಗಳನ್ನು ಮಹಿಳಾ ಪೊಲೀಸ್‌ ಅಧಿಕಾರಿಯೊಬ್ಬರು ಹೇಗೆ ಭೇದಿಸುತ್ತಾರೆ ಎಂಬುದರ ಸುತ್ತ ಈ ವೆಬ್‌ ಸರಣಿ ಮೂಡಿಬಂದಿದೆ. ಇಡೀ ವೆಬ್‌ ಸರಣಿಯ ಕಥೆ ರಾಜಸ್ತಾನದ ಗ್ರಾಮೀಣ ಪ್ರದೇಶದಲ್ಲಿ ನಡೆಯುವಂಥದ್ದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೈನೇಡ್ ಮೋಹನ್‌ ಕಥೆ

ʼದಹಾಡ್‌ʼ ವೆಬ್‌ ಸರಣಿಯನ್ನು ನೋಡಿದ ಪ್ರತಿಯೊಬ್ಬರು ಇದು ಕಾಮುಕ, ನರಹಂತಕ ಸೈನೇಡ್ ಮೋಹನನ ಕಥೆ ಎಂದೇ ಹೇಳುತ್ತಿದ್ದಾರೆ. ಕರ್ನಾಟಕದ ಕರಾವಳಿ ಮೂಲದ ಮೋಹನ್‌ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕನಾಗಿದ್ದ. ಅಮಾಯಕ ಮಹಿಳೆಯರನ್ನು ಮದುವೆಯಾಗುವುದಾಗಿ ನಂಬಿಸಿ ಅವರೊಂದಿಗೆ ಲೈಂಗಿಕ ಸಂಪರ್ಕ ಸಾಧಿಸುತ್ತಿದ್ದ ಈತ, ಆ ಮಹಿಳೆಯರು ಗರ್ಭ ಧರಿಸುತ್ತಲೇ ಸೈನೇಡ್ ಲೇಪಿತ ಗರ್ಭ ನಿರೋಧಕ ಮಾತ್ರೆಗಳನ್ನು ನೀಡುತ್ತಿದ್ದ. ಗೌಪ್ಯತೆಯ ಕಾರಣಕ್ಕೆ ಸಾರ್ವಜನಿಕ ಶೌಚಾಲಯಗಳಲ್ಲಿ ಆ ಮಾತ್ರೆಗಳನ್ನು ಸೇವಿಸುತ್ತಿದ್ದ ಮಹಿಳೆಯರು ಕೊನೆಗೆ ಅದೇ ಶೌಚಾಲಯಗಳಲ್ಲಿ ಶವವಾಗಿ ಪತ್ತೆಯಾಗುತ್ತಿದ್ದರು. ಈ ರೀತಿ ಪ್ರತಿ ಮಹಿಳೆಯ ಶವ ಪತ್ತೆಯಾದಾಗಲೂ ಮೇಲ್ನೋಟಕ್ಕೆ ಆತ್ಮಹತ್ಯೆ ಎಂದೇ ಶಂಕೆ ವ್ಯಕ್ತವಾಗುತ್ತಿತ್ತು. ಆದರೆ, ಈ ಸರಣಿ ಕೊಲೆಗಳು ಆಕಸ್ಮಿಕವಲ್ಲ ಎಂದು ಅರಿತ ಪೊಲೀಸರು ತನಿಖೆ ನಡೆಸಿ 20 ಮಹಿಳೆಯರನ್ನು ಬಲಿ ಪಡೆದಿದ್ದ ಸೈನೇಡ್ ಮೋಹನನನ್ನು ಬಂಧಿಸುವಲ್ಲಿ ಯಶಸ್ವಿಯಾದರು. ನ್ಯಾಯಾಲಯದಲ್ಲಿ ಈತನ ಮೇಲಿನ ಎಲ್ಲ ಆಪಾದನೆಗಳು ಸಾಬೀತಾಗಿ ಸದ್ಯ ಮರಣ ದಂಡನೆ ಶಿಕ್ಷೆ ಅನುಭವಿಸುತ್ತಿದ್ದಾನೆ.

ʼದಹಾಡ್‌ʼ ವೆಬ್‌ ಸರಣಿ ʼಸೈನೇಡ್ ಮೋಹನ್‌ʼನ ಕುತೃತ್ಯಗಳ ಕಥೆಯನ್ನೇ ಹೋಲುವಂತಿದೆ. ಆದರೆ, ಇಡೀ ಕಥೆಯನ್ನು ರಾಜಸ್ತಾನದಲ್ಲಿ ನಡೆದದ್ದು ಎಂಬಂತೆ ತೋರಿಸಲಾಗಿದೆ. ಜೋಯಾ ಅಖ್ತರ್‌ ಈ ಸರಣಿಯ ಕಥೆಯನ್ನು ರಚಿಸಿದ್ದು, ಬಾಲಿವುಡ್‌ನ ಖ್ಯಾತ ನಿರ್ದೇಶಕಿ ರೀಮಾ ಕಾಗ್ತಿ ಮತ್ತು ರುಚಿಕಾ ಒಬೆರಾಯ್‌ ಜಂಟಿಯಾಗಿ ನಿರ್ದೇಶಿಸಿದ್ದಾರೆ. ವಿಜಯ್‌ ವರ್ಮಾ ಸರಣಿ ಹಂತಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಬಾಲಿವುಡ್‌ನ ಖ್ಯಾತ ನಟಿ ಸೋನಾಕ್ಷಿ ಸಿನ್ಹಾ ಮಹಿಳಾ ಪೊಲೀಸ್‌ ಅಧಿಕಾರಿಯ ಪಾತ್ರದಲ್ಲಿ ಮಿಂಚಿದ್ದಾರೆ. ಕನ್ನಡಿಗ ಗುಲ್ಷನ್‌ ದೇವಯ್ಯ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ʼದಹಾಡ್‌ʼ ಚಿತ್ರಕಥೆಯ ಬಗ್ಗೆ ಹೋಲಿಕೆಯ ಮಾತುಗಳು ಕೇಳಿ ಬರುತ್ತಿವೆಯಾದರೂ ಚಿತ್ರತಂಡ ಮಾತ್ರ, ಕಾಲ್ಪನಿಕ ಕತೆ ಎಂದು ಹೇಳಿ, ಈ ಬಗ್ಗೆ ಯಾವುದೇ ಸ್ಪಷ್ಟನೆ ನೀಡದೆ ಸುಮ್ಮನಾಗಿದೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...